ಮೈಸೂರು

ಮಕ್ಕಳ ಬಹುರೂಪಿ ಬೆಳೆಯಲಿ: ನಟ ಪ್ರಕಾಶ್‌ ರಾಜ್‌

ಮೈಸೂರು: ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಅಷ್ಟೇ ರಂಗಭೂಮಿಯು ಸಹ ಮುಖ್ಯ. ಮಕ್ಕಳ ಬಹುರೂಪಿ ಎಂಬುದು ನಿಜವಾಗಿಯೂ ಒಂದು ಪ್ರಮುಖ ಆಯಾಮವಾಗಿದೆ. ಮಕ್ಕಳ ರೂಪದಲ್ಲಿ ಆರಂಭ ಮಾಡುತ್ತಿರುವುದು ಒಂದು ಆರೋಗ್ಯಕರವಂತಹ ಬೆಳವಣಿಗೆ ಚಿತ್ರ ನಟ ಪ್ರಕಾಶ್ ರಾಜ್ ಹೇಳಿದರು.

ಮೈಸೂರು ರಂಗಾಯಣದ ವತಿಯಿಂದ ಕರ್ನಾಟಕ ಕಲಾಮಂದಿರದಲ್ಲಿ ಮಕ್ಕಳ ಬಹುರೂಪಿ ನಾಟಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಮಕ್ಕಳು ಎಂಬುದು ಒಂದು ಭಾಗ. ನಾವೆಲ್ಲ ಮಕ್ಕಳನ್ನು ಭವಿಷ್ಯಕ್ಕಾಗಿ ರೂಪಿಸಬಾರದು ಇವತ್ತಿಗೂ ಸಹ ಮಕ್ಕಳಿಗೆ ಅವರದೇ ಆದಂತಹ ಪ್ರಪಂಚ ಎಂಬುದು ಇದೆ. ಅದು ಹಸಿರಿನ ಪ್ರಪಂಚ, ಕುತೂಹಲದ ಪ್ರಪಂಚ ಜೊತೆಗೆ ತನ್ನನ್ನು ತಾನು ರೂಪಿಸಿಕೊಳ್ಳುವಂತಹ ಪ್ರಪಂಚ ಇದೆ. ಮಕ್ಕಳನ್ನು ನಾವು ಬೆಳೆಸಬೇಕಾಗಿಲ್ಲ ಬೆಳೆಯುತ್ತಿರುವಂತಹ ಮಕ್ಕಳನ್ನು ನಾವು ಸೂಕ್ಷ್ಮ ಗೊಳಿಸಬೇಕು ಎಂದು ಹೇಳಿದರು.

ಮನೆಯಲ್ಲೇ ಒಂದು ಅದ್ಭುತವಾದ ಕಲಿಕೆ ಇದ್ದರೂ ಸಹ ಶಾಲೆಯಿಂದ ಬಂದಂತ ಮಕ್ಕಳನ್ನ ನಂತರ ಟ್ಯೂಷನ್ ಹಾಕಿ ಅವರಿಗೆ ಒತ್ತಡ ವಾಗುವಂತಹ ರೀತಿಯಲ್ಲಿ ನಾವು ತೊಡಗಿಸುತ್ತಿದ್ದೇವೆ. ಮಕ್ಕಳ ಬಗ್ಗೆ ಪೋಷಕರು ಸಹ ಯೋಚನೆ ಮಾಡಬೇಕು ಅವರ ಬಗ್ಗೆ ಗಮನ ಕೊಡಬೇಕು ಎಂದು ತಿಳಿಸಿದರು.

ಮಕ್ಕಳನ್ನು ನಾವು ಒಂದು ಸಮುದಾಯದ ಒಳಗೆ ಬೆಳೆಸಿದರೆ ಮಕ್ಕಳು ಮೌನವಾಗಿ ಇದ್ದು ಬಿಡುತ್ತಾರೆ. ನಾವು ಎಳೆ ಮನಸ್ಸಿಗೆ ಬೇಕಾದಂತಹ ಕುತೂಹಲಕಾರಿ ಶಕ್ತಿಯನ್ನು ನೀಡಬೇಕು. ಮಕ್ಕಳನ್ನು ಹಾರುವುದಕ್ಕೆ ಬಿಡುವುದಕ್ಕೆ ನಾವು ಆರು ದಿಗಂತಗಳನ್ನು ಬಳಸುತ್ತಿದ್ದೇವೆ ಅದನ್ನು ಮಾಡುವುದು ತಪ್ಪು. ಈ ನಿಟ್ಟಿನಲ್ಲಾದರೂ ನಾವು ಒಂದು ಆರೋಗ್ಯಕರವಾದಂತಹ ಸಮಾಜವನ್ನು ಕಟ್ಟಲಿಕ್ಕೆ ಸಹಾಯವಾಗುತ್ತದೆ ಈಗಲಾದರೂ ನಾವು ಎಚ್ಚೆತ್ತುಕೊಂಡು ಮಕ್ಕಳೊಂದಿಗೆ ಮಕ್ಕಳಾಗಿ ಮಕ್ಕಳ ಭಾಷೆ, ಮಾತು, ನೋಟ, ಕುತೂಹಲವನ್ನು ನಾವು ಆಲಿಸಬೇಕು ಎಂದು ಹೇಳಿದರು.

ಈ ಮಕ್ಕಳ ಬಹುರೂಪಿ ಎಂಬುದು ನಿಜವಾಗಿಯೂ ಒಂದು ಪ್ರಮುಖ ಆಯಾಮವಾಗಿದೆ ಇದನ್ನ ನಾವು ಬೆಳೆಸುತ್ತಾ ಮುಂದೇನು ಬೆಳೆಸೋಣ ಎಂದು ತಿಳಿಸಿದರು.

ಸಮಾರಂಭದಲ್ಲಿ ಮೈಸೂರು ರಂಗಾಯಣದ ನಿರ್ದೇಶಕರಾದ ಸತೀಶ್ ತಿಪಟೂರು, ಮೈಸೂರು ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್ ಮಲ್ಲಿಕಾರ್ಜುನಸ್ವಾಮಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಜವರೇಗೌಡ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ ಡಿ ಸುದರ್ಶನ್ ಅವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

21 seconds ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

29 mins ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

5 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

5 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

5 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

5 hours ago