ಮೈಸೂರು

ಮಕ್ಕಳ ಬಹುರೂಪಿ ಬೆಳೆಯಲಿ: ನಟ ಪ್ರಕಾಶ್‌ ರಾಜ್‌

ಮೈಸೂರು: ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಅಷ್ಟೇ ರಂಗಭೂಮಿಯು ಸಹ ಮುಖ್ಯ. ಮಕ್ಕಳ ಬಹುರೂಪಿ ಎಂಬುದು ನಿಜವಾಗಿಯೂ ಒಂದು ಪ್ರಮುಖ ಆಯಾಮವಾಗಿದೆ. ಮಕ್ಕಳ ರೂಪದಲ್ಲಿ ಆರಂಭ ಮಾಡುತ್ತಿರುವುದು ಒಂದು ಆರೋಗ್ಯಕರವಂತಹ ಬೆಳವಣಿಗೆ ಚಿತ್ರ ನಟ ಪ್ರಕಾಶ್ ರಾಜ್ ಹೇಳಿದರು.

ಮೈಸೂರು ರಂಗಾಯಣದ ವತಿಯಿಂದ ಕರ್ನಾಟಕ ಕಲಾಮಂದಿರದಲ್ಲಿ ಮಕ್ಕಳ ಬಹುರೂಪಿ ನಾಟಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಮಕ್ಕಳು ಎಂಬುದು ಒಂದು ಭಾಗ. ನಾವೆಲ್ಲ ಮಕ್ಕಳನ್ನು ಭವಿಷ್ಯಕ್ಕಾಗಿ ರೂಪಿಸಬಾರದು ಇವತ್ತಿಗೂ ಸಹ ಮಕ್ಕಳಿಗೆ ಅವರದೇ ಆದಂತಹ ಪ್ರಪಂಚ ಎಂಬುದು ಇದೆ. ಅದು ಹಸಿರಿನ ಪ್ರಪಂಚ, ಕುತೂಹಲದ ಪ್ರಪಂಚ ಜೊತೆಗೆ ತನ್ನನ್ನು ತಾನು ರೂಪಿಸಿಕೊಳ್ಳುವಂತಹ ಪ್ರಪಂಚ ಇದೆ. ಮಕ್ಕಳನ್ನು ನಾವು ಬೆಳೆಸಬೇಕಾಗಿಲ್ಲ ಬೆಳೆಯುತ್ತಿರುವಂತಹ ಮಕ್ಕಳನ್ನು ನಾವು ಸೂಕ್ಷ್ಮ ಗೊಳಿಸಬೇಕು ಎಂದು ಹೇಳಿದರು.

ಮನೆಯಲ್ಲೇ ಒಂದು ಅದ್ಭುತವಾದ ಕಲಿಕೆ ಇದ್ದರೂ ಸಹ ಶಾಲೆಯಿಂದ ಬಂದಂತ ಮಕ್ಕಳನ್ನ ನಂತರ ಟ್ಯೂಷನ್ ಹಾಕಿ ಅವರಿಗೆ ಒತ್ತಡ ವಾಗುವಂತಹ ರೀತಿಯಲ್ಲಿ ನಾವು ತೊಡಗಿಸುತ್ತಿದ್ದೇವೆ. ಮಕ್ಕಳ ಬಗ್ಗೆ ಪೋಷಕರು ಸಹ ಯೋಚನೆ ಮಾಡಬೇಕು ಅವರ ಬಗ್ಗೆ ಗಮನ ಕೊಡಬೇಕು ಎಂದು ತಿಳಿಸಿದರು.

ಮಕ್ಕಳನ್ನು ನಾವು ಒಂದು ಸಮುದಾಯದ ಒಳಗೆ ಬೆಳೆಸಿದರೆ ಮಕ್ಕಳು ಮೌನವಾಗಿ ಇದ್ದು ಬಿಡುತ್ತಾರೆ. ನಾವು ಎಳೆ ಮನಸ್ಸಿಗೆ ಬೇಕಾದಂತಹ ಕುತೂಹಲಕಾರಿ ಶಕ್ತಿಯನ್ನು ನೀಡಬೇಕು. ಮಕ್ಕಳನ್ನು ಹಾರುವುದಕ್ಕೆ ಬಿಡುವುದಕ್ಕೆ ನಾವು ಆರು ದಿಗಂತಗಳನ್ನು ಬಳಸುತ್ತಿದ್ದೇವೆ ಅದನ್ನು ಮಾಡುವುದು ತಪ್ಪು. ಈ ನಿಟ್ಟಿನಲ್ಲಾದರೂ ನಾವು ಒಂದು ಆರೋಗ್ಯಕರವಾದಂತಹ ಸಮಾಜವನ್ನು ಕಟ್ಟಲಿಕ್ಕೆ ಸಹಾಯವಾಗುತ್ತದೆ ಈಗಲಾದರೂ ನಾವು ಎಚ್ಚೆತ್ತುಕೊಂಡು ಮಕ್ಕಳೊಂದಿಗೆ ಮಕ್ಕಳಾಗಿ ಮಕ್ಕಳ ಭಾಷೆ, ಮಾತು, ನೋಟ, ಕುತೂಹಲವನ್ನು ನಾವು ಆಲಿಸಬೇಕು ಎಂದು ಹೇಳಿದರು.

ಈ ಮಕ್ಕಳ ಬಹುರೂಪಿ ಎಂಬುದು ನಿಜವಾಗಿಯೂ ಒಂದು ಪ್ರಮುಖ ಆಯಾಮವಾಗಿದೆ ಇದನ್ನ ನಾವು ಬೆಳೆಸುತ್ತಾ ಮುಂದೇನು ಬೆಳೆಸೋಣ ಎಂದು ತಿಳಿಸಿದರು.

ಸಮಾರಂಭದಲ್ಲಿ ಮೈಸೂರು ರಂಗಾಯಣದ ನಿರ್ದೇಶಕರಾದ ಸತೀಶ್ ತಿಪಟೂರು, ಮೈಸೂರು ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್ ಮಲ್ಲಿಕಾರ್ಜುನಸ್ವಾಮಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಜವರೇಗೌಡ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ ಡಿ ಸುದರ್ಶನ್ ಅವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

2 hours ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

2 hours ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 29 ಬುಧವಾರ

3 hours ago

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

17 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

17 hours ago