ಮೈಸೂರು: ರಸ್ತೆ ಖಾಲಿಯಿದೆ ಅಂತಾ ನೀವೇನಾದರೂ ಗಂಟೆಗೆ 130ಕ್ಕಿಂತ ಹೆಚ್ಚು ವೇಗವಾಗಿ ವಾಹನ ಚಲಾಯಿಸುತ್ತೀರಾ? ಹಾಗಾದರೆ ನಿಮ್ಮ ಓವರ್ ಸ್ಪೀಡ್ ಕಡಿಮೆ ಮಾಡಿಕೊಳ್ಳಿ. ಇಲ್ಲಂದ್ರೆ ಪೊಲೀಸರು ನಿಮ್ಮ ಮೇಲೆ ಎಫ್ಐಆರ್ ದಾಖಲಿಸುವುದಂತೂ ಗ್ಯಾರಂಟಿ.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹೆದ್ದಾರಿಗಳಲ್ಲಿ ನಿಗದಿಕ್ಕಿಂತ ಹೆಚ್ಚು ವೇಗವಾಗಿ ವಾಹನ ಚಾಲನೆ ಕಂಡು ಬಂದರೆ ಅಂತಹ ಚಾಲಕರ ವಿರುದ್ಧ ಎಫ್ಐಆರ್ ದಾಖಲಿಸಿಲಾಗುವುದು ಎಂದು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಮಾಹಿತಿ ನೀಡಿರುವ ಅವರು, ಕರ್ನಾಟಕದಲ್ಲಿ ಎಲ್ಲಿಯಾದರೂ ಗಂಟೆಗೆ 130 ಕಿಮೀ ವೇಗದಲ್ಲಿ ಚಾಲನೆ ಮಾಡುವವರ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು. ದುಡುಕಿನ ಮತ್ತು ಅಪಾಯಕಾರಿ ಚಾಲನೆ ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಆಗಸ್ಟ್ 1 ರಿಂದ ಈ ನಿಯಮ ಜಾರಿ ಬರಲಿದೆ. ಶೇ.90 ರಷ್ಟು ಮಾರಣಾಂತಿಕ ಅಪಘಾತಗಳಿಗೆ ಅತಿ ವೇಗವು ಕಾರಣವಾಗುತ್ತಿದೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ತಪಾಸಣೆ ನಡೆಸಿದಾಗ ಗುರುವಾರ(ಜು.25) ಒಂದೇ ದಿನ 155 ಮಂದಿ ಚಾಲಕರು 130ಕ್ಕಿಂತ ಹೆಚ್ಚು ವೇಗವಾಗಿ ವಾಹನ ಚಾಲನೆ ಮಾಡಿರುವುದು ಕಂಡು ಬಂದಿದೆ. ಇದರಿಂದ ಸಾವು-ನೋವುಗಳ ಸಂಖ್ಯೆ ಅಧಿಕವಾಗುತ್ತಿವೆ ಎಂದಿದ್ದಾರೆ.
ಇನ್ನೂ ಸ್ಪಾಟ್ ಮತ್ತು ಸೆಕ್ಷನಲ್ ಸ್ಪೀಡ್ ಬಗ್ಗೆ ಮಾಹಿತಿ ನೀಡಿರುವ ಅವರು, ಓವರ್ ಸ್ಪೀಡಿಂಗ್ನ್ನು ಸಾಮಾನ್ಯವಾಗಿ ಕ್ಯಾಮೆರಾ ಪಾಯಿಂಟ್ ಬಳಿ ಸ್ಪಾಟ್ ಸ್ಪೀಡ್ ಎಂದು ಅಳೆಯಲಾಗುತ್ತದೆ. ವಿಭಾಗೀಯ ವೇಗವು ಎರಡು ಕ್ಯಾಮೆರಾ ಬಿಂದುಗಳ ನಡುವಿನ ಸರಾಸರಿ ವೇಗವಾಗಿದೆ. ಬೇರೆಡೆ ವೇಗವಾಗಿ ಓಡಿಸಿ ಕ್ಯಾಮರಾಗಳ ಬಳಿ ಚಾಲಕ ವೇಗ ಕಡಿಮೆ ಮಾಡಿದೂ ಕೇಸ್ ಬುಕ್ ಆಗುತ್ತದೆ ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ…