ಮೈಸೂರು: ರಸ್ತೆ ಖಾಲಿಯಿದೆ ಅಂತಾ ನೀವೇನಾದರೂ ಗಂಟೆಗೆ 130ಕ್ಕಿಂತ ಹೆಚ್ಚು ವೇಗವಾಗಿ ವಾಹನ ಚಲಾಯಿಸುತ್ತೀರಾ? ಹಾಗಾದರೆ ನಿಮ್ಮ ಓವರ್ ಸ್ಪೀಡ್ ಕಡಿಮೆ ಮಾಡಿಕೊಳ್ಳಿ. ಇಲ್ಲಂದ್ರೆ ಪೊಲೀಸರು ನಿಮ್ಮ ಮೇಲೆ ಎಫ್ಐಆರ್ ದಾಖಲಿಸುವುದಂತೂ ಗ್ಯಾರಂಟಿ.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹೆದ್ದಾರಿಗಳಲ್ಲಿ ನಿಗದಿಕ್ಕಿಂತ ಹೆಚ್ಚು ವೇಗವಾಗಿ ವಾಹನ ಚಾಲನೆ ಕಂಡು ಬಂದರೆ ಅಂತಹ ಚಾಲಕರ ವಿರುದ್ಧ ಎಫ್ಐಆರ್ ದಾಖಲಿಸಿಲಾಗುವುದು ಎಂದು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಮಾಹಿತಿ ನೀಡಿರುವ ಅವರು, ಕರ್ನಾಟಕದಲ್ಲಿ ಎಲ್ಲಿಯಾದರೂ ಗಂಟೆಗೆ 130 ಕಿಮೀ ವೇಗದಲ್ಲಿ ಚಾಲನೆ ಮಾಡುವವರ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು. ದುಡುಕಿನ ಮತ್ತು ಅಪಾಯಕಾರಿ ಚಾಲನೆ ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಆಗಸ್ಟ್ 1 ರಿಂದ ಈ ನಿಯಮ ಜಾರಿ ಬರಲಿದೆ. ಶೇ.90 ರಷ್ಟು ಮಾರಣಾಂತಿಕ ಅಪಘಾತಗಳಿಗೆ ಅತಿ ವೇಗವು ಕಾರಣವಾಗುತ್ತಿದೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ತಪಾಸಣೆ ನಡೆಸಿದಾಗ ಗುರುವಾರ(ಜು.25) ಒಂದೇ ದಿನ 155 ಮಂದಿ ಚಾಲಕರು 130ಕ್ಕಿಂತ ಹೆಚ್ಚು ವೇಗವಾಗಿ ವಾಹನ ಚಾಲನೆ ಮಾಡಿರುವುದು ಕಂಡು ಬಂದಿದೆ. ಇದರಿಂದ ಸಾವು-ನೋವುಗಳ ಸಂಖ್ಯೆ ಅಧಿಕವಾಗುತ್ತಿವೆ ಎಂದಿದ್ದಾರೆ.
ಇನ್ನೂ ಸ್ಪಾಟ್ ಮತ್ತು ಸೆಕ್ಷನಲ್ ಸ್ಪೀಡ್ ಬಗ್ಗೆ ಮಾಹಿತಿ ನೀಡಿರುವ ಅವರು, ಓವರ್ ಸ್ಪೀಡಿಂಗ್ನ್ನು ಸಾಮಾನ್ಯವಾಗಿ ಕ್ಯಾಮೆರಾ ಪಾಯಿಂಟ್ ಬಳಿ ಸ್ಪಾಟ್ ಸ್ಪೀಡ್ ಎಂದು ಅಳೆಯಲಾಗುತ್ತದೆ. ವಿಭಾಗೀಯ ವೇಗವು ಎರಡು ಕ್ಯಾಮೆರಾ ಬಿಂದುಗಳ ನಡುವಿನ ಸರಾಸರಿ ವೇಗವಾಗಿದೆ. ಬೇರೆಡೆ ವೇಗವಾಗಿ ಓಡಿಸಿ ಕ್ಯಾಮರಾಗಳ ಬಳಿ ಚಾಲಕ ವೇಗ ಕಡಿಮೆ ಮಾಡಿದೂ ಕೇಸ್ ಬುಕ್ ಆಗುತ್ತದೆ ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…