ಮೈಸೂರು

ಸ್ತ್ರೀಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ: ಸುಧಾ ಫಣೀಶ್

ಮೈಸೂರು: ಸ್ತ್ರೀ ಕುಟುಂಬದ ಆಧಾರಸ್ಥಂಭವಾಗಿದ್ದು, ಆಕೆ ಬೇರೆಯವರ ಜವಾಬ್ದಾರಿ ಜೊತೆಗೆ ತನ್ನ ಸ್ವಂತ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಸಮರ್ಪಣ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸುಧಾ ಫಣೀಶ್ ಹೇಳಿದರು.

ರಾಮಕೃಷ್ಣನಗರದಲ್ಲಿರುವ ಸುಯೋಗ್‌ ಆಸ್ಪತ್ರೆಯಲ್ಲಿ ಮಂಗಳವಾರ ಸ್ಟ್ರಾಂಗ್‌ ವುಮೆನ್ಸ್ ಹೆಲ್ತ್‌ಕ್ಲಬ್ ವತಿಯಿಂದ ಏರ್ಪಡಿಸಲಾಗಿದ್ದ ಮಹಿಳೆಯರಿಗೆ ಮಾಹಿತಿ ಮತ್ತು ಮನರಂಜನಾ ಕಾರ್ದಯಕ್ರಮದ ಉದ್ಘಾಟನೆ ನೆರವೇರಿಸಿ ಮಾನಾಡಿದರು.

ಗೃಹಕೃತ್ಯ, ಪತಿ, ಮಕ್ಕಳ ಆರೈಕೆಯ ಭರದಲ್ಲಿ ಮಹಿಳೆ ಸ್ವತಃ ತನ್ನ ಆರೋಗ್ಯದ ಬಗ್ಗೆಯೇ ನಿರ್ಲಕ್ಷ ವಹಿಸುತ್ತಿದ್ದು, ಇದು ಆತಂಕಕಾರಿ ಎಂದ ಅವರು, ಮಹಿಳೆೊಂಬ್ಬಳ ಆರೋಗ್ಯ ಇಡೀ ಕುಟುಂಬದ ಮೇಲೆ ಪರಿಣಾಮ ಬೀರುವುದರಿಂದ ಆರೋಗ್ಯದ ವಿಚಾರದಲ್ಲಿ ಆಕೆಗೆ ಆತ್ಮ ವಿಸ್ಮತಿ ಸಲ್ಲದು ಎಂದರು.

ಬೇಸಿಗೆಯ ಬವಣೆಗಳು ಮತ್ತು ಪರಿಹಾರೋಪಾಯಗಳ ಕುರಿತು ಉಪನ್ಯಾಸ ನೀಡಿದ ಸುಯೋಗ್ ಆಸ್ಪತ್ರೆ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ, ಭೂಮಿ ಸೂರ್ಯನ ಸುತ್ತ ಸುತ್ತುವ ಸಂದರ್ಭದಲ್ಲುಂಟಾಗುವ ವಿಸ್ಮಯಕಾರಿ ಕ್ರಿಯೆಗಳೇ ಬೇಸಿಗೆ, ಚಳಿಗಾಲಗಳಾಗಿದೆ ಎಂದರು.

ಸೂರ್ಯನ ಶಾಖ ಭೂಮಿ ತಲುಪಿ ಅದು ವಾಪಸ್ ಹೋಗದಂತೆ ವಾಯು ಮಂಡಲದಲ್ಲಿರುವ ಇಂಗಾಲದ ಡೈ ಆಕ್ಸೈಡ್, ನೈಟ್ರಸ್ ಆಕ್ಸೈಡ್ ಇತ್ಯಾದಿ ಹಸಿರುಮನೆ ಅನಿಲಗಳು ಶಾಖವನ್ನು ಹಿಡಿದಿಟ್ಟುಕೊಂಡು ವಾಯುಮಂಡಲದ ತಾಪವಾನವನ್ನು ನಿಯಂತ್ರಿಸುತ್ತಿದ್ದು, ಈ ಅನಿಲಗಳ ಪ್ರವಾಣ ಹೆಚ್ಚಾದರೆ ಹಾನಿಕಾರಕವೆಂದರು.

ಮಾನವನ ಸ್ವಯಂ ಕೃತ್ಯಗಳಾದ ಅತಿಯಾದ ಪೆಟ್ರೋಲಿಯಂ ಸುಡುವಿಕೆ, ಕಾಡು ನಾಶ, ಕೈಗಾರಿಕೆಗಳ ಹೆಚ್ಚಳ, ಜನಸಂಖ್ಯಾ ಸ್ಪೋಟ, ವಾಯುಮಂಡಲದಲ್ಲಿ ಕಾರ್ಬನ್ ಡೈ ಆಕ್ಸೈಡ್ ಪ್ರಮಾಣ ಹೆಚ್ಚಾಗಿ ಭೂಮಂಡಲದ ತಾಪಮಾನ ಏರಿಕೆಯಾಗುತ್ತಿದ್ದು, ಹೀಗೇ ಮುಂದುವರಿದರೆ ಹಿಮಾಲಯದಲ್ಲಿ ಮಂಜುಗೆಡ್ಡೆ ಆವಿಯಾಗಿ ಕರಗಿ ಪಟ್ಟಣಗಳೇ ನೀರಿನಿಂದ ಮುಳುಗಿ ಹೋಗುವ ಸಂಭವವಿದೆ ಎಂದು ಎಚ್ಚರಿಕೆ ನೀಡಿದರು.

ಅತಿಯಾದ ಬೇಸಿಗೆ ತಾಪವಾನದಿಂದ ದೈಹಿಕವಾಗಿ ನಿಶ್ಯಕ್ತಿ, ಸುಸ್ತು ಸಂಕಟ, ಮೂರ್ಛೆ ತಪ್ಪುವ ಸೂರ್ಯಾಘಾತ, ಕಾಲರಾ, ಟೈಫಾಯಡ್‌, ಚರ್ಮ ಕ್ಯಾನ್ಸರ್ ಮುಂತಾದವು ತಲೆದೋರುವ ಸಂಭವವಿದ್ದು, ಅಧಿಕ ನೀರು ಸೇವನೆ, ತೆಳು ಉಡುಪು ಧಾರಣೆ, ದಿನಕ್ಕೆ ೨ಬಾರಿ ತಣ್ಣೀರ ಸ್ನಾನ, ಶುಚಿತ್ವದ ಆಹಾರ ಸೇವನೆ, ಹಣ್ಣು ಹಂಪಲುಗಳ ಸೇವನೆ ಮುಂತಾದುವುಗಳಿಂದ ಬಿಸಿಲಿನ ದುಷ್ಪರಿಣಾಮಗಳನ್ನು ತಡೆಗಟ್ಟಬಹುದು ಎಂದರು.

ಸುಯೋಗ್ ವುಮೆನ್ಸ್ ಹೆಲ್ತ್‌ಕ್ಲಬ್ ಅಧ್ಯಕ್ಷೆ ಪನ್ನಗ ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕ್ಲಬ್‌ನ ಗೌರವಾಧ್ಯಕ್ಷೆ ಡಾ.ಜಯಲಕ್ಷಿ  ಸೀತಾಪುರ ಉಪಸ್ಥಿತರಿದ್ದರು. ಮಹಿಳೆಯರಿಗಾಗಿ ನಡೆದ ಮನರಂಜನಾ ಚಟುವಟಿಕೆಗಳನ್ನು ಕ್ಲಬ್‌ನ ಕಾರ್ಯದರ್ಶಿ ಗಾಯತ್ರಿ ಸುಂದರೇಶ್ ಹಾಗೂ ಶ್ರೀಮತಿ ಪದ್ಮ ಮಹದೇವ್ ನಡೆಸಿಕೊಟ್ಟರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

27 mins ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

53 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

2 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

3 hours ago