ಮೈಸೂರು

ಸ್ತ್ರೀಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ: ಸುಧಾ ಫಣೀಶ್

ಮೈಸೂರು: ಸ್ತ್ರೀ ಕುಟುಂಬದ ಆಧಾರಸ್ಥಂಭವಾಗಿದ್ದು, ಆಕೆ ಬೇರೆಯವರ ಜವಾಬ್ದಾರಿ ಜೊತೆಗೆ ತನ್ನ ಸ್ವಂತ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಸಮರ್ಪಣ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸುಧಾ ಫಣೀಶ್ ಹೇಳಿದರು.

ರಾಮಕೃಷ್ಣನಗರದಲ್ಲಿರುವ ಸುಯೋಗ್‌ ಆಸ್ಪತ್ರೆಯಲ್ಲಿ ಮಂಗಳವಾರ ಸ್ಟ್ರಾಂಗ್‌ ವುಮೆನ್ಸ್ ಹೆಲ್ತ್‌ಕ್ಲಬ್ ವತಿಯಿಂದ ಏರ್ಪಡಿಸಲಾಗಿದ್ದ ಮಹಿಳೆಯರಿಗೆ ಮಾಹಿತಿ ಮತ್ತು ಮನರಂಜನಾ ಕಾರ್ದಯಕ್ರಮದ ಉದ್ಘಾಟನೆ ನೆರವೇರಿಸಿ ಮಾನಾಡಿದರು.

ಗೃಹಕೃತ್ಯ, ಪತಿ, ಮಕ್ಕಳ ಆರೈಕೆಯ ಭರದಲ್ಲಿ ಮಹಿಳೆ ಸ್ವತಃ ತನ್ನ ಆರೋಗ್ಯದ ಬಗ್ಗೆಯೇ ನಿರ್ಲಕ್ಷ ವಹಿಸುತ್ತಿದ್ದು, ಇದು ಆತಂಕಕಾರಿ ಎಂದ ಅವರು, ಮಹಿಳೆೊಂಬ್ಬಳ ಆರೋಗ್ಯ ಇಡೀ ಕುಟುಂಬದ ಮೇಲೆ ಪರಿಣಾಮ ಬೀರುವುದರಿಂದ ಆರೋಗ್ಯದ ವಿಚಾರದಲ್ಲಿ ಆಕೆಗೆ ಆತ್ಮ ವಿಸ್ಮತಿ ಸಲ್ಲದು ಎಂದರು.

ಬೇಸಿಗೆಯ ಬವಣೆಗಳು ಮತ್ತು ಪರಿಹಾರೋಪಾಯಗಳ ಕುರಿತು ಉಪನ್ಯಾಸ ನೀಡಿದ ಸುಯೋಗ್ ಆಸ್ಪತ್ರೆ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ, ಭೂಮಿ ಸೂರ್ಯನ ಸುತ್ತ ಸುತ್ತುವ ಸಂದರ್ಭದಲ್ಲುಂಟಾಗುವ ವಿಸ್ಮಯಕಾರಿ ಕ್ರಿಯೆಗಳೇ ಬೇಸಿಗೆ, ಚಳಿಗಾಲಗಳಾಗಿದೆ ಎಂದರು.

ಸೂರ್ಯನ ಶಾಖ ಭೂಮಿ ತಲುಪಿ ಅದು ವಾಪಸ್ ಹೋಗದಂತೆ ವಾಯು ಮಂಡಲದಲ್ಲಿರುವ ಇಂಗಾಲದ ಡೈ ಆಕ್ಸೈಡ್, ನೈಟ್ರಸ್ ಆಕ್ಸೈಡ್ ಇತ್ಯಾದಿ ಹಸಿರುಮನೆ ಅನಿಲಗಳು ಶಾಖವನ್ನು ಹಿಡಿದಿಟ್ಟುಕೊಂಡು ವಾಯುಮಂಡಲದ ತಾಪವಾನವನ್ನು ನಿಯಂತ್ರಿಸುತ್ತಿದ್ದು, ಈ ಅನಿಲಗಳ ಪ್ರವಾಣ ಹೆಚ್ಚಾದರೆ ಹಾನಿಕಾರಕವೆಂದರು.

ಮಾನವನ ಸ್ವಯಂ ಕೃತ್ಯಗಳಾದ ಅತಿಯಾದ ಪೆಟ್ರೋಲಿಯಂ ಸುಡುವಿಕೆ, ಕಾಡು ನಾಶ, ಕೈಗಾರಿಕೆಗಳ ಹೆಚ್ಚಳ, ಜನಸಂಖ್ಯಾ ಸ್ಪೋಟ, ವಾಯುಮಂಡಲದಲ್ಲಿ ಕಾರ್ಬನ್ ಡೈ ಆಕ್ಸೈಡ್ ಪ್ರಮಾಣ ಹೆಚ್ಚಾಗಿ ಭೂಮಂಡಲದ ತಾಪಮಾನ ಏರಿಕೆಯಾಗುತ್ತಿದ್ದು, ಹೀಗೇ ಮುಂದುವರಿದರೆ ಹಿಮಾಲಯದಲ್ಲಿ ಮಂಜುಗೆಡ್ಡೆ ಆವಿಯಾಗಿ ಕರಗಿ ಪಟ್ಟಣಗಳೇ ನೀರಿನಿಂದ ಮುಳುಗಿ ಹೋಗುವ ಸಂಭವವಿದೆ ಎಂದು ಎಚ್ಚರಿಕೆ ನೀಡಿದರು.

ಅತಿಯಾದ ಬೇಸಿಗೆ ತಾಪವಾನದಿಂದ ದೈಹಿಕವಾಗಿ ನಿಶ್ಯಕ್ತಿ, ಸುಸ್ತು ಸಂಕಟ, ಮೂರ್ಛೆ ತಪ್ಪುವ ಸೂರ್ಯಾಘಾತ, ಕಾಲರಾ, ಟೈಫಾಯಡ್‌, ಚರ್ಮ ಕ್ಯಾನ್ಸರ್ ಮುಂತಾದವು ತಲೆದೋರುವ ಸಂಭವವಿದ್ದು, ಅಧಿಕ ನೀರು ಸೇವನೆ, ತೆಳು ಉಡುಪು ಧಾರಣೆ, ದಿನಕ್ಕೆ ೨ಬಾರಿ ತಣ್ಣೀರ ಸ್ನಾನ, ಶುಚಿತ್ವದ ಆಹಾರ ಸೇವನೆ, ಹಣ್ಣು ಹಂಪಲುಗಳ ಸೇವನೆ ಮುಂತಾದುವುಗಳಿಂದ ಬಿಸಿಲಿನ ದುಷ್ಪರಿಣಾಮಗಳನ್ನು ತಡೆಗಟ್ಟಬಹುದು ಎಂದರು.

ಸುಯೋಗ್ ವುಮೆನ್ಸ್ ಹೆಲ್ತ್‌ಕ್ಲಬ್ ಅಧ್ಯಕ್ಷೆ ಪನ್ನಗ ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕ್ಲಬ್‌ನ ಗೌರವಾಧ್ಯಕ್ಷೆ ಡಾ.ಜಯಲಕ್ಷಿ  ಸೀತಾಪುರ ಉಪಸ್ಥಿತರಿದ್ದರು. ಮಹಿಳೆಯರಿಗಾಗಿ ನಡೆದ ಮನರಂಜನಾ ಚಟುವಟಿಕೆಗಳನ್ನು ಕ್ಲಬ್‌ನ ಕಾರ್ಯದರ್ಶಿ ಗಾಯತ್ರಿ ಸುಂದರೇಶ್ ಹಾಗೂ ಶ್ರೀಮತಿ ಪದ್ಮ ಮಹದೇವ್ ನಡೆಸಿಕೊಟ್ಟರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

42 mins ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

4 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

4 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

5 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

5 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

5 hours ago