ಮೈಸೂರು

ಶ್ರಧ್ದಾ ಭಕ್ತಿಯಿಂದ ಗಣರಾಜ್ಯೋತ್ಸವವನ್ನು ಆಚರಿಸೋಣ : ಜಿಲ್ಲಾಧಿಕಾರಿ ರಾಜೇಂದ್ರ

ಮೈಸೂರು : ದೇಶದ ಬಗೆಗೆ ಅಭಿಮಾನ ಹೆಚ್ಚಿಸುವ ರಾಷ್ಟ್ರೀಯ ಹಬ್ಬಗಳ ಘನತೆ ಹೆಚ್ಚಾಗುವಂತೆ ಶ್ರಧ್ದಾ ಭಕ್ತಿಯಿಂದ ಗಣರಾಜ್ಯೋತ್ಸವ ವನ್ನು ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದರು

ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ಗಣರಾಜ್ಯೋತ್ಸವ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜನವರಿ 26 ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿಸಲು ಸಂವಿಧಾನದ ಬಗೆಗೆ, ಸಂವಿಧಾನ ಪೀಠಿಕೆ ಬಗೆಗೆ ವಿದ್ಯಾರ್ಥಿ, ಯುವಜನರು ಹಾಗೂ ಸಾರ್ವಜನಿಕರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸುವ ಮತ್ತು ರಾಷ್ಟ್ರ ಕಟ್ಟುವ ಸಂಕಲ್ಪ ಎಲ್ಲರಲ್ಲೂ ಬೆಳೆಯುವಂತೆ ಗಣರಾಜ್ಯೋತ್ಸವ ಆಚರಣೆಯಾಗಲಿ ಎಂದರು.

ಅಂದು ಬೆಳಿಗ್ಗೆ 9 ಗಂಟೆಗೆ ಸನ್ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಬನ್ನಿಮಂಟಪ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದು ಮಹಾನಗರ ಪಾಲಿಕೆಯವರು ವೇದಿಕೆ,ಸ್ವಚ್ಚತೆ ,ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ನೋಡಿಕೊಳ್ಳಬೇಕು.

ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿದ್ದು,ಈ ಬಾರಿ ಅಂಧ ಶಾಲಾ ಮಕ್ಕಳಿಂದ ಪೆರೇಡ್ ಮಾಡಿಸಿ ಎಂದರು.

ಸಂಜೆಯ ಕಾರ್ಯಗಳು ಕಲಾಮಂದಿರದಲ್ಲಿ ನಡೆಯಲಿದ್ದು ಈ ಬಾರಿ ಸಾಂಸ್ಕ್ೃತಿಕ ಸೌರಭ ಕಾರ್ಯಕ್ರಮ ಹಾಗೂ ಸರ್ಕಾರಿ ನೌಕರರ ಸಂಘದಿಂದ ಕಾರ್ಯಕ್ರಮ ಇರಲಿವೆ ಎಂದು ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್ ಹೇಳಿದರು

ಪ್ಲಾಸ್ಟಿಕ್ ಧ್ವಜ ಕಡ್ಡಾಯ ನಿಷೇಧ : ಪ್ಲಾಸ್ಟಿಕ್ ಧ್ವಜಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಶಾಲಾ ಕಾಲೇಜು,ವಿಶ್ವವಿದ್ಯಾಲಯಗಳ ಮುಖ್ಯಸ್ಥರು ಈ ಕುರಿತು ಆದೇಶ ಮತ್ತು ಸೂಚನೆಗಳನ್ನು ನೀಡಬೇಕು ಹಾಗೂ ಮಹಾನಗರ ಪಾಲಿಕೆಯವರು ಯಾವುದೇ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಧ್ವಜ ಮಾರಾಟವಾಗದಂತೆ ಖಚಿತಪಡಿಸಿಕೊಳ್ಳಬೇಕು ಮತ್ತು ವಾರ್ತಾ ಇಲಾಖೆಯಿಂದ ವ್ಯಾಪಕ ಪ್ರಚಾರ ನೀಡಬೇಕು – ಡಿ.ಸಿ.

ಸಭೆಯಲ್ಲಿ ಎಡಿಸಿ ಲೋಕನಾಥ್, ಅಡಿಷನಲ್ ಎಸ್ಪಿ ನಂದಿನಿ,ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷ ಗೋವಿಂದರಾಜು, ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

31 mins ago

ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಯುವಕನ ಭೀಕರ ಕೊಲೆ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…

1 hour ago

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

6 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

7 hours ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

7 hours ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

7 hours ago