ಮೈಸೂರು : ನನ್ನ ಎಲ್ಲಾ ಕಾರ್ಯಕ್ರಮಗಳಲ್ಲೂ ನನ್ನೆಲ್ಲಾ ಕಾರ್ಯಕರ್ತರು, ನಾಗರಿಕರು ನಿವೆಲ್ಲಾ ಸಹಕಾರ ನೀಡಿದ್ದೀರಾ, ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದೀರಾ, ಅದಕ್ಕೆ ನನ್ನ ಕೃತಜ್ಞತೆಗಳು ಈ ಉತ್ಸಾಹ , ಪ್ರೋತ್ಸಾಹ ಹೀಗೆ ಮುಂದುವರೆಯಲಿ , ಏಪ್ರಿಲ್ 26 ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಮತನೀಡುವ ಮೂಲಕ ಅದು ಪರಿವರ್ತನೆ ಯಾಗಲಿ ಎಂದು
ಯದುವೀರ್ ಹೇಳಿದರು.
ಅಗ್ರಹಾರದ 101 ಗಣಪತಿ ದೇವಸ್ಥಾನದ ಮುಂಭಾಗದಲ್ಲಿ ನಡೆದ ರೋಸ್ ಶೋನಲ್ಲಿ ಮಾತನಾಡಿದ ಅವರು, ನಮ್ಮೆಲ್ಲರ ಪ್ರದಾನ ಮಂತ್ರಿಗಳು ಭಾರತದ ಸರ್ವತೋಮುಖ ಅಭಿವೃದ್ಧಿಗಾಗಿ ಏನೆಲ್ಲಾ ಕೆಲಸಗಳನ್ನು ಮಾಡಿದ್ದಾರೆ ಎಂದು ನಿಮಗೆಲ್ಲ ತಿಳಿದಿರುವ ವಿಚಾರ, ಅವರು ಸಮಾಜದ ಒಳಿತಿಗಾಗಿ ಪಾರಂಪರೆಯ ರಕ್ಷಣೆಗಾಗಿ ಅನೇಕ ಕೆಲಸಗಳನ್ನು ಮಾಡಿದ್ದಾರೆ.
ಅವರ ಕೈ ಬಲ ಪಡಿಸುವ ಮೂಲಕ ಭಾರತ ಹಾಗೆಯೇ ನಮ್ಮ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಮಾಡೋಣ , ನಮ್ಮ ಪರಂಪರೆ, ಪ್ರಕೃತಿ, ಸಂಸ್ಕೃತಿಯನ್ನು ಉಳಿಸಿ, ಬೆಳೆಸೋಣ ಎಂದರು.
ನಿಮ್ಮೆಲ್ಲರ ಪ್ರೀತಿ ಸಹಕಾರ ಸದಾ ಹೀಗೆ ಇರಲಿ, ಕಮಲದ ಗುರುತಿಗೆ ನನ್ನ ಕ್ರಮ ಸಂಖ್ಯೆ 01 ಕ್ಕೆ ನಿಮ್ಮ ಅತ್ಯ ಅಮೂಲ್ಯವಾದ ಮತ ನೀಡಬೇಕು ಎಂದು ಮನವಿ ಮಾಡಿದರು.
ಇದೆ ಸಂಧರ್ಭದಲ್ಲಿ ಶಾಸಕ ಶ್ರೀವತ್ಸಾ, ನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಸೌಮ್ಯ ಉಮೇಶ್ ಸೇರಿದಂತೆ ಅನೇಕ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು .
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…