ಮೈಸೂರು

ಗೆಲ್ಲಿಸಿಕೊಂಡು ಬರಲಿ ನೋಡೋಣ : ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು

ಮೈಸೂರು : ನಾನು ಅಹಿಂದ ಚಾಂಪಿಯನ್‌ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್‌ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು ಗೆಲ್ಲಿಸಲಿ ನೋಡೋಣ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಕಂಡರೆ ಅಸೂಯೆ, ಹೊಟ್ಟೆಕಿಚ್ಚು ಇರುವುದು ನಮಗಲ್ಲ. ಕಾಂಗ್ರೆಸ್‌ನಲ್ಲೇ ಕೆಲವರಿಗೆ ಹೊಟ್ಟೆಕಿಚ್ಚಿದೆ ಎಂದರು.

ರಾಜಕೀಯವೇ ಸಾಕೆಂದು ಕಣ್ಣೀರು ಹಾಕಿದ್ದ ಸಿದ್ದರಾಮಯ್ಯ ಅವರನ್ನು ತಮ್ಮ ತಂದೆ ಎಚ್.ಡಿ. ದೇವೇಗೌಡರು ಸಮಾಧಾನಪಡಿಸಿದ್ದರು. 1999ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸೋತ ನಂತರ ಸಿದ್ದರಾಮಯ್ಯ ಅವರು ರಾಜಕೀಯವನ್ನೇ ಬಿಡುವುದಾಗಿ ಹೇಳಿ ನಮ್ಮ ಮನೆಗೆ ಬಂದು ಕಣ್ಣೀರು ಹಾಕಿದ್ದರು. ಆಗ ನಮ್ಮ ತಂದೆ ಅವರನ್ನು ಸಮಾಧಾನಪಡಿಸಿ, ರಾಜಕೀಯದಲ್ಲಿ ಮುಂದುವರಿಯುವಂತೆ ಆತ್ಮವಿಶ್ವಾಸ ನೀಡಿದ್ದರು” ಎಂದು ಹಿಂದಿನ ಘನಟೆಯನ್ನು ಹಂಚಿಕೊಂಡರು.

ಆಗ ದೇವೇಗೌಡರು ಸಿದ್ದರಾಮಯ್ಯ ಅವರಿಗೆ ಪರ್ಯಾಯ ವ್ಯವಸ್ಥೆಯನ್ನೂ ಮಾಡಿಕೊಟ್ಟಿದ್ದರು. ಆದರೆ ಈಗ ಅವರು ಇದನ್ನು ಸುಲಭವಾಗಿ ಮರೆತುಬಿಟ್ಟಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡುವುದಿಲ್ಲ. ಅವರ ಸ್ವಭಾವ ನನಗೆ ಗೊತ್ತಿದೆ. ಸಿಎಂ ಗಾದಿಗಾಯಿಯೇ ಒಬ್ಬರು ಹೆಚ್ಚಾಗಿ ದೇವರ ಮೊರೆ ಹೋಗುತ್ತಿದ್ದಾರೆ. ದೇವರಿಗೆ ಪ್ರಾರ್ಥನೆಯನ್ನು ಮನಪೂರ್ವಕವಾಗಿ ಮಾಡಬೇಕು ಸ್ವಾರ್ಥಕ್ಕೆ ಬೇಡಿಕೊಂಡರೆ ದೇವರು ಫಲ ಕೊಡುವುದಿಲ್ಲ ಎಂದು ವ್ಯಂಗ್ಯವಾಡಿದರು.

 

 

 

ಆಂದೋಲನ ಡೆಸ್ಕ್

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

4 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

7 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

7 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

8 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

8 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

8 hours ago