ಮೈಸೂರು

ಮಹಿಳಾ ಮೀಸಲಾತಿಗೆ ಆಗ್ರಹಿಸಿ ಪ್ರಧಾನಿಗೆ ಪತ್ರ : ಡಾ.ಪುಷ್ಪಾ ಅಮರನಾಥ್‌

ಮೈಸೂರು : ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರ ರಾಜಕೀಯ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗೆ ಪತ್ರ ಬರೆಯುವುದಾಗಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್‌ ತಿಳಿಸಿದ್ದಾರೆ.

ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌‍ ವತಿಯಿಂದ ನಗರದ ಇಂದಿರಾ ಕಾಂಗ್ರೆಸ್‌‍ ಭವನದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಪ್ರಜಾಪ್ರಭುತ್ವ ದಿನ ಮತ್ತು ಮಹಿಳಾ ಕಾಂಗ್ರೆಸ್‌‍ ಸಂಸ್ಥಾಪನಾ ದಿನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಮೀಸಲಾತಿ ದೊರೆತಿದೆ. ವಿಧಾನಸಭೆ, ಪಾರ್ಲಿಮೆಂಟಿನಲ್ಲಿ ರಾಜಕೀಯ ಮೀಸಲಾತಿ ಜಾರಿಗೊಳಿಸುವಂತೆ ಕೂಗು, ಹೋರಾಟ ನಿರಂತರವಾಗಿ ನಡೆಯುತ್ತಿದೆ. ಆದರೆ, ಮಹಿಳೆಯರ ಮೀಸಲಾತಿ ಜಾರಿ ಮರೀಚಿಕೆಯಾಗಿದೆ ಎಂದರು.

ಕೇಂದ್ರದಲ್ಲಿ ಬಿಜೆಪಿ ಬಹುಮತದ ಸರ್ಕಾರವಿದೆ. ಮನಸ್ಸು ಮಾಡಿದರೆ ಮಹಿಳಾ ಮೀಸಲಾತಿ ಜಾರಿ ಮಾಡುವುದು ಕಷ್ಟವಲ್ಲ. ಆದರೆ, ತಡ ಮಾಡುತ್ತಿದೆ. ಶೇ. 30 ಮೀಸಲಾತಿ ನೀಡುವ ಮೂಲಕ ಬಾಬಾ ಸಾಹೇಬರ ಆಶಯವನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ರಾಜಕೀಯ ಸಮಾನತೆ ಸಿಕ್ಕಿದರೆ ಮಾತ್ರ ಮಹಿಳೆಯರು ಮುಂದುವರಿಯಲು ಸಾಧ್ಯ. ಶೇ. 50 ಮತದಾನ ಮಾಡುವ ಮಹಿಳೆಗೆ ಶಕ್ತಿ ತುಂಬಬೇಕು. ಎಲ್ಲ ಪಕ್ಷಗಳ ನಾಯಕರು ರಾಜಕೀಯವನ್ನು ಬಿಟ್ಟು ಮಹಿಳಾ ಮೀಸಲಾತಿ ಜಾರಿಗೆ ಸಹಮತ ವ್ಯಕ್ತಪಡಿಸಬೇಕು ಎಂದು ಹೇಳಿದರು.

ಮಹಿಳಾ ಕಾಂಗ್ರೆಸ್‌‍ ಸ್ಥಾಪನೆಯಾಗಿ 4 ದಶಕಗಳನ್ನು ಪೂರೈಸಿದೆ. ಸುಚೇತಾ ಕೃಪಲಾನಿ ಮೊದಲ ಅಧ್ಯಕ್ಷರಾಗಿದ್ದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಮಹಿಳಾ ಕಾಂಗ್ರೆಸ್‌‍ಗೆ ಒತ್ತು ಕೊಟ್ಟಿದ್ದರು. ಇವತ್ತು ಅಖಿಲ ಭಾರತ ಮಹಿಳಾ ಕಾಂಗ್ರೆಸ್‌‍ ದೇಶದ ಮಹಿಳೆಯರ ಕಷ್ಟಗಳಿಗೆ ದನಿಯಾಗಿದೆ ಎಂದು ತಿಳಿಸಿದರು.

ಮಹಿಳಾ ಕಾಂಗ್ರೆಸ್‌‍ ಚಳವಳಿ, ಹೋರಾಟದ ಸಂಕೇತವಾಗಿದೆ. ಮಹಿಳೆಯರ ಶಿಕ್ಷಣ, ಹಕ್ಕುಗಳನ್ನು ಕೊಡಿಸಲು ಬದ್ಧವಾಗಿದೆ. ದೌರ್ಜನ್ಯ, ದಬ್ಬಾಳಿಕೆಯ ವಿರುದ್ಧ ಹೋರಾಡುವ ಸಂಕಲ್ಪ ತೊಟ್ಟಿದೆ ಎಂದು ಹೇಳಿದರು.
ಸಂವಿಧಾನ ಪೀಠಿಕೆ ಓದಿದ ಬಳಿಕ ಎಲ್ಲರಿಗೂ ಸಿಹಿ ವಿತರಿಸಲಾಯಿತು.

ನಗರ ಅಧ್ಯಕ್ಷ ಆರ್‌.ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ. ವಿಜಯ್‌ ಕುಮಾರ್‌, ಸಿ.ಬಸವೇಗೌಡ, ಲತಾ ಸಿದ್ಧಶೆಟ್ಟಿ, ಪುಷ್ಪವಲ್ಲಿ, ಪುಷ್ಪಾಲತಾ ಚಿಕ್ಕಣ್ಣ, ಮಾಜಿ ಜಿ.ಪ ಸದಸ್ಯೆ ಸುಧಾ ಮಹದೇವಯ್ಯ ಮುಂತಾದವರು ಭಾಗವಹಿಸಿದ್ದರು.

lokesh

Recent Posts

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

51 mins ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

1 hour ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

1 hour ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

9 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

9 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

9 hours ago