ಮೈಸೂರು

ಮಹಿಳಾ ಮೀಸಲಾತಿಗೆ ಆಗ್ರಹಿಸಿ ಪ್ರಧಾನಿಗೆ ಪತ್ರ : ಡಾ.ಪುಷ್ಪಾ ಅಮರನಾಥ್‌

ಮೈಸೂರು : ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರ ರಾಜಕೀಯ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗೆ ಪತ್ರ ಬರೆಯುವುದಾಗಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್‌ ತಿಳಿಸಿದ್ದಾರೆ.

ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌‍ ವತಿಯಿಂದ ನಗರದ ಇಂದಿರಾ ಕಾಂಗ್ರೆಸ್‌‍ ಭವನದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಪ್ರಜಾಪ್ರಭುತ್ವ ದಿನ ಮತ್ತು ಮಹಿಳಾ ಕಾಂಗ್ರೆಸ್‌‍ ಸಂಸ್ಥಾಪನಾ ದಿನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಮೀಸಲಾತಿ ದೊರೆತಿದೆ. ವಿಧಾನಸಭೆ, ಪಾರ್ಲಿಮೆಂಟಿನಲ್ಲಿ ರಾಜಕೀಯ ಮೀಸಲಾತಿ ಜಾರಿಗೊಳಿಸುವಂತೆ ಕೂಗು, ಹೋರಾಟ ನಿರಂತರವಾಗಿ ನಡೆಯುತ್ತಿದೆ. ಆದರೆ, ಮಹಿಳೆಯರ ಮೀಸಲಾತಿ ಜಾರಿ ಮರೀಚಿಕೆಯಾಗಿದೆ ಎಂದರು.

ಕೇಂದ್ರದಲ್ಲಿ ಬಿಜೆಪಿ ಬಹುಮತದ ಸರ್ಕಾರವಿದೆ. ಮನಸ್ಸು ಮಾಡಿದರೆ ಮಹಿಳಾ ಮೀಸಲಾತಿ ಜಾರಿ ಮಾಡುವುದು ಕಷ್ಟವಲ್ಲ. ಆದರೆ, ತಡ ಮಾಡುತ್ತಿದೆ. ಶೇ. 30 ಮೀಸಲಾತಿ ನೀಡುವ ಮೂಲಕ ಬಾಬಾ ಸಾಹೇಬರ ಆಶಯವನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ರಾಜಕೀಯ ಸಮಾನತೆ ಸಿಕ್ಕಿದರೆ ಮಾತ್ರ ಮಹಿಳೆಯರು ಮುಂದುವರಿಯಲು ಸಾಧ್ಯ. ಶೇ. 50 ಮತದಾನ ಮಾಡುವ ಮಹಿಳೆಗೆ ಶಕ್ತಿ ತುಂಬಬೇಕು. ಎಲ್ಲ ಪಕ್ಷಗಳ ನಾಯಕರು ರಾಜಕೀಯವನ್ನು ಬಿಟ್ಟು ಮಹಿಳಾ ಮೀಸಲಾತಿ ಜಾರಿಗೆ ಸಹಮತ ವ್ಯಕ್ತಪಡಿಸಬೇಕು ಎಂದು ಹೇಳಿದರು.

ಮಹಿಳಾ ಕಾಂಗ್ರೆಸ್‌‍ ಸ್ಥಾಪನೆಯಾಗಿ 4 ದಶಕಗಳನ್ನು ಪೂರೈಸಿದೆ. ಸುಚೇತಾ ಕೃಪಲಾನಿ ಮೊದಲ ಅಧ್ಯಕ್ಷರಾಗಿದ್ದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಮಹಿಳಾ ಕಾಂಗ್ರೆಸ್‌‍ಗೆ ಒತ್ತು ಕೊಟ್ಟಿದ್ದರು. ಇವತ್ತು ಅಖಿಲ ಭಾರತ ಮಹಿಳಾ ಕಾಂಗ್ರೆಸ್‌‍ ದೇಶದ ಮಹಿಳೆಯರ ಕಷ್ಟಗಳಿಗೆ ದನಿಯಾಗಿದೆ ಎಂದು ತಿಳಿಸಿದರು.

ಮಹಿಳಾ ಕಾಂಗ್ರೆಸ್‌‍ ಚಳವಳಿ, ಹೋರಾಟದ ಸಂಕೇತವಾಗಿದೆ. ಮಹಿಳೆಯರ ಶಿಕ್ಷಣ, ಹಕ್ಕುಗಳನ್ನು ಕೊಡಿಸಲು ಬದ್ಧವಾಗಿದೆ. ದೌರ್ಜನ್ಯ, ದಬ್ಬಾಳಿಕೆಯ ವಿರುದ್ಧ ಹೋರಾಡುವ ಸಂಕಲ್ಪ ತೊಟ್ಟಿದೆ ಎಂದು ಹೇಳಿದರು.
ಸಂವಿಧಾನ ಪೀಠಿಕೆ ಓದಿದ ಬಳಿಕ ಎಲ್ಲರಿಗೂ ಸಿಹಿ ವಿತರಿಸಲಾಯಿತು.

ನಗರ ಅಧ್ಯಕ್ಷ ಆರ್‌.ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ. ವಿಜಯ್‌ ಕುಮಾರ್‌, ಸಿ.ಬಸವೇಗೌಡ, ಲತಾ ಸಿದ್ಧಶೆಟ್ಟಿ, ಪುಷ್ಪವಲ್ಲಿ, ಪುಷ್ಪಾಲತಾ ಚಿಕ್ಕಣ್ಣ, ಮಾಜಿ ಜಿ.ಪ ಸದಸ್ಯೆ ಸುಧಾ ಮಹದೇವಯ್ಯ ಮುಂತಾದವರು ಭಾಗವಹಿಸಿದ್ದರು.

lokesh

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

3 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

16 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

18 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

21 hours ago