ಮೈಸೂರು

ಮಹಿಳಾ ಮೀಸಲಾತಿಗೆ ಆಗ್ರಹಿಸಿ ಪ್ರಧಾನಿಗೆ ಪತ್ರ : ಡಾ.ಪುಷ್ಪಾ ಅಮರನಾಥ್‌

ಮೈಸೂರು : ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರ ರಾಜಕೀಯ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗೆ ಪತ್ರ ಬರೆಯುವುದಾಗಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್‌ ತಿಳಿಸಿದ್ದಾರೆ.

ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌‍ ವತಿಯಿಂದ ನಗರದ ಇಂದಿರಾ ಕಾಂಗ್ರೆಸ್‌‍ ಭವನದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಪ್ರಜಾಪ್ರಭುತ್ವ ದಿನ ಮತ್ತು ಮಹಿಳಾ ಕಾಂಗ್ರೆಸ್‌‍ ಸಂಸ್ಥಾಪನಾ ದಿನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಮೀಸಲಾತಿ ದೊರೆತಿದೆ. ವಿಧಾನಸಭೆ, ಪಾರ್ಲಿಮೆಂಟಿನಲ್ಲಿ ರಾಜಕೀಯ ಮೀಸಲಾತಿ ಜಾರಿಗೊಳಿಸುವಂತೆ ಕೂಗು, ಹೋರಾಟ ನಿರಂತರವಾಗಿ ನಡೆಯುತ್ತಿದೆ. ಆದರೆ, ಮಹಿಳೆಯರ ಮೀಸಲಾತಿ ಜಾರಿ ಮರೀಚಿಕೆಯಾಗಿದೆ ಎಂದರು.

ಕೇಂದ್ರದಲ್ಲಿ ಬಿಜೆಪಿ ಬಹುಮತದ ಸರ್ಕಾರವಿದೆ. ಮನಸ್ಸು ಮಾಡಿದರೆ ಮಹಿಳಾ ಮೀಸಲಾತಿ ಜಾರಿ ಮಾಡುವುದು ಕಷ್ಟವಲ್ಲ. ಆದರೆ, ತಡ ಮಾಡುತ್ತಿದೆ. ಶೇ. 30 ಮೀಸಲಾತಿ ನೀಡುವ ಮೂಲಕ ಬಾಬಾ ಸಾಹೇಬರ ಆಶಯವನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ರಾಜಕೀಯ ಸಮಾನತೆ ಸಿಕ್ಕಿದರೆ ಮಾತ್ರ ಮಹಿಳೆಯರು ಮುಂದುವರಿಯಲು ಸಾಧ್ಯ. ಶೇ. 50 ಮತದಾನ ಮಾಡುವ ಮಹಿಳೆಗೆ ಶಕ್ತಿ ತುಂಬಬೇಕು. ಎಲ್ಲ ಪಕ್ಷಗಳ ನಾಯಕರು ರಾಜಕೀಯವನ್ನು ಬಿಟ್ಟು ಮಹಿಳಾ ಮೀಸಲಾತಿ ಜಾರಿಗೆ ಸಹಮತ ವ್ಯಕ್ತಪಡಿಸಬೇಕು ಎಂದು ಹೇಳಿದರು.

ಮಹಿಳಾ ಕಾಂಗ್ರೆಸ್‌‍ ಸ್ಥಾಪನೆಯಾಗಿ 4 ದಶಕಗಳನ್ನು ಪೂರೈಸಿದೆ. ಸುಚೇತಾ ಕೃಪಲಾನಿ ಮೊದಲ ಅಧ್ಯಕ್ಷರಾಗಿದ್ದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಮಹಿಳಾ ಕಾಂಗ್ರೆಸ್‌‍ಗೆ ಒತ್ತು ಕೊಟ್ಟಿದ್ದರು. ಇವತ್ತು ಅಖಿಲ ಭಾರತ ಮಹಿಳಾ ಕಾಂಗ್ರೆಸ್‌‍ ದೇಶದ ಮಹಿಳೆಯರ ಕಷ್ಟಗಳಿಗೆ ದನಿಯಾಗಿದೆ ಎಂದು ತಿಳಿಸಿದರು.

ಮಹಿಳಾ ಕಾಂಗ್ರೆಸ್‌‍ ಚಳವಳಿ, ಹೋರಾಟದ ಸಂಕೇತವಾಗಿದೆ. ಮಹಿಳೆಯರ ಶಿಕ್ಷಣ, ಹಕ್ಕುಗಳನ್ನು ಕೊಡಿಸಲು ಬದ್ಧವಾಗಿದೆ. ದೌರ್ಜನ್ಯ, ದಬ್ಬಾಳಿಕೆಯ ವಿರುದ್ಧ ಹೋರಾಡುವ ಸಂಕಲ್ಪ ತೊಟ್ಟಿದೆ ಎಂದು ಹೇಳಿದರು.
ಸಂವಿಧಾನ ಪೀಠಿಕೆ ಓದಿದ ಬಳಿಕ ಎಲ್ಲರಿಗೂ ಸಿಹಿ ವಿತರಿಸಲಾಯಿತು.

ನಗರ ಅಧ್ಯಕ್ಷ ಆರ್‌.ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ. ವಿಜಯ್‌ ಕುಮಾರ್‌, ಸಿ.ಬಸವೇಗೌಡ, ಲತಾ ಸಿದ್ಧಶೆಟ್ಟಿ, ಪುಷ್ಪವಲ್ಲಿ, ಪುಷ್ಪಾಲತಾ ಚಿಕ್ಕಣ್ಣ, ಮಾಜಿ ಜಿ.ಪ ಸದಸ್ಯೆ ಸುಧಾ ಮಹದೇವಯ್ಯ ಮುಂತಾದವರು ಭಾಗವಹಿಸಿದ್ದರು.

lokesh

Recent Posts

9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಂಡ್ಯದಲ್ಲಿ ಜನರು 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನ…

3 mins ago

ಸಣ್ಣ ಮಠವನ್ನು ದೊಡ್ಡ ಮರವನ್ನಾಗಿ ಬೆಳೆಸಿದ್ದು ಬಾಲಗಂಗಾಧರನಾಥರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ತ್ರಿವಿಧ ದಾಸೋಹದ ಮೂಲಕ ಆದಿಚುಂಚನಗಿರಿ ಮಠ ಪ್ರಸಿದ್ಧಿ ಪಡೆದಿದೆ. ಬಾಲಗಂಗಾಧರನಾಥರ ಭೈರವೈಕ್ಯ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿ ಅವರು…

10 mins ago

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅಮಾನತು

ಬೆಂಗಳೂರು: ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…

2 hours ago

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್‌…

3 hours ago

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

3 hours ago

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

4 hours ago