ಮೈಸೂರು

ಅಕ್ರಮ ರೇಸಾರ್ಟ್‌ಗಳ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಪತ್ರ

ಎಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಮತ್ತು ನುಗು ಜಲಾಶಯಗಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ರೆಸಾರ್ಟ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಲಾಗಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದ್ದಾರೆ.

ಕನಕಪುರ ಸಮೀಪದಲ್ಲಿರುವ ಗಾಳಿಬೋರೆ ರೆಸಾರ್ಟ್‌ಗೆ ಭೇಟಿ ನೀಡಿ ಪರಿಶೀಲಿಸಿ, ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳ ಜಾರಿ ಬಗ್ಗೆ ಅಧಿಕಾರಿಗಳೊಡನೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಕಬಿನಿ ಹಾಗೂ ನುಗು ಜಲಾಶಯಗಳ ಹಿನ್ನೀರಿನಲ್ಲಿ ಅಕ್ರಮವಾಗಿ ರೆಸಾರ್ಟ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಇದಕ್ಕೆ ಸ್ಥಳೀಯ ಶಾಸಕರು, ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಕೆಲವೊಂದು ವಿದ್ಯುನ್ಮಾನ ಸುದ್ದಿ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಆರೋಪಿಸಲಾಗಿದೆ.

ತಾಲ್ಲೂಕಿನಲ್ಲಿ ಅಕ್ರಮ ರೆಸಾರ್ಟ್‌ಗಳ ನಿರ್ಮಾಣದ ಬಗ್ಗೆ ನನಗೆ ಯಾವುದೇ ಲಿಖಿತ ದೂರುಗಳು ಬಂದಿಲ್ಲ. ಆದ್ದರಿಂದ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿನ ಅಂಶಗಳನ್ನು ದೂರುಗಳೆಂದು ಆಧರಿಸಿ ತಾಲ್ಲೂಕಿನಲ್ಲಿ ಅಕ್ರಮ ರೆಸಾರ್ಟ್ ನಿರ್ಮಾಣ ವಾಗುತ್ತಿದ್ದಲ್ಲಿ ಅಥವಾ ಕಾರ್ಯನಿರ್ವಹಿಸುತ್ತಿದ್ದಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಂದ ತನಿಖೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರಿಗೆ ಪತ್ರ ಬರೆದು ಸೂಚಿಸಿದ್ದೇನೆ ಎಂದರು.

ತಾಲ್ಲೂಕಿನಲ್ಲಿ ಯಾವುದೇ ತಪ್ಪು ಮಾಡಿದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ತಾಲ್ಲೂಕನ್ನು ಅಭಿವೃದ್ಧಿಪಡಿಸಿ ಜನಸಾಮಾನ್ಯರ ಕಷ್ಟ, ನೋವುಗಳಿಗೆ ಸ್ಪಂದಿಸುವುದೇ ನನ್ನ ಪ್ರಮುಖ ಉದ್ದೇಶವಾಗಿದೆ. ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ಪಿತೂರಿ ನಡೆಸಿದರೆ ಅದನ್ನು ಎದುರಿಸುವ ಶಕ್ತಿಯನ್ನು ಕ್ಷೇತ್ರದ ಜನತೆ ನನಗೆ ನೀಡಿದ್ದಾರೆ ಎಂದರು.

ರಾಜ್ಯದಲ್ಲಿರುವ ಜಂಗಲ್ ರೆಸಾರ್ಟ್‌ಗಳ ಮತ್ತಷ್ಟು ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ೨೬ ಜಂಗಲ್ ರೆಸಾರ್ಟ್‌ಗಳಿಗೂ ಭೇಟಿ ನೀಡುತ್ತಿದ್ದೇನೆ. ಅಲ್ಲಿನ ಅಧಿಕಾರಿಗಳ ಮತ್ತು ನೌಕರರು ಸಿಬ್ಬಂದಿಗಳೊಡನೆ ಚರ್ಚಿಸಿ ಅಭಿವೃದ್ಧಿಪಡಿಸಲು ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದರು.

ಜಂಗಲ್ ರೆಸಾರ್ಟ್‌ನ ಉನ್ನತ ಮಟ್ಟದ ಅಽಕಾರಿಗಳಾದ ಅನುಷಾ, ಭಕ್ತಪ್ರಸಾದ್, ಯುವರಾಜ್, ಶಾಸಕರ ಆಪ್ತ ಕಾರ್ಯದರ್ಶಿ ಮಲ್ಲಿಕಾರ್ಜುನ್, ಶಿವಣ್ಣ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

7 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

9 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

9 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

9 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

10 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

10 hours ago