ಮೈಸೂರು

ಹಸುಗೂಸು ಕೊಂದಿದ್ದವನಿಗೆ ಜೀವಾವಧಿ ಶಿಕ್ಷೆ

ಮೈಸೂರು : ಕುಡಿಯಲು ಪತ್ನಿ ಹಣ ನೀಡದ್ದಕ್ಕೆ ಜನ್ಮ ನೀಡಿದ 7 ತಿಂಗಳ ಹೆಣ್ಣು ಮಗುವನ್ನೇ ಕೊಲೆಗೈದ ತಂದೆಗೆ ಮೈಸೂರಿನ ಆರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ನಗರದ ಕನಕಗಿರಿ ನಿವಾಸಿ ನಾಗೇಂದ್ರ ಶಿಕ್ಷೆಗೆ ಗುರಿಯಾದವ. ಈತ ತರಕಾರಿ ವ್ಯಾಪಾರಿಯಾಗಿದ್ದು, ಸಿದ್ದಮ್ಮ ಅವರ ಪುತ್ರಿ ರಮ್ಯ ಅವರನ್ನು ವಿವಾಹವಾಗಿದ್ದ. ಆತನಿಗೆ 7 ತಿಂಗಳ ಹೆಣ್ಣು ಮಗು ಕೂಡ ಇತ್ತು. ಕುಡಿತದ ಚಟಕ್ಕೆ ದಾಸನಾಗಿದ್ದ ನಾಗೇಂದ್ರ, ನಿತ್ಯ ಮದ್ಯ ಸೇವನೆಗೆ ಹಣ ನೀಡುವಂತೆ ಪತ್ನಿಯನ್ನು ಪೀಡಿಸುತ್ತಿದ್ದ.

2022 ಏ. 24 ರಂದು ಪತ್ನಿ ರಮ್ಯ ಅವರನ್ನು ಹಣಕ್ಕಾಗಿ ಪೀಡಿಸಿದ ನಾಗೇಂದ್ರ, ಹಣ ನೀಡದೇ ಇದ್ದರೆ ಮಗುವನ್ನು ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾನೆ. ತಕ್ಷಣ ರಮ್ಯ ಅವರು ಕೂಗಿಕೊಂಡು ಮನೆಯಿಂದ ಹೊರಗೆ ಬಂದಾಗ ಮನೆಯಲ್ಲಿಯೇ ಇದ್ದ ನಾಗೇಂದ್ರ ತೂಕ ಮಾಡುವ ಕಬ್ಬಿಣದ ತಕ್ಕಡಿ ಮತ್ತು ಬಟ್‌ನಿಂದ ಮಗುವನ್ನು ಹೊಡೆದು ಕೊಲೆ ಮಾಡಿದ್ದ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ವಿದ್ಯಾರಣ್ಯಪುರಂ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧಿಶರಾದ ವಿ.ಎಚ್. ದಯಾನಂದ ಅವರು ಆರೋಪ ಸಾಬೀತಾದ ಹಿನ್ನಲೆಯಲ್ಲಿ ನಾಗೇಂದ್ರಗೆ ಜೀವಾವಧಿ ಶಿಕ್ಷೆಯೊಂದಿಗೆ 10 ಸಾವಿರ ರೂ.ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಎಂ. ಕಾಮಾಕ್ಷಿ ವಾದ ಮಂಡಿಸಿದ್ದರು.

ಆಂದೋಲನ ಡೆಸ್ಕ್

Recent Posts

ನಾಳೆ ಶ್ರೀ ಅಯ್ಯಪ್ಪ ಕ್ಷೇತ್ರದ ಮುಖಮಂಟಪ ಲೋಕಾರ್ಪಣೆ

ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…

1 hour ago

‘ದೇಸಿ ಬೀಜಗಳನ್ನು ಉಳಿಸಿದರೆ ವಿಷಮುಕ್ತ ಆಹಾರ ನೀಡಲು ಸಾಧ್ಯ’

ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…

1 hour ago

ಕ್ರಿಸ್‌ಮಸ್ ಹಬ್ಬಕ್ಕೆ ಅರಮನೆ ನಗರಿ ಸಜ್ಜು

ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…

1 hour ago

ಡಿಎಚ್‌ಒ ವರ್ಗಾವಣೆಯಲ್ಲಿ ಎಡವಟ್ಟು

ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…

1 hour ago

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

13 hours ago