Life sentence for child killer
ಮೈಸೂರು : ಕುಡಿಯಲು ಪತ್ನಿ ಹಣ ನೀಡದ್ದಕ್ಕೆ ಜನ್ಮ ನೀಡಿದ 7 ತಿಂಗಳ ಹೆಣ್ಣು ಮಗುವನ್ನೇ ಕೊಲೆಗೈದ ತಂದೆಗೆ ಮೈಸೂರಿನ ಆರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ನಗರದ ಕನಕಗಿರಿ ನಿವಾಸಿ ನಾಗೇಂದ್ರ ಶಿಕ್ಷೆಗೆ ಗುರಿಯಾದವ. ಈತ ತರಕಾರಿ ವ್ಯಾಪಾರಿಯಾಗಿದ್ದು, ಸಿದ್ದಮ್ಮ ಅವರ ಪುತ್ರಿ ರಮ್ಯ ಅವರನ್ನು ವಿವಾಹವಾಗಿದ್ದ. ಆತನಿಗೆ 7 ತಿಂಗಳ ಹೆಣ್ಣು ಮಗು ಕೂಡ ಇತ್ತು. ಕುಡಿತದ ಚಟಕ್ಕೆ ದಾಸನಾಗಿದ್ದ ನಾಗೇಂದ್ರ, ನಿತ್ಯ ಮದ್ಯ ಸೇವನೆಗೆ ಹಣ ನೀಡುವಂತೆ ಪತ್ನಿಯನ್ನು ಪೀಡಿಸುತ್ತಿದ್ದ.
2022 ಏ. 24 ರಂದು ಪತ್ನಿ ರಮ್ಯ ಅವರನ್ನು ಹಣಕ್ಕಾಗಿ ಪೀಡಿಸಿದ ನಾಗೇಂದ್ರ, ಹಣ ನೀಡದೇ ಇದ್ದರೆ ಮಗುವನ್ನು ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾನೆ. ತಕ್ಷಣ ರಮ್ಯ ಅವರು ಕೂಗಿಕೊಂಡು ಮನೆಯಿಂದ ಹೊರಗೆ ಬಂದಾಗ ಮನೆಯಲ್ಲಿಯೇ ಇದ್ದ ನಾಗೇಂದ್ರ ತೂಕ ಮಾಡುವ ಕಬ್ಬಿಣದ ತಕ್ಕಡಿ ಮತ್ತು ಬಟ್ನಿಂದ ಮಗುವನ್ನು ಹೊಡೆದು ಕೊಲೆ ಮಾಡಿದ್ದ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ವಿದ್ಯಾರಣ್ಯಪುರಂ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧಿಶರಾದ ವಿ.ಎಚ್. ದಯಾನಂದ ಅವರು ಆರೋಪ ಸಾಬೀತಾದ ಹಿನ್ನಲೆಯಲ್ಲಿ ನಾಗೇಂದ್ರಗೆ ಜೀವಾವಧಿ ಶಿಕ್ಷೆಯೊಂದಿಗೆ 10 ಸಾವಿರ ರೂ.ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಎಂ. ಕಾಮಾಕ್ಷಿ ವಾದ ಮಂಡಿಸಿದ್ದರು.
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…
ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ಈ ಬಗ್ಗೆ…
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…