Life sentence for child killer
ಮೈಸೂರು : ಕುಡಿಯಲು ಪತ್ನಿ ಹಣ ನೀಡದ್ದಕ್ಕೆ ಜನ್ಮ ನೀಡಿದ 7 ತಿಂಗಳ ಹೆಣ್ಣು ಮಗುವನ್ನೇ ಕೊಲೆಗೈದ ತಂದೆಗೆ ಮೈಸೂರಿನ ಆರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ನಗರದ ಕನಕಗಿರಿ ನಿವಾಸಿ ನಾಗೇಂದ್ರ ಶಿಕ್ಷೆಗೆ ಗುರಿಯಾದವ. ಈತ ತರಕಾರಿ ವ್ಯಾಪಾರಿಯಾಗಿದ್ದು, ಸಿದ್ದಮ್ಮ ಅವರ ಪುತ್ರಿ ರಮ್ಯ ಅವರನ್ನು ವಿವಾಹವಾಗಿದ್ದ. ಆತನಿಗೆ 7 ತಿಂಗಳ ಹೆಣ್ಣು ಮಗು ಕೂಡ ಇತ್ತು. ಕುಡಿತದ ಚಟಕ್ಕೆ ದಾಸನಾಗಿದ್ದ ನಾಗೇಂದ್ರ, ನಿತ್ಯ ಮದ್ಯ ಸೇವನೆಗೆ ಹಣ ನೀಡುವಂತೆ ಪತ್ನಿಯನ್ನು ಪೀಡಿಸುತ್ತಿದ್ದ.
2022 ಏ. 24 ರಂದು ಪತ್ನಿ ರಮ್ಯ ಅವರನ್ನು ಹಣಕ್ಕಾಗಿ ಪೀಡಿಸಿದ ನಾಗೇಂದ್ರ, ಹಣ ನೀಡದೇ ಇದ್ದರೆ ಮಗುವನ್ನು ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾನೆ. ತಕ್ಷಣ ರಮ್ಯ ಅವರು ಕೂಗಿಕೊಂಡು ಮನೆಯಿಂದ ಹೊರಗೆ ಬಂದಾಗ ಮನೆಯಲ್ಲಿಯೇ ಇದ್ದ ನಾಗೇಂದ್ರ ತೂಕ ಮಾಡುವ ಕಬ್ಬಿಣದ ತಕ್ಕಡಿ ಮತ್ತು ಬಟ್ನಿಂದ ಮಗುವನ್ನು ಹೊಡೆದು ಕೊಲೆ ಮಾಡಿದ್ದ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ವಿದ್ಯಾರಣ್ಯಪುರಂ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧಿಶರಾದ ವಿ.ಎಚ್. ದಯಾನಂದ ಅವರು ಆರೋಪ ಸಾಬೀತಾದ ಹಿನ್ನಲೆಯಲ್ಲಿ ನಾಗೇಂದ್ರಗೆ ಜೀವಾವಧಿ ಶಿಕ್ಷೆಯೊಂದಿಗೆ 10 ಸಾವಿರ ರೂ.ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಎಂ. ಕಾಮಾಕ್ಷಿ ವಾದ ಮಂಡಿಸಿದ್ದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…