ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುವಾರ್ ಯಾವಾಗಲೂ ಉತ್ತರ-ದಕ್ಷಿಣದಂತೆ ಇದ್ದಾರೆ. ಅದಕ್ಕಾಗಿ ಪ್ರತ್ಯೇಕವಾಗಿ ಪ್ರವಾಸ ವಾಡುತ್ತಿದ್ದಾರೆಯೇ ಹೊರತು ಬೇರೇನೂ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಪಾದಯಾತ್ರೆಗಳು ನಡೆಯುವುದು ಸಾಮಾನ್ಯ. ಜನರ ಕಷ್ಟಕ್ಕೆ ಯಾವ ಸಮಯದಲ್ಲಿ ಕೆಲಸ ಮಾಡಿದ್ದಾರೆ ಎಂಬುದನ್ನು ಜನರು ನೋಡಿದ್ದಾರೆ. ನಾಲ್ಕೂ ವರ್ಷಗಳಿಂದ ಅವರಿಗೆ ಯಾವುದೇ ಸಮಸ್ಯೆಗಳು ಕಾಣಿಸಲಿಲ್ಲ. ಈಗ ಜನರು ಸಮಸ್ಯೆ ಎದುರಿಸುತ್ತಿದ್ದಾರೆಂದು ಯಾತ್ರೆ ಹೊರಟಿದ್ದಾರೆ ಎಂದು ಲೇವಡಿ ಮಾಡಿದರು.
ಜಾ.ದಳ ಮತ್ತು ಕಾಂಗ್ರೆಸ್ನಿಂದ ಬಿಜೆಪಿಗೆ ಬಂದಿರುವ ಶಾಸಕರಲ್ಲಿ ಯಾರೂ ವಾಪಸ್ ಹೋಗುವುದಿಲ್ಲ. ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಕೂಡ ಹೋಗುವುದಿಲ್ಲ ಪಕ್ಷ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದೆ ಎಂದು ಹೇಳಿದರು.
ಬಹುವಚನ ಕಲಿತಿಲ್ಲ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಎಲ್ಲವನ್ನೂ ಕಲಿತಿದ್ದಾರೆ. ಆದರೆ, ಬಹುವಚನ ಬಳಸುವುದನ್ನು ಮಾತ್ರ ಕಲಿಯಲಿಲ್ಲ. ಹಿರಿಯರಾದ ಅವರು ನನ್ನ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದಕ್ಕೆ ನನಗೇನೂ ಬೇಜಾರಿಲ್ಲ. ಅವರು ಹಾಗೆ ಮಾತನಾಡುವುದರಲ್ಲಿ ವಿಶೇಷ ಏನಿಲ್ಲ. ಒಂದು ರೀತಿಯಲ್ಲಿ ನಾನು ನ್ಯೂಕ್ಲಿಯರ್ ಇದ್ದಂತೆ. ಕೆಲವು ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಸ್ಪರ್ಧಿಯಾಗಿ ನಾನು ಕೆಲಸ ಮಾಡುತ್ತಿರುವುದರಿಂದ ನನ್ನನ್ನು ಟಾರ್ಗೆಟ್ ಮಾಡಿಕೊಂಡು ಮಾತನಾಡುತ್ತಿದ್ದಾರೆ ಎಂದರು.
ಓಮೈಕ್ರಾನ್ ತಳಿ ಪತ್ತೆ ಆಗಿಲ್ಲ: ಮಹಾರಾಷ್ಟ್ರದಲ್ಲಿ ಒಂದು ಓಮೈಕ್ರಾನ್ ಪ್ರಕರಣ ಪತ್ತೆಯಾಗಿದೆ. ಆದರೆ ಕರ್ನಾಟಕದಲ್ಲಿ ಆ ರೂಪಾಂತರಿ ತಳಿ ಪತ್ತೆ ಆಗಿಲ್ಲ, ಹೀಗಿದ್ದರೂ ಗಡಿ ಜಿಲ್ಲೆಗಳಿಗೆ ಮಾರ್ಗಸೂಚಿ ನೀಡಿದ್ದೇವೆ.
ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡುವ ಸಂದರ್ಭ ಬಂದಿಲ್ಲ.ಕೋವಿಡ್ ಲಸಿಕೆ ನೀಡುವಲ್ಲಿ 1 ನೇ ಹಾಗೂ 2ನೇ ಡೋಸ್ ಶೇ.100 ರಷ್ಟು ಗಡಿ ದಾಟಿದೆ. ಎಲ್ಲರೂ ಮೂರನೇ ಡೋಸ್ ಹಾಕಿಸಿಕೊಳ್ಳಬೇಕು.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…