ಮೈಸೂರು

ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಉತ್ತರ-ದಕ್ಷಿಣ ಇದ್ದಂತೆ : ಸುಧಾಕರ್‌ ವಾಗ್ದಾಳಿ

ಮೈಸೂರು: ವಿಧಾನಸಭೆ  ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುವಾರ್  ಯಾವಾಗಲೂ  ಉತ್ತರ-ದಕ್ಷಿಣದಂತೆ ಇದ್ದಾರೆ. ಅದಕ್ಕಾಗಿ  ಪ್ರತ್ಯೇಕವಾಗಿ ಪ್ರವಾಸ ವಾಡುತ್ತಿದ್ದಾರೆಯೇ ಹೊರತು ಬೇರೇನೂ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಪಾದಯಾತ್ರೆಗಳು  ನಡೆಯುವುದು ಸಾಮಾನ್ಯ. ಜನರ ಕಷ್ಟಕ್ಕೆ ಯಾವ ಸಮಯದಲ್ಲಿ  ಕೆಲಸ ಮಾಡಿದ್ದಾರೆ ಎಂಬುದನ್ನು ಜನರು ನೋಡಿದ್ದಾರೆ. ನಾಲ್ಕೂ ವರ್ಷಗಳಿಂದ ಅವರಿಗೆ ಯಾವುದೇ ಸಮಸ್ಯೆಗಳು ಕಾಣಿಸಲಿಲ್ಲ. ಈಗ ಜನರು ಸಮಸ್ಯೆ ಎದುರಿಸುತ್ತಿದ್ದಾರೆಂದು ಯಾತ್ರೆ ಹೊರಟಿದ್ದಾರೆ ಎಂದು ಲೇವಡಿ ಮಾಡಿದರು.

ಜಾ.ದಳ ಮತ್ತು ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದಿರುವ ಶಾಸಕರಲ್ಲಿ ಯಾರೂ ವಾಪಸ್ ಹೋಗುವುದಿಲ್ಲ. ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಕೂಡ ಹೋಗುವುದಿಲ್ಲ ಪಕ್ಷ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದೆ ಎಂದು ಹೇಳಿದರು.

ಬಹುವಚನ ಕಲಿತಿಲ್ಲ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಎಲ್ಲವನ್ನೂ ಕಲಿತಿದ್ದಾರೆ. ಆದರೆ, ಬಹುವಚನ ಬಳಸುವುದನ್ನು ಮಾತ್ರ ಕಲಿಯಲಿಲ್ಲ.  ಹಿರಿಯರಾದ ಅವರು ನನ್ನ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದಕ್ಕೆ ನನಗೇನೂ ಬೇಜಾರಿಲ್ಲ. ಅವರು ಹಾಗೆ ಮಾತನಾಡುವುದರಲ್ಲಿ ವಿಶೇಷ ಏನಿಲ್ಲ. ಒಂದು ರೀತಿಯಲ್ಲಿ ನಾನು ನ್ಯೂಕ್ಲಿಯರ್‌ ಇದ್ದಂತೆ. ಕೆಲವು ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಸ್ಪರ್ಧಿಯಾಗಿ ನಾನು ಕೆಲಸ ಮಾಡುತ್ತಿರುವುದರಿಂದ ನನ್ನನ್ನು ಟಾರ್ಗೆಟ್ ಮಾಡಿಕೊಂಡು ಮಾತನಾಡುತ್ತಿದ್ದಾರೆ ಎಂದರು.

ಓಮೈಕ್ರಾನ್ ತಳಿ ಪತ್ತೆ ಆಗಿಲ್ಲ: ಮಹಾರಾಷ್ಟ್ರದಲ್ಲಿ ಒಂದು ಓಮೈಕ್ರಾನ್ ಪ್ರಕರಣ ಪತ್ತೆಯಾಗಿದೆ. ಆದರೆ ಕರ್ನಾಟಕದಲ್ಲಿ ಆ ರೂಪಾಂತರಿ ತಳಿ ಪತ್ತೆ ಆಗಿಲ್ಲ, ಹೀಗಿದ್ದರೂ ಗಡಿ ಜಿಲ್ಲೆಗಳಿಗೆ ಮಾರ್ಗಸೂಚಿ ನೀಡಿದ್ದೇವೆ.

ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡುವ ಸಂದರ್ಭ ಬಂದಿಲ್ಲ.ಕೋವಿಡ್ ಲಸಿಕೆ ನೀಡುವಲ್ಲಿ  1 ನೇ ಹಾಗೂ 2ನೇ ಡೋಸ್ ಶೇ.100 ರಷ್ಟು ಗಡಿ ದಾಟಿದೆ. ಎಲ್ಲರೂ ಮೂರನೇ ಡೋಸ್ ಹಾಕಿಸಿಕೊಳ್ಳಬೇಕು.

 

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

17 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

17 hours ago