ಮೈಸೂರು

ಹಿಂದುತ್ವ ಸೀಮಿತ ಪರಿಕಲ್ಪನೆ: ಬಿಳಿಮಲೆ ಅಭಿಮತ

ಮೈಸೂರು: ಭಾರತವು 780ಕ್ಕೂ ಹೆಚ್ಚು ಭಾಷೆ, ಉಪಭಾಷೆ, ಸಾವಿರಾರು ಸಂಸ್ಕೃತಿ, ಉಪಸಂಸ್ಕೃತಿ, ಆಚರಣೆ, ಕಟ್ಟು-ಕಟ್ಟಳೆಗಳನ್ನು ಹೊಂದಿದ ದೇಶವಾಗಿದ್ದು ಹಿಂದುತ್ವದ ಪರಿಕಲ್ಪನೆ ಈ ಎಲ್ಲ ಸಂಸ್ಕೃತಿ, ಆಚರಣೆಗಳನ್ನು ಪ್ರತಿನಿಧಿಸಲು ಸಾಧ್ಯವಿಲ್ಲ ಎಂದು ಖ್ಯಾತ ಚಿಂತಕ, ದಿಲ್ಲಿಯ ಜವಹರ್ಲಾಲ್ ನೆಹರೂ ವಿವಿ ಮಾಜಿ ಪ್ರಾಧ್ಯಾಪಕ ಡಾ. ಪುರುಷೋತ್ತಮ ಬಿಳಿಮಲೆ ಅವರು ಅಭಿಪ್ರಾಯಪಟ್ಟರು.

ಮೈಸೂರಿನ ‘ಬಯಲು’ ತೋಟದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಆಯೋಜಿಸಲಾದ ’ಕರ್ನಾಟಕದ ಆಸ್ಮಿತೆ ಮತ್ತು ಸವಾಲುಗಳು’ ಮೇಲೆ ಉಪನ್ಯಾಸ ನೀಡಿದ ಅವರು, ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ದೇಶದ ಸಂಸ್ಕೃತಿಗೆ ಇಲ್ಲಿನ ಪ್ರತಿಯೊಂದು ಜಾತಿ, ಜನಾಂಗ,ಸಮುದಾಯ, ಧರ್ಮಗಳ ಜನರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ನೂರೆಂಟು ಭಾಷೆಗಳೂ ಒಂದೊಂದು ಸಂಸ್ಕೃತಿಯ ಪ್ರತಿರೂಪವಾಗಿವೆ. ಇವುಗಳೆಲ್ಲವೂ ಒಟ್ಟು ಸೇರಿದರಷ್ಟೇ ಭಾರತೀಯ ಸಂಸ್ಕೃತಿ ಎನಿಸಿಕೊಳ್ಳಲು ಸಾಧ್ಯ. ಹಿಂದುತ್ವವು ಕೆಲವೇ ಜನರಿಗೆ ಸೀಮಿತವಾದ ಪರಿಕಲ್ಪನೆ. ಈ ಕಾರಣಕ್ಕಾಗಿಯೇ ಅಂಬೇಡ್ಕರ್ ಅವರು ಎಲ್ಲ ಹಿಂದೂಗಳನ್ನು ಸಮಾನವಾಗಿ ಕಾಣುವ ಹಿಂದೂ ಸಂಹಿತೆ ರೂಪಿಸುವಂತೆ ಹಿಂದೂ ಮಹಾ ಸಭಾಗೆ ಪತ್ರ ಬರೆದಿದ್ದರು. ಆದರೆ ಅದಕ್ಕೆ ಮಾರುತ್ತರ ಬಂದಿರಲಿಲ್ಲ ಎಂದವರು ಹೇಳಿದರು.

ದೇಶದ ಸಂಸ್ಕೃತಿ, ಪರಂಪರೆಯನ್ನು ಈರುಳ್ಳಿಗೆ ಹೋಲಿಸಿದ ಅವರು ಈರುಳ್ಳಿಯ ಪ್ರತಿ ಪದರವೂ ಅದರ ಭಾಗ. ಒಂದೊಂದು ಪದರವನ್ನು ಕಿತ್ತು ಇದಷ್ಟೇ ನಮ್ಮ ನಮ್ಮ ಸಂಸ್ಕೃತಿ ಎಂದು ಹೇಳಲು ಸಾಧ್ಯವಿಲ್ಲ. ಈ ದೇಶಕ್ಕೆ ವಲಸೆ ಬಂದವರು, ದಂಡೆತ್ತಿ ಬಂದವರು ಸೇರಿದಂತೆ ಎಲ್ಲರೂ ಈಗ ಈ ಮಣ್ಣಿನ ಭಾಗವಾಗಿದ್ದಾರೆ. ಅವರನ್ನು ದೂರವಿರಿಸಿ ಸಮೃದ್ಧ ದೇಶವನ್ನು ಕಟ್ಟಲು ಸಾಧ್ಯವಿಲ್ಲ ಎಂದವರು ವಿಶ್ಲೇಷಿಸಿದರು.

ಎಲ್ಲರನ್ನೂ ತನ್ನವರೆಂದು ಸ್ವೀಕರಿಸುವ ವಿಶಿಷ್ಟವಾದ ಗುಣ ಕನ್ನಡಿಗರದ್ದು. ಉತ್ತರ ದಕ್ಷಿಣಕ್ಕೆ ಕರ್ನಾಟಕವೇ ಸೇತುವಾಗಿತ್ತು. ಕ್ರಿಸ್ತ ಪೂರ್ವದಲ್ಲಿಯೇ ಚಂದ್ರಗುಪ್ತ ಮೌರ್ಯ ಶ್ರವಣಬೆಳಗೊಳಕ್ಕೆ ಬಂದು ಸಲ್ಲೇಖನ ವ್ರತ ಕೈಗೊಳ್ಳುತ್ತಾನೆ. ಶಂಕಾರಾಚಾರ್ಯರ ಎದುರು ವಾದದಲ್ಲಿ ಸೋತ ಮಂಡನ ಮಿಶ್ರಾ ಮತ್ತು ಪತ್ನಿ ಉಭಯ ಭಾರತಿ ಅವರು ದೂರದ ಬಿಹಾರದಿಂದ ಬಂದು ಶೃಂಗೇರಿ ಮಠದ ಮೊದಲ ಮುಖ್ಯಸ್ಥರಾಗುತ್ತಾರೆ. ಚೋಳರ ವಿರೋಧಕ್ಕೊಳಗಾದ ರಾಮಾನುಜಾಚಾರ್ಯರಿಗೆ ಹೊಯ್ಸಳರು ಆಶ್ರಯ ನೀಡುತ್ತಾರೆ. ಬಸವಣ್ಣನ ಕಾಯಕ ತತ್ವಕ್ಕೆ ಮನಸೋತ ಅಲ್ಲಮ ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಾನೆ. ಟರ್ಕಿಯಿಂದ ಬಂದ ಮಹಮ್ಮದೀಯರು ಬಹುಮನಿ ಸುಲ್ತಾನರಾಗುತ್ತಾರೆ. ಧರ್ಮ ಪ್ರಚಾರಕ್ಕೆ ಬಂದ ಜರ್ಮನ್ನರು ಕನ್ನಡದ ನೆಲದಲ್ಲಿ ಸಾರ್ವತ್ರಿಕ ಶಿಕ್ಷಣಕ್ಕೆ ಬುನಾದಿ ಹಾಡುತ್ತಾರೆ. ಎಲ್ಲರನ್ನೂ ಆದರಿಸುವ ಈ ಪರಂಪರೆ ಕರ್ನಾಟಕದ ವೈಶಿಷ್ಟ್ಯ ಎಂದವರು ವಿಶ್ಲೇಷಿಸಿದರು.

ಕನ್ನಡಿಗರ ಸಂಸ್ಕೃತಿ ಎಂದರೆ ಇಲ್ಲಿನ ಜನಪದರ ಸಂಸ್ಕೃತಿ, ವೈಷ್ಣವರು, ಶೈವರು, ಶಾಕ್ತರು, ಶರಣರು, ಬೌದ್ಧ, ಜೈನ, ಮಹಮ್ಮದೀಯ, ಕ್ರೈಸ್ತರ ಸಂಸ್ಕೃತಿ ಸೇರಿದಂತೆ ನೂರಾರು ಸಂಸ್ಕೃತಿಗಳು, ಜೀವನ ದರ್ಶನಗಳ ಭಾಗವಾಗಿದೆ. ಗಣಪತಿಯನ್ನು ಮೊದಲು ಆರಾಧಿಸುವ ವೈದಿಕ ಪದ್ದತಿಗೆ ಭಿನ್ನವಾಗಿ ನಮ್ಮ ಜನಪದರು ಯಾವ ವಿಗ್ರಹಗಳೂ ಇಲ್ಲದೆ ದೀಪವನ್ನಷ್ಟೇ ಬೆಳಗಿಸಿ ಸ್ತುತಿಸುವ ಸಂಸ್ಕೃತಿ ಹೊಂದಿದ್ದರು. ಇವೆಲ್ಲವೂ ಒಂದಕ್ಕೊಂದು ಬೆಸೆದುಕೊಂಡು ನಾಡಿನ ಅಸ್ಮಿತೆಯಾಗಿವೆ. ಈ ಕಾರಣಕ್ಕಾಗಿಯೇ ನಮ್ಮದು ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಹಿಂದುತ್ವ ಅಥವಾ ಏಕರೂಪದ ನಾಗರಿಕ ಸಂಹಿತೆ ಎನ್ನುವುದು ನಮ್ಮ ಬಹುರೂಪಿ ಸಂಸ್ಕೃತಿಗೆ ವಿರುದ್ಧವಾಗಿದೆ ಎಂದವರು ಅಭಿಪ್ರಾಯಪಟ್ಟರು.

ಮಾನವ ಬಂಧುತ್ವ ವೇದಿಕೆಯ ಡಾ. ಲೀಲಾ ಸಂಪಿಗೆ, ಎ.ಕೆ. ಕರುಣಾಕರ, ಲೇಖಕಿ, ಕವಯತ್ರಿ ಕೆ. ಷರೀಫಾ, ಪ್ರಾಧ್ಯಾಪಕಿಯರಾದ ಡಾ.ಲೋಲಾಕ್ಷಿ, ಡಾ. ಮೀರಾ, ಹಿರಿಯ ಪತ್ರಕರ್ತ ಜಯ ಕುಮಾರ್‌,ಕಲಾವಿದ ವಿಶ್ವ ವಿನ್ಯಾಸ್‌,ದೇವರಾಜ ಕೊಪ್ಪ,ಸುಭಾಷ್‌ ಮಾಡ್ರಳ್ಳಿ,ರಂಗಸ್ವಾಮಿ,ಡಾ.ಸೋಮಶೇಖರ್ ಸೇರಿದಂತೆ ನಾನಾ ಜಿಲ್ಲೆಗಳ ಚಿಂತಕರು, ಬರಹಗಾರರು ಭಾಗವಹಿಸಿದ್ದರು.

andolanait

Recent Posts

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

41 seconds ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

2 mins ago

ಯುವಜನರ ಕೈಯಲ್ಲಿ ಮೊಬೈಲ್ ಇದೆ; ದಿಕ್ಕು ಇದೆಯೇ?

ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…

5 mins ago

ಕಾಯಿಗಟ್ಟುವ ಸಮಯದಲ್ಲೇ ಹಣ್ಣಾಗುತ್ತಿರುವ ಅರೆಬಿಕಾ ಕಾಫಿ

ಲಕ್ಷ್ಮಿಕಾಂತ್ ಕೊಮಾರಪ್ಪ ಹವಾಮಾನ ವೈಪರೀತ್ಯದಿಂದ ಬೆಳೆಗಾರರಿಗೆ ಹೊಸ ಸಂಕಷ್ಟ; ಕೊಯ್ಲು, ಪಲ್ಪಿಂಗ್ ಜೊತೆಗೆ ಒಣಗಿಸುವುದೂ ಸವಾಲು ಸೋಮವಾರಪೇಟೆ: ಕಾಫಿ ತೋಟಗಳಲ್ಲಿ…

11 mins ago

ಮುತ್ತತ್ತಿಯ ನಿಷೇಧಿತ ಪ್ರದೇಶಗಳಲ್ಲಿ ಕಾವೇರಿ ನದಿಗಿಳಿದು ದುಸ್ಸಾಹಸ

ಉಮೇಶ್ ಹಲಗೂರು ಪ್ರವಾಸಿಗರನ್ನು ರಕ್ಷಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ ಲು ಸಾರ್ವಜನಿಕರ ಆಗ್ರಹ ಜಿಲ್ಲಾಡಳಿತದ ಆದೇಶಕ್ಕೂ ಕ್ಯಾರೇ ಎನ್ನದ ಪ್ರವಾಸಿಗರು…

17 mins ago