lion-foot-print
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಹೋಬಳಿಯ ನಂಜಾಪುರ, ಗೌರಿಪುರ ಗ್ರಾಮಗಳ ಸುತ್ತಮುತ್ತ ಕಳೆದೊಂದು ವಾರದಿಂದ ಹುಲಿ ಅಡ್ಡಾಡಿರುವ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.
ನಂಜಾಪುರದ ಸಿದ್ದರಾಜು, ಪುಟ್ಟಶೆಟ್ಟಿ, ವಿಠಲ್, ಮನುಕುಮಾರ್, ಗೌರಿಪುರದ ಚಿಕ್ಕಕಣ್ಣೀಗೌಡರ ಜಮೀನಿನಲ್ಲಿ ಹಾಗೂ ಬಳಗಾರನಕಟ್ಟೆ ಬಳಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಪಕ್ಕದ ಧರ್ಮಾಪುರ ಅರಣ್ಯ ಪ್ರದೇಶದತ್ತ ಹೋಗಿರುವ ಹೆಜ್ಜೆ ಗುರುತು ಪತ್ತೆಯಾಗಿದೆ.
ಈ ಭಾಗದಲ್ಲಿ ವಿಪರೀತ ಚಿರತೆ, ಹಂದಿ ಕಾಟವೂ ಇದ್ದು, ರೈತರು ಹಾಗೂ ಗ್ರಾಮಸ್ಥರು ಸಂಜೆಯಾದರೆ ಓಡಾಡಲು ಹೆದರುತ್ತಿದ್ದಾರೆ. ಸ್ಥಳಕ್ಕೆ ಪ್ರಾದೇಶಿಕ ಅರಣ್ಯ ವಿಭಾಗದ ಗಸ್ತು ಅರಣ್ಯ ಪಾಲಕ ಗಣೇಶ್ ಹಾಗೂ ಸಿಬ್ಬಂದಿ ಭೇಟಿ ಇತ್ತು ಹೆಜ್ಜೆ ಗುರುತು ಪರಿಶೀಲಿಸಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಪರಿಶೀಲಿಸಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವನ್ಯಪ್ರಾಣಿಯ ಸೆರೆಗೆ ಬೋನು ಇರಿಸಿ ಕ್ರಮವಹಿಸಲಾಗುವುದು ಎಂದು ಆರ್ಎಫ್ಒ ನಂದಕುಮಾರ್ ತಿಳಿಸಿದ್ದಾರೆ.
ಹುಲಿ ಚಿರತೆ ಕಾಟ ತಪ್ಪಿಸಿ: ಈ ಭಾಗದಲ್ಲಿ ಸಾಕಷ್ಟು ಚಿರತೆಗಳೂ ಇದ್ದು, ಅರಣ್ಯ ಇಲಾಖೆ ಬೋನು ಇಟ್ಟು ಚಿರತೆ ಸೆರೆಹಿಡಿಯಬೇಕೆಂದು ಗ್ರಾ.ಪಂ. ಸದಸ್ಯ ನಂಜಾಪುರ ಮನುಕುಮಾರ್ ಆಗ್ರಹಿಸಿದ್ದಾರೆ.
ಎಚ್.ಎಸ್.ದಿನೇಶ್ಕುಮಾರ್ ಸರ್ಕಾರದ ನಿರ್ಧಾರಕ್ಕೆ ಮಾಜಿ ಮಹಾಪೌರರು, ಮಾಜಿ ಸದಸ್ಯರ ವಿರೋಧ ಮೈಸೂರು: ಬಿಬಿಎಂಪಿ ಹೊರತುಪಡಿಸಿ ಮೈಸೂರು ನಗರಪಾಲಿಕೆ ಸೇರಿದಂತೆ ರಾಜ್ಯದ…
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…