ಮೈಸೂರು

ಹುಲಿ ಹೆಜ್ಜೆ ಪತ್ತೆ : ಗ್ರಾಮಸ್ಥರಲ್ಲಿ ಭೀತಿ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಹೋಬಳಿಯ ನಂಜಾಪುರ, ಗೌರಿಪುರ ಗ್ರಾಮಗಳ ಸುತ್ತಮುತ್ತ ಕಳೆದೊಂದು ವಾರದಿಂದ ಹುಲಿ ಅಡ್ಡಾಡಿರುವ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.

ನಂಜಾಪುರದ ಸಿದ್ದರಾಜು, ಪುಟ್ಟಶೆಟ್ಟಿ, ವಿಠಲ್, ಮನುಕುಮಾರ್, ಗೌರಿಪುರದ ಚಿಕ್ಕಕಣ್ಣೀಗೌಡರ ಜಮೀನಿನಲ್ಲಿ ಹಾಗೂ ಬಳಗಾರನಕಟ್ಟೆ ಬಳಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಪಕ್ಕದ ಧರ್ಮಾಪುರ ಅರಣ್ಯ ಪ್ರದೇಶದತ್ತ ಹೋಗಿರುವ ಹೆಜ್ಜೆ ಗುರುತು ಪತ್ತೆಯಾಗಿದೆ.

ಈ ಭಾಗದಲ್ಲಿ ವಿಪರೀತ ಚಿರತೆ, ಹಂದಿ ಕಾಟವೂ ಇದ್ದು, ರೈತರು ಹಾಗೂ ಗ್ರಾಮಸ್ಥರು ಸಂಜೆಯಾದರೆ ಓಡಾಡಲು ಹೆದರುತ್ತಿದ್ದಾರೆ. ಸ್ಥಳಕ್ಕೆ ಪ್ರಾದೇಶಿಕ ಅರಣ್ಯ ವಿಭಾಗದ ಗಸ್ತು ಅರಣ್ಯ ಪಾಲಕ ಗಣೇಶ್ ಹಾಗೂ ಸಿಬ್ಬಂದಿ ಭೇಟಿ ಇತ್ತು ಹೆಜ್ಜೆ ಗುರುತು ಪರಿಶೀಲಿಸಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಪರಿಶೀಲಿಸಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವನ್ಯಪ್ರಾಣಿಯ ಸೆರೆಗೆ ಬೋನು ಇರಿಸಿ ಕ್ರಮವಹಿಸಲಾಗುವುದು ಎಂದು ಆರ್‌ಎಫ್‌ಒ ನಂದಕುಮಾರ್ ತಿಳಿಸಿದ್ದಾರೆ.

ಹುಲಿ ಚಿರತೆ ಕಾಟ ತಪ್ಪಿಸಿ: ಈ ಭಾಗದಲ್ಲಿ ಸಾಕಷ್ಟು ಚಿರತೆಗಳೂ ಇದ್ದು, ಅರಣ್ಯ ಇಲಾಖೆ ಬೋನು ಇಟ್ಟು ಚಿರತೆ ಸೆರೆಹಿಡಿಯಬೇಕೆಂದು ಗ್ರಾ.ಪಂ. ಸದಸ್ಯ ನಂಜಾಪುರ ಮನುಕುಮಾರ್ ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಾಲೆಗಳಲ್ಲಿ ವಂದೇ ಮಾತರಂ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ ಹೈಕೋರ್ಟ್‌ನಿಂದ ಅರ್ಜಿ ವಜಾ

ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ ವಂದೇ ಮಾತರಂ'ಗೀತೆಯನ್ನು ಎಲ್ಲ ಆರು ಚರಣಗಳೊಂದಿಗೆ ಕಡ್ಡಾಯವಾಗಿ ಹಾಡುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಶಿಷ್ಟಾಚಾರ…

20 mins ago

ದ್ವಿತೀಯ ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡದ ದಿಶಾ ರಾಜ್ಯಕ್ಕೆ ಪ್ರಥಮ

ಮಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್‌ ಕಾಲೇಜು ವಿದ್ಯಾರ್ಥಿನಿ ದಿಶಾ 600ಕ್ಕೆ…

47 mins ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ.…

1 hour ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ https:karresults.nic.in ನಲ್ಲಿ…

2 hours ago

ಇಸ್ರೇಲ್‌ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಸಾವು

ಟೆಲ್‌ಅವೀವ್:‌ ಕದನ ವಿರಾಮದ ನಡುವೆಯೂ ಲೆಬನಾನ್‌ನಲ್ಲಿ ಇಸ್ರೇಲ್‌ ಏರ್‌ಸ್ಟೈಕ್‌ ನಡೆಸಿ ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್‌ ಕಾಸೆಮ್‌ನ ಸೋದರಳಿಯ ಯೂಸುಫ್‌ ಹರ್ಷಿಯನ್ನು…

2 hours ago

ಹಾರ್ಮುಜ್‌ ಸಂಚಾರಕ್ಕೆ 2 ಹೊಸ ಮಾರ್ಗ ಪ್ರಕಟಿಸಿದ ಐಆರ್‌ಜಿಸಿ

ಟೆಹ್ರಾನ್‌ : ಅಮೆರಿಕ ಮತ್ತು ಇರಾನ್‌ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್…

2 hours ago