lion-foot-print
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಹೋಬಳಿಯ ನಂಜಾಪುರ, ಗೌರಿಪುರ ಗ್ರಾಮಗಳ ಸುತ್ತಮುತ್ತ ಕಳೆದೊಂದು ವಾರದಿಂದ ಹುಲಿ ಅಡ್ಡಾಡಿರುವ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.
ನಂಜಾಪುರದ ಸಿದ್ದರಾಜು, ಪುಟ್ಟಶೆಟ್ಟಿ, ವಿಠಲ್, ಮನುಕುಮಾರ್, ಗೌರಿಪುರದ ಚಿಕ್ಕಕಣ್ಣೀಗೌಡರ ಜಮೀನಿನಲ್ಲಿ ಹಾಗೂ ಬಳಗಾರನಕಟ್ಟೆ ಬಳಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಪಕ್ಕದ ಧರ್ಮಾಪುರ ಅರಣ್ಯ ಪ್ರದೇಶದತ್ತ ಹೋಗಿರುವ ಹೆಜ್ಜೆ ಗುರುತು ಪತ್ತೆಯಾಗಿದೆ.
ಈ ಭಾಗದಲ್ಲಿ ವಿಪರೀತ ಚಿರತೆ, ಹಂದಿ ಕಾಟವೂ ಇದ್ದು, ರೈತರು ಹಾಗೂ ಗ್ರಾಮಸ್ಥರು ಸಂಜೆಯಾದರೆ ಓಡಾಡಲು ಹೆದರುತ್ತಿದ್ದಾರೆ. ಸ್ಥಳಕ್ಕೆ ಪ್ರಾದೇಶಿಕ ಅರಣ್ಯ ವಿಭಾಗದ ಗಸ್ತು ಅರಣ್ಯ ಪಾಲಕ ಗಣೇಶ್ ಹಾಗೂ ಸಿಬ್ಬಂದಿ ಭೇಟಿ ಇತ್ತು ಹೆಜ್ಜೆ ಗುರುತು ಪರಿಶೀಲಿಸಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಪರಿಶೀಲಿಸಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವನ್ಯಪ್ರಾಣಿಯ ಸೆರೆಗೆ ಬೋನು ಇರಿಸಿ ಕ್ರಮವಹಿಸಲಾಗುವುದು ಎಂದು ಆರ್ಎಫ್ಒ ನಂದಕುಮಾರ್ ತಿಳಿಸಿದ್ದಾರೆ.
ಹುಲಿ ಚಿರತೆ ಕಾಟ ತಪ್ಪಿಸಿ: ಈ ಭಾಗದಲ್ಲಿ ಸಾಕಷ್ಟು ಚಿರತೆಗಳೂ ಇದ್ದು, ಅರಣ್ಯ ಇಲಾಖೆ ಬೋನು ಇಟ್ಟು ಚಿರತೆ ಸೆರೆಹಿಡಿಯಬೇಕೆಂದು ಗ್ರಾ.ಪಂ. ಸದಸ್ಯ ನಂಜಾಪುರ ಮನುಕುಮಾರ್ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…