lion-foot-print
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಹೋಬಳಿಯ ನಂಜಾಪುರ, ಗೌರಿಪುರ ಗ್ರಾಮಗಳ ಸುತ್ತಮುತ್ತ ಕಳೆದೊಂದು ವಾರದಿಂದ ಹುಲಿ ಅಡ್ಡಾಡಿರುವ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.
ನಂಜಾಪುರದ ಸಿದ್ದರಾಜು, ಪುಟ್ಟಶೆಟ್ಟಿ, ವಿಠಲ್, ಮನುಕುಮಾರ್, ಗೌರಿಪುರದ ಚಿಕ್ಕಕಣ್ಣೀಗೌಡರ ಜಮೀನಿನಲ್ಲಿ ಹಾಗೂ ಬಳಗಾರನಕಟ್ಟೆ ಬಳಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಪಕ್ಕದ ಧರ್ಮಾಪುರ ಅರಣ್ಯ ಪ್ರದೇಶದತ್ತ ಹೋಗಿರುವ ಹೆಜ್ಜೆ ಗುರುತು ಪತ್ತೆಯಾಗಿದೆ.
ಈ ಭಾಗದಲ್ಲಿ ವಿಪರೀತ ಚಿರತೆ, ಹಂದಿ ಕಾಟವೂ ಇದ್ದು, ರೈತರು ಹಾಗೂ ಗ್ರಾಮಸ್ಥರು ಸಂಜೆಯಾದರೆ ಓಡಾಡಲು ಹೆದರುತ್ತಿದ್ದಾರೆ. ಸ್ಥಳಕ್ಕೆ ಪ್ರಾದೇಶಿಕ ಅರಣ್ಯ ವಿಭಾಗದ ಗಸ್ತು ಅರಣ್ಯ ಪಾಲಕ ಗಣೇಶ್ ಹಾಗೂ ಸಿಬ್ಬಂದಿ ಭೇಟಿ ಇತ್ತು ಹೆಜ್ಜೆ ಗುರುತು ಪರಿಶೀಲಿಸಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಪರಿಶೀಲಿಸಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವನ್ಯಪ್ರಾಣಿಯ ಸೆರೆಗೆ ಬೋನು ಇರಿಸಿ ಕ್ರಮವಹಿಸಲಾಗುವುದು ಎಂದು ಆರ್ಎಫ್ಒ ನಂದಕುಮಾರ್ ತಿಳಿಸಿದ್ದಾರೆ.
ಹುಲಿ ಚಿರತೆ ಕಾಟ ತಪ್ಪಿಸಿ: ಈ ಭಾಗದಲ್ಲಿ ಸಾಕಷ್ಟು ಚಿರತೆಗಳೂ ಇದ್ದು, ಅರಣ್ಯ ಇಲಾಖೆ ಬೋನು ಇಟ್ಟು ಚಿರತೆ ಸೆರೆಹಿಡಿಯಬೇಕೆಂದು ಗ್ರಾ.ಪಂ. ಸದಸ್ಯ ನಂಜಾಪುರ ಮನುಕುಮಾರ್ ಆಗ್ರಹಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…