lion-foot-print
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಹೋಬಳಿಯ ನಂಜಾಪುರ, ಗೌರಿಪುರ ಗ್ರಾಮಗಳ ಸುತ್ತಮುತ್ತ ಕಳೆದೊಂದು ವಾರದಿಂದ ಹುಲಿ ಅಡ್ಡಾಡಿರುವ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.
ನಂಜಾಪುರದ ಸಿದ್ದರಾಜು, ಪುಟ್ಟಶೆಟ್ಟಿ, ವಿಠಲ್, ಮನುಕುಮಾರ್, ಗೌರಿಪುರದ ಚಿಕ್ಕಕಣ್ಣೀಗೌಡರ ಜಮೀನಿನಲ್ಲಿ ಹಾಗೂ ಬಳಗಾರನಕಟ್ಟೆ ಬಳಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಪಕ್ಕದ ಧರ್ಮಾಪುರ ಅರಣ್ಯ ಪ್ರದೇಶದತ್ತ ಹೋಗಿರುವ ಹೆಜ್ಜೆ ಗುರುತು ಪತ್ತೆಯಾಗಿದೆ.
ಈ ಭಾಗದಲ್ಲಿ ವಿಪರೀತ ಚಿರತೆ, ಹಂದಿ ಕಾಟವೂ ಇದ್ದು, ರೈತರು ಹಾಗೂ ಗ್ರಾಮಸ್ಥರು ಸಂಜೆಯಾದರೆ ಓಡಾಡಲು ಹೆದರುತ್ತಿದ್ದಾರೆ. ಸ್ಥಳಕ್ಕೆ ಪ್ರಾದೇಶಿಕ ಅರಣ್ಯ ವಿಭಾಗದ ಗಸ್ತು ಅರಣ್ಯ ಪಾಲಕ ಗಣೇಶ್ ಹಾಗೂ ಸಿಬ್ಬಂದಿ ಭೇಟಿ ಇತ್ತು ಹೆಜ್ಜೆ ಗುರುತು ಪರಿಶೀಲಿಸಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಪರಿಶೀಲಿಸಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವನ್ಯಪ್ರಾಣಿಯ ಸೆರೆಗೆ ಬೋನು ಇರಿಸಿ ಕ್ರಮವಹಿಸಲಾಗುವುದು ಎಂದು ಆರ್ಎಫ್ಒ ನಂದಕುಮಾರ್ ತಿಳಿಸಿದ್ದಾರೆ.
ಹುಲಿ ಚಿರತೆ ಕಾಟ ತಪ್ಪಿಸಿ: ಈ ಭಾಗದಲ್ಲಿ ಸಾಕಷ್ಟು ಚಿರತೆಗಳೂ ಇದ್ದು, ಅರಣ್ಯ ಇಲಾಖೆ ಬೋನು ಇಟ್ಟು ಚಿರತೆ ಸೆರೆಹಿಡಿಯಬೇಕೆಂದು ಗ್ರಾ.ಪಂ. ಸದಸ್ಯ ನಂಜಾಪುರ ಮನುಕುಮಾರ್ ಆಗ್ರಹಿಸಿದ್ದಾರೆ.
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…