ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 3 ರಂದು ದಸರಾ ಉದ್ಘಾಟನೆ ಆಗಲಿದ್ದು, ಅ.12ರಂದು ಜಂಬೂಸವಾರಿ ನಡೆಯಲಿದೆ.
ಇದೀಗ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 13 ಗಂಡು ಮತ್ತು 5 ಹೆಣ್ಣು ಆನೆ ಸೇರಿದಂತೆ 18 ಆನೆಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಬಾರಿಯೂ ನಾಡದೇವಿ ಚಾಮುಂಡೇಶ್ವರಿ ವಿಗ್ರಹವುಳ್ಳ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದು, ಪ್ರಥಮ ಹಂತದಲ್ಲಿ 9 ಹಾಗೂ 2ನೇ ಹಂತದಲ್ಲಿ 5 ಆನೆ ಆಗಮಿಸಲಿವೆ.
ಮೊದಲನೇ ತಂಡದಲ್ಲಿ ಅಭಿಮನ್ಯು, ವರಲಕ್ಷ್ಮೀ, ಧನಂಜಯ್, ಗೋಪಿ, ಭೀಮ, ಲಕ್ಷ್ಮೀ, ಕಂಜನ್,ರೋಹಿತ್ ಹಾಗೂ ಏಕಲವ್ಯ, ಎರಡನೇ ಹಂತದಲ್ಲಿ ಮಹೇಂದ್ರ, ಗೋಪಿ, ಪ್ರಶಾಂತ, ಸುಗ್ರೀವ, ಹಿರಣ್ಯ, ವರಲಕ್ಷ್ಮೀ ಮತ್ತು ದೊಡ್ಡ ಹರವೇ ಲಕ್ಷ್ಮೀ ಆನೆಗಳು ಪಾಲ್ಗೊಳ್ಳಲಿವೆ.
ಸಂಪ್ರದಾಯದಂತೆ ಮೈಸೂರು ಜಿಲ್ಲಾಡಳಿತದ ಸಹಯೋಗದಲ್ಲಿ ವೀರನಹೊಸಹಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮೊದಲ ತಂಡದ ಆನೆಗಳಿಗೆ ಪೂಜೆ ಸಲ್ಲಿಸಿ, ಮಾವುತರು ಮತ್ತು ಕಾವಾಡಿಗರಿಗೆ ಸತ್ಕರಿಸಿ ಆನೆಗಳನ್ನು ಕಾಡಿನಿಂದ ನಾಡಿಗೆ ಕಳುಹಿಸುವ ಗಜಪಯಣ ಆರಂಭವಾಗಲಿದೆ. ಮೊದಲ ತಂಡದಲ್ಲಿ 9 ಆನೆಗಳು ಹಾಗೂ ಎರಡನೇ ಹಂತದಲ್ಲಿ 5 ಆನೆಗಳು ನಾಡಿಗೆ ಬರಲಿವೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…