ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 3 ರಂದು ದಸರಾ ಉದ್ಘಾಟನೆ ಆಗಲಿದ್ದು, ಅ.12ರಂದು ಜಂಬೂಸವಾರಿ ನಡೆಯಲಿದೆ.
ಇದೀಗ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 13 ಗಂಡು ಮತ್ತು 5 ಹೆಣ್ಣು ಆನೆ ಸೇರಿದಂತೆ 18 ಆನೆಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಬಾರಿಯೂ ನಾಡದೇವಿ ಚಾಮುಂಡೇಶ್ವರಿ ವಿಗ್ರಹವುಳ್ಳ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದು, ಪ್ರಥಮ ಹಂತದಲ್ಲಿ 9 ಹಾಗೂ 2ನೇ ಹಂತದಲ್ಲಿ 5 ಆನೆ ಆಗಮಿಸಲಿವೆ.
ಮೊದಲನೇ ತಂಡದಲ್ಲಿ ಅಭಿಮನ್ಯು, ವರಲಕ್ಷ್ಮೀ, ಧನಂಜಯ್, ಗೋಪಿ, ಭೀಮ, ಲಕ್ಷ್ಮೀ, ಕಂಜನ್,ರೋಹಿತ್ ಹಾಗೂ ಏಕಲವ್ಯ, ಎರಡನೇ ಹಂತದಲ್ಲಿ ಮಹೇಂದ್ರ, ಗೋಪಿ, ಪ್ರಶಾಂತ, ಸುಗ್ರೀವ, ಹಿರಣ್ಯ, ವರಲಕ್ಷ್ಮೀ ಮತ್ತು ದೊಡ್ಡ ಹರವೇ ಲಕ್ಷ್ಮೀ ಆನೆಗಳು ಪಾಲ್ಗೊಳ್ಳಲಿವೆ.
ಸಂಪ್ರದಾಯದಂತೆ ಮೈಸೂರು ಜಿಲ್ಲಾಡಳಿತದ ಸಹಯೋಗದಲ್ಲಿ ವೀರನಹೊಸಹಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮೊದಲ ತಂಡದ ಆನೆಗಳಿಗೆ ಪೂಜೆ ಸಲ್ಲಿಸಿ, ಮಾವುತರು ಮತ್ತು ಕಾವಾಡಿಗರಿಗೆ ಸತ್ಕರಿಸಿ ಆನೆಗಳನ್ನು ಕಾಡಿನಿಂದ ನಾಡಿಗೆ ಕಳುಹಿಸುವ ಗಜಪಯಣ ಆರಂಭವಾಗಲಿದೆ. ಮೊದಲ ತಂಡದಲ್ಲಿ 9 ಆನೆಗಳು ಹಾಗೂ ಎರಡನೇ ಹಂತದಲ್ಲಿ 5 ಆನೆಗಳು ನಾಡಿಗೆ ಬರಲಿವೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…