ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ ಪುರುಷಾರ್ಥಕ್ಕಾಗಿ ಮಾಡುತ್ತಿದ್ದಾರೋ ಗೊತ್ತಿಲ್ಲ. ಸಾಹಿತ್ಯ ಸಮ್ಮೇಳದಿಂದ ಯಾವುದೇ ಬದಲಾವಣೆ ಆಗಿಲ್ಲ ಎಂದು ಕನ್ನಡಪರ ಹೋರಾಡಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ ವರ್ಷವೆಲ್ಲ ಕುಂಭಕರ್ಣನಂತೆ ನಿದ್ದೆ ಮಾಡುತ್ತಿರುತ್ತದೆ. ವರ್ಷದಲ್ಲಿ ಒಂದು ಬಾರಿ ಇಂತಹ ಕನ್ನಡ ಪರ ಸಮ್ಮೇಳನ ನಿಯೋಜನೆಗೊಂಡಾಗ ಮಾತ್ರ ಕೆಲಸ ನಿರ್ವಹಿಸಿ ಪುನಃ ಅದೇ ರೀತಿ ನಿದ್ರೆಗೆ ಜಾರುತ್ತದೆ. ಕನ್ನಡಕ್ಕಾಗಿ ಇವರು ಯಾವತ್ತಾದ್ರೂ ಕೆಲಸ ಮಾಡಿದ್ದಾರಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇತಿಹಾಸ ಗಮನಿಸುತ್ತಾ ಬಂದರೆ ಪ್ರಾದೇಶಿಕ ಭಾಷೆಯ ಬೆಳವಣಿಗೆಗಾಗಿ ಸಾಹಿತ್ಯ ಸಮ್ಮೇಳನ ಪ್ರಾರಂಭ ಮಾಡಿದರು. ಆದರೆ ಈಗ ಅದು ರಾಜಕೀಯ ಹಾಗೂ ಸರ್ಕಾರಿ ಕಾರ್ಯಕ್ರಮ ಆಗುತ್ತಿದೆ. ಇದಕ್ಕೆ ನಮ್ಮ ತಕರಾರು ಏನಿಲ್ಲ ಎಂದು ಪರೋಕ್ಷವಾಗಿ ರಾಜಕೀಯ ಪಕ್ಷಗಳನ್ನು ಟೀಕಿಸಿದರು.
ನೀವು ಈಗ ಸಾಹಿತ್ಯ ಸಮ್ಮೇಳನದ ಖುಷಿಯಲ್ಲಿದ್ದೀರಾ, ಆದರೆ ನಿಜವಾದ ಕನ್ನಡಿಗರು ಕಣ್ಣೀರು ಹಾಕುತ್ತಿದ್ದಾರೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗುತ್ತಿಲ್ಲ. ಐಟಿ ಬಿಟಿ ಹಾಗೂ ಖಾಸಗಿ ಕಂಪನಿಗಳಿಗೆ ಹೆದರಿ ಸರೋಜಿನಿ ಮಹಿಷಿ ವರದಿ ಜಾರಿ ಮಾಡಲು ಹಿಂದೇಟು ಹಾಕಿದ್ದಿರಿ. ಕನ್ನಡ ಬಾವುಟದ ಬಗ್ಗೆ ಗೊತ್ತಿಲ್ಲದ ಇವರು ಸಾಹಿತ್ಯ ಸಮ್ಮೇಳನ ಮಾಡುತ್ತಿದ್ದಾರೆ. ನಿಮ್ಮ ಸಮ್ಮೇಳನ ನಿಮಗೆ ಇರಲಿ, ನಮ್ಮ ಹೋರಾಟ ನಾವು ಮಾಡುತ್ತೇವೆ ಎಂದು ಹೇಳಿದರು.
ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್ಮಂಗಲ…
ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…