ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ ಪುರುಷಾರ್ಥಕ್ಕಾಗಿ ಮಾಡುತ್ತಿದ್ದಾರೋ ಗೊತ್ತಿಲ್ಲ. ಸಾಹಿತ್ಯ ಸಮ್ಮೇಳದಿಂದ ಯಾವುದೇ ಬದಲಾವಣೆ ಆಗಿಲ್ಲ ಎಂದು ಕನ್ನಡಪರ ಹೋರಾಡಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ ವರ್ಷವೆಲ್ಲ ಕುಂಭಕರ್ಣನಂತೆ ನಿದ್ದೆ ಮಾಡುತ್ತಿರುತ್ತದೆ. ವರ್ಷದಲ್ಲಿ ಒಂದು ಬಾರಿ ಇಂತಹ ಕನ್ನಡ ಪರ ಸಮ್ಮೇಳನ ನಿಯೋಜನೆಗೊಂಡಾಗ ಮಾತ್ರ ಕೆಲಸ ನಿರ್ವಹಿಸಿ ಪುನಃ ಅದೇ ರೀತಿ ನಿದ್ರೆಗೆ ಜಾರುತ್ತದೆ. ಕನ್ನಡಕ್ಕಾಗಿ ಇವರು ಯಾವತ್ತಾದ್ರೂ ಕೆಲಸ ಮಾಡಿದ್ದಾರಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇತಿಹಾಸ ಗಮನಿಸುತ್ತಾ ಬಂದರೆ ಪ್ರಾದೇಶಿಕ ಭಾಷೆಯ ಬೆಳವಣಿಗೆಗಾಗಿ ಸಾಹಿತ್ಯ ಸಮ್ಮೇಳನ ಪ್ರಾರಂಭ ಮಾಡಿದರು. ಆದರೆ ಈಗ ಅದು ರಾಜಕೀಯ ಹಾಗೂ ಸರ್ಕಾರಿ ಕಾರ್ಯಕ್ರಮ ಆಗುತ್ತಿದೆ. ಇದಕ್ಕೆ ನಮ್ಮ ತಕರಾರು ಏನಿಲ್ಲ ಎಂದು ಪರೋಕ್ಷವಾಗಿ ರಾಜಕೀಯ ಪಕ್ಷಗಳನ್ನು ಟೀಕಿಸಿದರು.
ನೀವು ಈಗ ಸಾಹಿತ್ಯ ಸಮ್ಮೇಳನದ ಖುಷಿಯಲ್ಲಿದ್ದೀರಾ, ಆದರೆ ನಿಜವಾದ ಕನ್ನಡಿಗರು ಕಣ್ಣೀರು ಹಾಕುತ್ತಿದ್ದಾರೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗುತ್ತಿಲ್ಲ. ಐಟಿ ಬಿಟಿ ಹಾಗೂ ಖಾಸಗಿ ಕಂಪನಿಗಳಿಗೆ ಹೆದರಿ ಸರೋಜಿನಿ ಮಹಿಷಿ ವರದಿ ಜಾರಿ ಮಾಡಲು ಹಿಂದೇಟು ಹಾಕಿದ್ದಿರಿ. ಕನ್ನಡ ಬಾವುಟದ ಬಗ್ಗೆ ಗೊತ್ತಿಲ್ಲದ ಇವರು ಸಾಹಿತ್ಯ ಸಮ್ಮೇಳನ ಮಾಡುತ್ತಿದ್ದಾರೆ. ನಿಮ್ಮ ಸಮ್ಮೇಳನ ನಿಮಗೆ ಇರಲಿ, ನಮ್ಮ ಹೋರಾಟ ನಾವು ಮಾಡುತ್ತೇವೆ ಎಂದು ಹೇಳಿದರು.
ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…