ಮೈಸೂರು: ಮೈಸೂರು ವಿಶ್ವ ವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಗೌತಮ್ ಪದವೀಧರ ವಿದ್ಯಾರ್ಥಿ ನಿಲಯದಲ್ಲಿನ ಬೆಳಗಿನ ಉಪಹಾರದಲ್ಲಿ ಹಲ್ಲಿ ಪತ್ಯೆಯಾಗಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯಕ್ಕೆ ಒಳಾಗುತ್ತಿದೆ ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಇಂದು ನಗರದ ಮಾನಸ ಗಂಗೋತ್ರಿಯ ವಿಶ್ವ ಮಾನವ ಆಕೃತಿ ಮುಂಭಾಗ ಗೌತಮ್ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಈ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಿದರು.
ಇಂದು ಬೆಳಿಗ್ಗೆ ಉಪಹಾರದಲ್ಲಿ ಹಲ್ಲಿ ಕಾಣಸಿಕೊಂಡಿದೆ. ಈ ವಿಷಯ ಗಮನಕ್ಕೆ ಬರುವ ಮೊದಲೇ ಸುಮಾರು 102 ಜನರು ಈ ಉಪಹಾರವನ್ನು ತಿಂದಿದ್ದಾರೆ. ಗಮನಕ್ಕೆ ಬಂದ ತಕ್ಷಣ ನಾವು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಹಾಸ್ಟೆಲ್ ವಾರ್ಡನ್ ಅವರಿಗೆ ಮಾಹಿತಿ ನೀಡಿದೆವು. ಯಾವುದೂ ಪ್ರಯೋಜನಕ್ಕೆ ಬಾರಲಿಲ್ಲ. ಕೇವಲ ಊಟದ ವಿಷಯವಷ್ಟೇ ಅಲ್ಲ, ಕೊಠಡಿಗಳು, ಕಿಚೆನ್ ಹಾಲ್, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳು ಸೇರಿದಂತೆ ಅನೇಕಾನೇಕ ಸಮಸ್ಯೆಗಳನ್ನು ಪ್ರತಿನಿತ್ಯ ನಾವು ಅನುಭವಿಸುತ್ತಿದ್ದೇವೆ ಎಂದು ತಮ್ಮ ನೋವನ್ನು ಹೇಳಿಕೊಂಡಿದ್ದಾರೆ ವಿದ್ಯಾರ್ಥಿಗಳು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…