ಮೈಸೂರು

ಲೋಕಸಭಾ ಚುನಾವಣೆ ಮತ ಎಣಿಕೆ: ಮೈಸೂರಿನ ಈ ರಸ್ತೆಗಳಲ್ಲಿ ಸಂಚಾರ ಬಂದ್‌, ಬದಲಿ ಮಾರ್ಗ ವಿವರ

ಮೈಸೂರು: ಜೂ.04 ರಂದು ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಮೈಸೂರು ನಗರದ ವಾಲ್ಮೀಕಿ ರಸ್ತೆಯಲ್ಲಿನ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯಲಿದ್ದು, ಮತ ಎಣಿಕೆ ದಿನದಂದು ಮತ ಎಣಿಕೆ ಸ್ಥಳದ ಸುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಲಿದೆ. ಈ ಹಿನ್ನೆಲೆ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವ ಸಂಬoಧ ಮತ ಎಣಿಕೆ ಸ್ಥಳದ ಸುತ್ತಲಿನ ರಸ್ತೆಗಳಲ್ಲಿ ವಾಹನಗಳ ಸಂಚಾರ ಮತ್ತು ನಿಲುಗಡೆಯ ಮೇಲೆ ನಿರ್ಬಂಧ ವಿಧಿಸಿ, ಕೆ.ಎಸ್.ಆರ್.ಟಿ.ಸಿ ಬಸ್‌ಗಳಿಗೆ ಬದಲಿ ಮಾರ್ಗ ಕಲ್ಪಿಸಿಸಲಾಗಿದೆ.

ಜೂ.04 ರಂದು ಬೆಳಿಗ್ಗೆ 5 ಗಂಟೆಯಿoದ ಸಂಜೆ 5 ಗಂಟೆಯವರೆಗೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಸಂಚರಿಸಬೇಕಾದ ಮಾರ್ಗ:
ಮೈಸೂರು ನಗರದ ಕಡೆಯಿಂದ ಹುಣಸೂರು ಕಡೆಗೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು – ರಾಮಸ್ವಾಮಿ ವೃತ್ತ- ಮೂಡಾಜಂಕ್ಷನ್- ಮೆಟ್ರೋಪೋಲ್ ವೃತ್ತ- ಎಡತಿರುವು- ಹುಣಸೂರುರಸ್ತೆ- ಕಲಾಮಂದಿರಜoಕ್ಷನ್- ಎಡತಿರುವು- ಕುಕ್ಕರಹಳ್ಳಿ ರೈಲ್ವೇಗೇಟ್ ಜಂಕ್ಷನ್- ಡಾ. ಪದ್ಮ ವೃತ್ತ- ವಿ.ಎಂ.ಡಿಜoಕ್ಷನ್- ಬೋಗಾದಿ ರಸ್ತೆಯಲ್ಲಿ ಮುಂದುವರೆದು ಬೋಗಾದಿ ರಿಂಗ್‌ರಸ್ತೆ ಮೂಲಕ ಹುಣಸೂರು ರಸ್ತೆ ತಲುಪುವುದು.

ಮಡಿಕೇರಿ, ಹುಣಸೂರು, ಹಾಸನ ಕಡೆಯಿಂದ ಮೈಸೂರು ನಗರಕ್ಕೆ ಬರುವ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಸೆಂಟ್‌ಜೋಸೆಫ್ ಜಂಕ್ಷನ್‌ನಲ್ಲಿ ಎಡತಿರುವು ಪಡೆದು ಟೆಂಪಲ್ ರಸ್ತೆಯಲ್ಲಿ ಸಾಗಿ ವಿ.ವಿ.ಪುರದ ವೃತ್ತದಲ್ಲಿ ಬಲತಿರುವು ಪಡೆದು ಕೆ.ಆರ್.ಎಸ್‌ರಸ್ತೆ- ದಾಸಪ್ಪ ವೃತ್ತ- ಮೆಟ್ರೋಪೋಲ್ ವೃತ್ತದ ಮೂಲಕ ಮುಂದೆ ಸಾಗುವುದು.

ವಾಹನಗಳ ಸಂಚಾರವನ್ನು ನಿರ್ಭಂಧಿಸಿರುವ ರಸ್ತೆಗಳು
ಕಲಾಮಂದಿರಜoಕ್ಷನ್ನಿoದ ಪಡುವಾರಹಳ್ಳಿ ಜಂಕ್ಷನ್ವರೆಗೆ ಹುಣಸೂರು ರಸ್ತೆಯ ಎರಡು ಕಡೆಗಳಲ್ಲಿ ಸಂಚರಿಸುವ ರಸ್ತೆ, ವಾಲ್ಮೀಕಿ ರಸ್ತೆ – ಕೆ.ಆರ್.ಎಸ್ ರಸ್ತೆ ಜಂಕ್ಷನ್ನಿoದ ಹುಣಸೂರು ರಸ್ತೆ ವಾಲ್ಮೀಕಿ ರಸ್ತೆ ಜಂಕ್ಷನ್ ವರೆಗಿನ ಹಾಗೂ ಮಾತೃ ಮಂಡಳಿ ವೃತ್ತದಿಂದ ವಾಲ್ಮೀಕಿ ರಸ್ತೆ ಲೀಲಾ ಚೆನ್ನಯ್ಯ ಜಂಕ್ಷನ್ ವರೆಗೆ ಆದಿಪಂಪ ರಸ್ತೆಯಲ್ಲಿ ಸಂಚರಿಸುವ ಚುನಾವಣಾ ಅಗತ್ಯ ಕರ್ತವ್ಯ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಬದಲಿ ಮಾರ್ಗ: ಮೈಸೂರು ನಗರದಿಂದ ಹುಣಸೂರು ಕಡೆಗೆ ಹೋಗುವ ವಾಹನಗಳು ಡಿ.ಸಿ ಕಛೇರಿ ಆರ್ಚ್ಗೇಟ್ ಜಂಕ್ಷನ್‌ನಿoದ ವೀರೇಂದ್ರ ಹೆಗ್ಗಡೆ ವೃತ್ತದ ಕಡೆಗೆ ಸಂಚರಿಸುವ ವಾಹನಗಳು ಕಲಾಮಂದಿರ ಜಂಕ್ಷನ್ ಬಳಿ ಎಡತಿರುವು ಪಡೆದು ಕುಕ್ಕರಹಳ್ಳಿ ರೈಲ್ವೇಗೇಟ್ ಜಂಕ್ಷನ್- ಡಾ. ಪದ್ಮ ವೃತ್ತ- ವಿ.ಎಂ.ಡಿಜoಕ್ಷನ್- ಬೋಗಾದಿ ರಸ್ತೆಯಲ್ಲಿ ಮುಂದೆ ಸಾಗುವುದು.

ಹಾಸನ, ಮಡಿಕೇರಿ, ಹುಣಸೂರು ಕಡೆಯಿಂದ ಮೈಸೂರು ನಗರಕ್ಕೆ ಆಗಮಿಸುವ ವಾಹನಗಳು ಸೆಂಟ್‌ಜೋಸೆಫ್ ಜಂಕ್ಷನ್ ನಲ್ಲಿ ಎಡತಿರುವು ಪಡೆದು ಟೆಂಪಲ್ ರಸ್ತೆ- ಬಿ.ಸಿ ಅಂಗಯ್ಯ ವೃತ್ತ- ಕೆ.ಆರ್.ಎಸ್ ರಸ್ತೆ ಮೂಲಕ ಮುಂದೆ ಸಾಗುವುದು.

ಹಾಸನ, ಮಡಿಕೇರಿ, ಹುಣಸೂರು ಕಡೆಯಿಂದ ಮೈಸೂರು ನಗರಕ್ಕೆ ಆಗಮಿಸುವ ವಾಹನಗಳು ಪಡುವಾರಹಳ್ಳಿ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಬಯಲುರಂಗ ಮಂದಿರ ರಸ್ತೆ- ವಿ.ಎಂ.ಡಿ ಜಂಕ್ಷನ್ ಮೂಲಕ ಮುಂದೆ ಸಾಗುವುದು.

ಮಾಧ್ಯಮದವರು, ಚುನಾವಣಾ ಅಭ್ಯರ್ಥಿಗಳು ಮತ್ತು ಪಕ್ಷದ ಏಜೆಂಟರುಗಳ ವಾಹನಗಳು ಸಂಚರಿಸುವ ಮಾರ್ಗ & ಪಾರ್ಕಿಂಗ್ ಸ್ಥಳ:

ದಾಸಪ್ಪ ವೃತ್ತದ ಮೂಲಕ ಆಗಮಿಸುವವರು: ದಾಸಪ್ಪ ವೃತ್ತ- ವಿವೇಕಾನಂದ ಪ್ರತಿಮೆ ಜಂಕ್ಷನ್- ರಾಮಮಂದಿರ ಜಂಕ್ಷನ್- ಎಡತಿರುವು- ಲೀಲಾ ಚೆನ್ನಯ್ಯ ಕಲ್ಯಾಣ ಮಂಟಪ ಜಂಕ್ಷನ್- ಬಲತಿರುವು- ಆದಿ ಪಂಪ ರಸ್ತೆ- ನಾರಾಯಣಸ್ವಾಮಿ ಬ್ಲಾಕ್- ಎಡತಿರುವು ಪಡುವಾರಹಳ್ಳಿ ಮಹದೇಶ್ವರ ದೇವಸ್ಥಾನದ ಹಿಂಭಾಗದ ಮೈದಾನದಲ್ಲಿ ಕಾರುಗಳನ್ನು ಪಾರ್ಕಿಂಗ್ ಮಾಡುವುದು. ದ್ವಿಚಕ್ರ ವಾಹನ ಸವಾರರು ಪಡುವಾರಳ್ಳಿ ಜೋಡಿ ಮಾರಮ್ಮ ದೇವಸ್ಥಾನದ ಮುಂಭಾಗದ ಖಾಲಿ ಜಾಗದಲ್ಲಿ ಪಾರ್ಕಿಂಗ್ ಮಾಡುವುದು.

 

ಹುಣಸೂರು ರಸ್ತೆ ಮೂಲಕ ಆಗಮಿಸುವವರು ಸೆಂಟ್‌ಜೋಸೆಫ್ ಜಂಕ್ಷನ್-ಎಡತಿರುವು-ಟೆoಪಲ್ ರಸ್ತೆ- ಮಾತೃಮಂಡಳಿ ಜಂಕ್ಷನ್- ಬಲತಿರುವು- ಆದಿಪಂಪ ರಸ್ತೆ- ನಾರಾಯಣಸ್ವಾಮಿ ಬ್ಲಾಕ್- ಬಲತಿರುವು- ಪಡುವಾರಹಳ್ಳಿ ಮಹದೇಶ್ವರ ದೇವಸ್ಥಾನದ ಹಿಂಭಾಗದ ಮೈದಾನದಲ್ಲಿ ಕಾರುಗಳನ್ನು ಪಾರ್ಕಿಂಗ್ ಮಾಡುವುದು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಜೈಲೇ ಮೊದಲ ಪಾಠ ಶಾಲೆ! ಕೊಲೆ ಆರೋಪಿಯೇ ಪ್ರಥಮ ಗುರು!

ಪಂಜು ಗಂಗೊಳ್ಳಿ ಜೈಲಿನ ಅನಕ್ಷರಸ್ಥ ಕೈದಿಗಳನ್ನು ಅಕ್ಷರಸ್ಥರನ್ನಾಗಿಸಲು ಮಹತ್ವದ ಯೋಜನೆ ರಾಜೇಶ್ ಕುಮಾರ್ ಯಾವತ್ತೂ ಶಾಲೆಯ ಮಟ್ಟಿಲು ಹತ್ತಿದವನಲ್ಲ. ಹಾಗಾಗಿ,…

20 mins ago

ನಾಳೆ ಶ್ರೀ ಅಯ್ಯಪ್ಪ ಕ್ಷೇತ್ರದ ಮುಖಮಂಟಪ ಲೋಕಾರ್ಪಣೆ

ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…

3 hours ago

‘ದೇಸಿ ಬೀಜಗಳನ್ನು ಉಳಿಸಿದರೆ ವಿಷಮುಕ್ತ ಆಹಾರ ನೀಡಲು ಸಾಧ್ಯ’

ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…

3 hours ago

ಕ್ರಿಸ್‌ಮಸ್ ಹಬ್ಬಕ್ಕೆ ಅರಮನೆ ನಗರಿ ಸಜ್ಜು

ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…

3 hours ago

ಡಿಎಚ್‌ಒ ವರ್ಗಾವಣೆಯಲ್ಲಿ ಎಡವಟ್ಟು

ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…

3 hours ago