ಮೈಸೂರು

ಲೋಕಸಭಾ ಚುನಾವಣೆ ಮತ ಎಣಿಕೆ: ಮೈಸೂರಿನ ಈ ರಸ್ತೆಗಳಲ್ಲಿ ಸಂಚಾರ ಬಂದ್‌, ಬದಲಿ ಮಾರ್ಗ ವಿವರ

ಮೈಸೂರು: ಜೂ.04 ರಂದು ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಮೈಸೂರು ನಗರದ ವಾಲ್ಮೀಕಿ ರಸ್ತೆಯಲ್ಲಿನ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯಲಿದ್ದು, ಮತ ಎಣಿಕೆ ದಿನದಂದು ಮತ ಎಣಿಕೆ ಸ್ಥಳದ ಸುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಲಿದೆ. ಈ ಹಿನ್ನೆಲೆ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವ ಸಂಬoಧ ಮತ ಎಣಿಕೆ ಸ್ಥಳದ ಸುತ್ತಲಿನ ರಸ್ತೆಗಳಲ್ಲಿ ವಾಹನಗಳ ಸಂಚಾರ ಮತ್ತು ನಿಲುಗಡೆಯ ಮೇಲೆ ನಿರ್ಬಂಧ ವಿಧಿಸಿ, ಕೆ.ಎಸ್.ಆರ್.ಟಿ.ಸಿ ಬಸ್‌ಗಳಿಗೆ ಬದಲಿ ಮಾರ್ಗ ಕಲ್ಪಿಸಿಸಲಾಗಿದೆ.

ಜೂ.04 ರಂದು ಬೆಳಿಗ್ಗೆ 5 ಗಂಟೆಯಿoದ ಸಂಜೆ 5 ಗಂಟೆಯವರೆಗೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಸಂಚರಿಸಬೇಕಾದ ಮಾರ್ಗ:
ಮೈಸೂರು ನಗರದ ಕಡೆಯಿಂದ ಹುಣಸೂರು ಕಡೆಗೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು – ರಾಮಸ್ವಾಮಿ ವೃತ್ತ- ಮೂಡಾಜಂಕ್ಷನ್- ಮೆಟ್ರೋಪೋಲ್ ವೃತ್ತ- ಎಡತಿರುವು- ಹುಣಸೂರುರಸ್ತೆ- ಕಲಾಮಂದಿರಜoಕ್ಷನ್- ಎಡತಿರುವು- ಕುಕ್ಕರಹಳ್ಳಿ ರೈಲ್ವೇಗೇಟ್ ಜಂಕ್ಷನ್- ಡಾ. ಪದ್ಮ ವೃತ್ತ- ವಿ.ಎಂ.ಡಿಜoಕ್ಷನ್- ಬೋಗಾದಿ ರಸ್ತೆಯಲ್ಲಿ ಮುಂದುವರೆದು ಬೋಗಾದಿ ರಿಂಗ್‌ರಸ್ತೆ ಮೂಲಕ ಹುಣಸೂರು ರಸ್ತೆ ತಲುಪುವುದು.

ಮಡಿಕೇರಿ, ಹುಣಸೂರು, ಹಾಸನ ಕಡೆಯಿಂದ ಮೈಸೂರು ನಗರಕ್ಕೆ ಬರುವ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಸೆಂಟ್‌ಜೋಸೆಫ್ ಜಂಕ್ಷನ್‌ನಲ್ಲಿ ಎಡತಿರುವು ಪಡೆದು ಟೆಂಪಲ್ ರಸ್ತೆಯಲ್ಲಿ ಸಾಗಿ ವಿ.ವಿ.ಪುರದ ವೃತ್ತದಲ್ಲಿ ಬಲತಿರುವು ಪಡೆದು ಕೆ.ಆರ್.ಎಸ್‌ರಸ್ತೆ- ದಾಸಪ್ಪ ವೃತ್ತ- ಮೆಟ್ರೋಪೋಲ್ ವೃತ್ತದ ಮೂಲಕ ಮುಂದೆ ಸಾಗುವುದು.

ವಾಹನಗಳ ಸಂಚಾರವನ್ನು ನಿರ್ಭಂಧಿಸಿರುವ ರಸ್ತೆಗಳು
ಕಲಾಮಂದಿರಜoಕ್ಷನ್ನಿoದ ಪಡುವಾರಹಳ್ಳಿ ಜಂಕ್ಷನ್ವರೆಗೆ ಹುಣಸೂರು ರಸ್ತೆಯ ಎರಡು ಕಡೆಗಳಲ್ಲಿ ಸಂಚರಿಸುವ ರಸ್ತೆ, ವಾಲ್ಮೀಕಿ ರಸ್ತೆ – ಕೆ.ಆರ್.ಎಸ್ ರಸ್ತೆ ಜಂಕ್ಷನ್ನಿoದ ಹುಣಸೂರು ರಸ್ತೆ ವಾಲ್ಮೀಕಿ ರಸ್ತೆ ಜಂಕ್ಷನ್ ವರೆಗಿನ ಹಾಗೂ ಮಾತೃ ಮಂಡಳಿ ವೃತ್ತದಿಂದ ವಾಲ್ಮೀಕಿ ರಸ್ತೆ ಲೀಲಾ ಚೆನ್ನಯ್ಯ ಜಂಕ್ಷನ್ ವರೆಗೆ ಆದಿಪಂಪ ರಸ್ತೆಯಲ್ಲಿ ಸಂಚರಿಸುವ ಚುನಾವಣಾ ಅಗತ್ಯ ಕರ್ತವ್ಯ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಬದಲಿ ಮಾರ್ಗ: ಮೈಸೂರು ನಗರದಿಂದ ಹುಣಸೂರು ಕಡೆಗೆ ಹೋಗುವ ವಾಹನಗಳು ಡಿ.ಸಿ ಕಛೇರಿ ಆರ್ಚ್ಗೇಟ್ ಜಂಕ್ಷನ್‌ನಿoದ ವೀರೇಂದ್ರ ಹೆಗ್ಗಡೆ ವೃತ್ತದ ಕಡೆಗೆ ಸಂಚರಿಸುವ ವಾಹನಗಳು ಕಲಾಮಂದಿರ ಜಂಕ್ಷನ್ ಬಳಿ ಎಡತಿರುವು ಪಡೆದು ಕುಕ್ಕರಹಳ್ಳಿ ರೈಲ್ವೇಗೇಟ್ ಜಂಕ್ಷನ್- ಡಾ. ಪದ್ಮ ವೃತ್ತ- ವಿ.ಎಂ.ಡಿಜoಕ್ಷನ್- ಬೋಗಾದಿ ರಸ್ತೆಯಲ್ಲಿ ಮುಂದೆ ಸಾಗುವುದು.

ಹಾಸನ, ಮಡಿಕೇರಿ, ಹುಣಸೂರು ಕಡೆಯಿಂದ ಮೈಸೂರು ನಗರಕ್ಕೆ ಆಗಮಿಸುವ ವಾಹನಗಳು ಸೆಂಟ್‌ಜೋಸೆಫ್ ಜಂಕ್ಷನ್ ನಲ್ಲಿ ಎಡತಿರುವು ಪಡೆದು ಟೆಂಪಲ್ ರಸ್ತೆ- ಬಿ.ಸಿ ಅಂಗಯ್ಯ ವೃತ್ತ- ಕೆ.ಆರ್.ಎಸ್ ರಸ್ತೆ ಮೂಲಕ ಮುಂದೆ ಸಾಗುವುದು.

ಹಾಸನ, ಮಡಿಕೇರಿ, ಹುಣಸೂರು ಕಡೆಯಿಂದ ಮೈಸೂರು ನಗರಕ್ಕೆ ಆಗಮಿಸುವ ವಾಹನಗಳು ಪಡುವಾರಹಳ್ಳಿ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಬಯಲುರಂಗ ಮಂದಿರ ರಸ್ತೆ- ವಿ.ಎಂ.ಡಿ ಜಂಕ್ಷನ್ ಮೂಲಕ ಮುಂದೆ ಸಾಗುವುದು.

ಮಾಧ್ಯಮದವರು, ಚುನಾವಣಾ ಅಭ್ಯರ್ಥಿಗಳು ಮತ್ತು ಪಕ್ಷದ ಏಜೆಂಟರುಗಳ ವಾಹನಗಳು ಸಂಚರಿಸುವ ಮಾರ್ಗ & ಪಾರ್ಕಿಂಗ್ ಸ್ಥಳ:

ದಾಸಪ್ಪ ವೃತ್ತದ ಮೂಲಕ ಆಗಮಿಸುವವರು: ದಾಸಪ್ಪ ವೃತ್ತ- ವಿವೇಕಾನಂದ ಪ್ರತಿಮೆ ಜಂಕ್ಷನ್- ರಾಮಮಂದಿರ ಜಂಕ್ಷನ್- ಎಡತಿರುವು- ಲೀಲಾ ಚೆನ್ನಯ್ಯ ಕಲ್ಯಾಣ ಮಂಟಪ ಜಂಕ್ಷನ್- ಬಲತಿರುವು- ಆದಿ ಪಂಪ ರಸ್ತೆ- ನಾರಾಯಣಸ್ವಾಮಿ ಬ್ಲಾಕ್- ಎಡತಿರುವು ಪಡುವಾರಹಳ್ಳಿ ಮಹದೇಶ್ವರ ದೇವಸ್ಥಾನದ ಹಿಂಭಾಗದ ಮೈದಾನದಲ್ಲಿ ಕಾರುಗಳನ್ನು ಪಾರ್ಕಿಂಗ್ ಮಾಡುವುದು. ದ್ವಿಚಕ್ರ ವಾಹನ ಸವಾರರು ಪಡುವಾರಳ್ಳಿ ಜೋಡಿ ಮಾರಮ್ಮ ದೇವಸ್ಥಾನದ ಮುಂಭಾಗದ ಖಾಲಿ ಜಾಗದಲ್ಲಿ ಪಾರ್ಕಿಂಗ್ ಮಾಡುವುದು.

 

ಹುಣಸೂರು ರಸ್ತೆ ಮೂಲಕ ಆಗಮಿಸುವವರು ಸೆಂಟ್‌ಜೋಸೆಫ್ ಜಂಕ್ಷನ್-ಎಡತಿರುವು-ಟೆoಪಲ್ ರಸ್ತೆ- ಮಾತೃಮಂಡಳಿ ಜಂಕ್ಷನ್- ಬಲತಿರುವು- ಆದಿಪಂಪ ರಸ್ತೆ- ನಾರಾಯಣಸ್ವಾಮಿ ಬ್ಲಾಕ್- ಬಲತಿರುವು- ಪಡುವಾರಹಳ್ಳಿ ಮಹದೇಶ್ವರ ದೇವಸ್ಥಾನದ ಹಿಂಭಾಗದ ಮೈದಾನದಲ್ಲಿ ಕಾರುಗಳನ್ನು ಪಾರ್ಕಿಂಗ್ ಮಾಡುವುದು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

8 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

8 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

8 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

9 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

10 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

10 hours ago