ಮೈಸೂರು

ಲೋಕಸಭಾ ಚುನಾವಣೆ ಮತ ಎಣಿಕೆ: ಮೈಸೂರಿನ ಈ ರಸ್ತೆಗಳಲ್ಲಿ ಸಂಚಾರ ಬಂದ್‌, ಬದಲಿ ಮಾರ್ಗ ವಿವರ

ಮೈಸೂರು: ಜೂ.04 ರಂದು ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಮೈಸೂರು ನಗರದ ವಾಲ್ಮೀಕಿ ರಸ್ತೆಯಲ್ಲಿನ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯಲಿದ್ದು, ಮತ ಎಣಿಕೆ ದಿನದಂದು ಮತ ಎಣಿಕೆ ಸ್ಥಳದ ಸುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಲಿದೆ. ಈ ಹಿನ್ನೆಲೆ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವ ಸಂಬoಧ ಮತ ಎಣಿಕೆ ಸ್ಥಳದ ಸುತ್ತಲಿನ ರಸ್ತೆಗಳಲ್ಲಿ ವಾಹನಗಳ ಸಂಚಾರ ಮತ್ತು ನಿಲುಗಡೆಯ ಮೇಲೆ ನಿರ್ಬಂಧ ವಿಧಿಸಿ, ಕೆ.ಎಸ್.ಆರ್.ಟಿ.ಸಿ ಬಸ್‌ಗಳಿಗೆ ಬದಲಿ ಮಾರ್ಗ ಕಲ್ಪಿಸಿಸಲಾಗಿದೆ.

ಜೂ.04 ರಂದು ಬೆಳಿಗ್ಗೆ 5 ಗಂಟೆಯಿoದ ಸಂಜೆ 5 ಗಂಟೆಯವರೆಗೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಸಂಚರಿಸಬೇಕಾದ ಮಾರ್ಗ:
ಮೈಸೂರು ನಗರದ ಕಡೆಯಿಂದ ಹುಣಸೂರು ಕಡೆಗೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು – ರಾಮಸ್ವಾಮಿ ವೃತ್ತ- ಮೂಡಾಜಂಕ್ಷನ್- ಮೆಟ್ರೋಪೋಲ್ ವೃತ್ತ- ಎಡತಿರುವು- ಹುಣಸೂರುರಸ್ತೆ- ಕಲಾಮಂದಿರಜoಕ್ಷನ್- ಎಡತಿರುವು- ಕುಕ್ಕರಹಳ್ಳಿ ರೈಲ್ವೇಗೇಟ್ ಜಂಕ್ಷನ್- ಡಾ. ಪದ್ಮ ವೃತ್ತ- ವಿ.ಎಂ.ಡಿಜoಕ್ಷನ್- ಬೋಗಾದಿ ರಸ್ತೆಯಲ್ಲಿ ಮುಂದುವರೆದು ಬೋಗಾದಿ ರಿಂಗ್‌ರಸ್ತೆ ಮೂಲಕ ಹುಣಸೂರು ರಸ್ತೆ ತಲುಪುವುದು.

ಮಡಿಕೇರಿ, ಹುಣಸೂರು, ಹಾಸನ ಕಡೆಯಿಂದ ಮೈಸೂರು ನಗರಕ್ಕೆ ಬರುವ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಸೆಂಟ್‌ಜೋಸೆಫ್ ಜಂಕ್ಷನ್‌ನಲ್ಲಿ ಎಡತಿರುವು ಪಡೆದು ಟೆಂಪಲ್ ರಸ್ತೆಯಲ್ಲಿ ಸಾಗಿ ವಿ.ವಿ.ಪುರದ ವೃತ್ತದಲ್ಲಿ ಬಲತಿರುವು ಪಡೆದು ಕೆ.ಆರ್.ಎಸ್‌ರಸ್ತೆ- ದಾಸಪ್ಪ ವೃತ್ತ- ಮೆಟ್ರೋಪೋಲ್ ವೃತ್ತದ ಮೂಲಕ ಮುಂದೆ ಸಾಗುವುದು.

ವಾಹನಗಳ ಸಂಚಾರವನ್ನು ನಿರ್ಭಂಧಿಸಿರುವ ರಸ್ತೆಗಳು
ಕಲಾಮಂದಿರಜoಕ್ಷನ್ನಿoದ ಪಡುವಾರಹಳ್ಳಿ ಜಂಕ್ಷನ್ವರೆಗೆ ಹುಣಸೂರು ರಸ್ತೆಯ ಎರಡು ಕಡೆಗಳಲ್ಲಿ ಸಂಚರಿಸುವ ರಸ್ತೆ, ವಾಲ್ಮೀಕಿ ರಸ್ತೆ – ಕೆ.ಆರ್.ಎಸ್ ರಸ್ತೆ ಜಂಕ್ಷನ್ನಿoದ ಹುಣಸೂರು ರಸ್ತೆ ವಾಲ್ಮೀಕಿ ರಸ್ತೆ ಜಂಕ್ಷನ್ ವರೆಗಿನ ಹಾಗೂ ಮಾತೃ ಮಂಡಳಿ ವೃತ್ತದಿಂದ ವಾಲ್ಮೀಕಿ ರಸ್ತೆ ಲೀಲಾ ಚೆನ್ನಯ್ಯ ಜಂಕ್ಷನ್ ವರೆಗೆ ಆದಿಪಂಪ ರಸ್ತೆಯಲ್ಲಿ ಸಂಚರಿಸುವ ಚುನಾವಣಾ ಅಗತ್ಯ ಕರ್ತವ್ಯ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಬದಲಿ ಮಾರ್ಗ: ಮೈಸೂರು ನಗರದಿಂದ ಹುಣಸೂರು ಕಡೆಗೆ ಹೋಗುವ ವಾಹನಗಳು ಡಿ.ಸಿ ಕಛೇರಿ ಆರ್ಚ್ಗೇಟ್ ಜಂಕ್ಷನ್‌ನಿoದ ವೀರೇಂದ್ರ ಹೆಗ್ಗಡೆ ವೃತ್ತದ ಕಡೆಗೆ ಸಂಚರಿಸುವ ವಾಹನಗಳು ಕಲಾಮಂದಿರ ಜಂಕ್ಷನ್ ಬಳಿ ಎಡತಿರುವು ಪಡೆದು ಕುಕ್ಕರಹಳ್ಳಿ ರೈಲ್ವೇಗೇಟ್ ಜಂಕ್ಷನ್- ಡಾ. ಪದ್ಮ ವೃತ್ತ- ವಿ.ಎಂ.ಡಿಜoಕ್ಷನ್- ಬೋಗಾದಿ ರಸ್ತೆಯಲ್ಲಿ ಮುಂದೆ ಸಾಗುವುದು.

ಹಾಸನ, ಮಡಿಕೇರಿ, ಹುಣಸೂರು ಕಡೆಯಿಂದ ಮೈಸೂರು ನಗರಕ್ಕೆ ಆಗಮಿಸುವ ವಾಹನಗಳು ಸೆಂಟ್‌ಜೋಸೆಫ್ ಜಂಕ್ಷನ್ ನಲ್ಲಿ ಎಡತಿರುವು ಪಡೆದು ಟೆಂಪಲ್ ರಸ್ತೆ- ಬಿ.ಸಿ ಅಂಗಯ್ಯ ವೃತ್ತ- ಕೆ.ಆರ್.ಎಸ್ ರಸ್ತೆ ಮೂಲಕ ಮುಂದೆ ಸಾಗುವುದು.

ಹಾಸನ, ಮಡಿಕೇರಿ, ಹುಣಸೂರು ಕಡೆಯಿಂದ ಮೈಸೂರು ನಗರಕ್ಕೆ ಆಗಮಿಸುವ ವಾಹನಗಳು ಪಡುವಾರಹಳ್ಳಿ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಬಯಲುರಂಗ ಮಂದಿರ ರಸ್ತೆ- ವಿ.ಎಂ.ಡಿ ಜಂಕ್ಷನ್ ಮೂಲಕ ಮುಂದೆ ಸಾಗುವುದು.

ಮಾಧ್ಯಮದವರು, ಚುನಾವಣಾ ಅಭ್ಯರ್ಥಿಗಳು ಮತ್ತು ಪಕ್ಷದ ಏಜೆಂಟರುಗಳ ವಾಹನಗಳು ಸಂಚರಿಸುವ ಮಾರ್ಗ & ಪಾರ್ಕಿಂಗ್ ಸ್ಥಳ:

ದಾಸಪ್ಪ ವೃತ್ತದ ಮೂಲಕ ಆಗಮಿಸುವವರು: ದಾಸಪ್ಪ ವೃತ್ತ- ವಿವೇಕಾನಂದ ಪ್ರತಿಮೆ ಜಂಕ್ಷನ್- ರಾಮಮಂದಿರ ಜಂಕ್ಷನ್- ಎಡತಿರುವು- ಲೀಲಾ ಚೆನ್ನಯ್ಯ ಕಲ್ಯಾಣ ಮಂಟಪ ಜಂಕ್ಷನ್- ಬಲತಿರುವು- ಆದಿ ಪಂಪ ರಸ್ತೆ- ನಾರಾಯಣಸ್ವಾಮಿ ಬ್ಲಾಕ್- ಎಡತಿರುವು ಪಡುವಾರಹಳ್ಳಿ ಮಹದೇಶ್ವರ ದೇವಸ್ಥಾನದ ಹಿಂಭಾಗದ ಮೈದಾನದಲ್ಲಿ ಕಾರುಗಳನ್ನು ಪಾರ್ಕಿಂಗ್ ಮಾಡುವುದು. ದ್ವಿಚಕ್ರ ವಾಹನ ಸವಾರರು ಪಡುವಾರಳ್ಳಿ ಜೋಡಿ ಮಾರಮ್ಮ ದೇವಸ್ಥಾನದ ಮುಂಭಾಗದ ಖಾಲಿ ಜಾಗದಲ್ಲಿ ಪಾರ್ಕಿಂಗ್ ಮಾಡುವುದು.

 

ಹುಣಸೂರು ರಸ್ತೆ ಮೂಲಕ ಆಗಮಿಸುವವರು ಸೆಂಟ್‌ಜೋಸೆಫ್ ಜಂಕ್ಷನ್-ಎಡತಿರುವು-ಟೆoಪಲ್ ರಸ್ತೆ- ಮಾತೃಮಂಡಳಿ ಜಂಕ್ಷನ್- ಬಲತಿರುವು- ಆದಿಪಂಪ ರಸ್ತೆ- ನಾರಾಯಣಸ್ವಾಮಿ ಬ್ಲಾಕ್- ಬಲತಿರುವು- ಪಡುವಾರಹಳ್ಳಿ ಮಹದೇಶ್ವರ ದೇವಸ್ಥಾನದ ಹಿಂಭಾಗದ ಮೈದಾನದಲ್ಲಿ ಕಾರುಗಳನ್ನು ಪಾರ್ಕಿಂಗ್ ಮಾಡುವುದು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

4 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

4 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

4 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

4 hours ago

ಅಕ್ರಮ ಮದ್ಯ ಮಾರಾಟ: ಕಡಿವಾಣ ಕಾರ್ಯಾಚರಣೆ

ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್‌ನಲ್ಲಿ ನಡೆದ…

4 hours ago

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

6 hours ago