ಮೈಸೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಏ.26 ರಂದು ಮತದಾನ ನಡೆಯುವ ಸಂಬoಧ ಏ.25 ರಂದು ಜಿಲ್ಲೆಯ ಎಲ್ಲಾ ಮಸ್ಟರಿಂಗ್ ಕಾರ್ಯವನ್ನು ನಡೆಸಲು ಮಸ್ಟರಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಮೈಸೂರು ಲೋಕಸಭಾ ಕ್ಷೇತ್ರದ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಪಿರಿಯಾಪಟ್ಟಣದ ಗೋಣಿಕೊಪ್ಪ ರಸ್ತೆಯ ಪುಷ್ಪ ಆಂಗ್ಲ ಮಾಧ್ಯಮ ಶಾಲೆ, ಮಂಡ್ಯ ಲೋಕಸಭಾ ಕ್ಷೇತ್ರ ಹಾಗೂ ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಕೆ.ಆರ್ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹುಣಸೂರು ವಿಧಾನಸಭಾ ಕ್ಷೇತ್ರಕ್ಕೆ ಹುಣಸೂರಿನ ಸೇಂಟ್ ಜೋಸೆಫ್ ಪದವಿ ಪೂರ್ವ ಕಾಲೇಜು, ಚಾಮರಾಜನಗರ ಲೋಕಸಭಾ ಕ್ಷೇತ್ರ ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಹೆಚ್.ಡಿ ಕೋಟೆಯ ಸೇಂಟ್ ಮೇರಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ನಂಜನಗೂಡಿನ ಸರ್ಕಾರಿ ಬಾಲಕರ ಜೂನಿಯರ್ ಕಾಲೇಜು, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಮಹಾರಾಣಿ ಮಹಿಳಾ ಕಲಾ ಕಾಲೇಜು, ಕೃಷ್ಣರಾಜ ವಿಧಾನಸಭಾ ಕ್ಷೇತ್ರಕ್ಕೆ ಮಹಾರಾಜ ಶತಮಾನೋತ್ಸವ ಭವನ ಶೈಕ್ಷಣಿಕ ಕಟ್ಟಡದ ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು, ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ ಮೈಸೂರಿನ ಬೇಡನ್ ಪೋವೆಲ್ ಆಂಗ್ಲ ಮಾಧ್ಯಮ ಪಬ್ಲಿಕ್ ಶಾಲೆ, ನರಸಿಂಹರಾಜ ವಿಧಾನಸಭಾ ಕ್ಷೇತ್ರಕ್ಕೆ ಜಗದ್ಗುರು ಶ್ರೀ ಶಿವರಾತ್ರೇಶ್ವರ ಕಲಾ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು, ವರುಣ ವಿಧಾನಸಭಾ ಕ್ಷೇತ್ರಕ್ಕೆ ನಂಜನಗೂಡಿನ ಜೆ.ಎಸ್.ಎಸ್ ಪ್ರಥಮ ದರ್ಜೆ ಕಾಲೇಜು, ಟಿ.ನರಸೀಪುರ ವಿಧಾನಸಭಾ ಕ್ಷೇತ್ರಕ್ಕೆ ಟಿ.ನರಸೀಪುರದ ವಿದ್ಯೋದಯ ಪದವಿ ಪೂರ್ವ ಕಾಲೇಜುಗಳಲ್ಲಿ ಮಸ್ಟರಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಯಾವುದೇ ಮತದಾನಾಧಿಕಾರಿಗಳು ಮಸ್ಟರಿಂಗ್ ಕೇಂದ್ರಕ್ಕೆ ತಡವಾಗಿ ಹಾಜರಾಗಬಾರದು. ಮತದಾನದ ಅಧಿಕಾರಿಗಳಾಗಿ ನೇಮಕ ಮಾಡಿರುವ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಅಥವಾ ನೌಕರರು ತಮಗೆ ನಿಗದಿಪಡಿಸಿರುವ ವಿಧಾನಸಭಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಗಳಲ್ಲಿ ಬೆಳಿಗ್ಗೆ 8.30 ಗಂಟೆಯ ಒಳಗೆ ಕಡ್ಡಾಯವಾಗಿ ಹಾಜರಿರಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಕೆ.ವಿ.ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…