ಮೈಸೂರು: ಆದಾಯ ಮೀರಿದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬಿನಿ ಅಧೀಕ್ಷಕ ಅಭಿಯಂತರರ ಮನೆ ಮೇಲೆ ಲೋಕಾಯುಕ್ತ ಗುರುವಾರ ಬೆಳಿಗ್ಗೆ (ಜುಲೈ. 11) ದಿಢೀರ್ ದಾಳಿ ಮಾಡಿದೆ.
ಕಬಿನಿ ಜಲಾಶಯದ ಎಸ್ಇ (ಸೂಪರಿಂಟೆಂಡೆಂಟ್ ಎಂಜಿನಿಯರ್) ಕೆ. ಮಹೇಶ್ ಎಂಬುವವರ ಮೈಸೂರಿನ ಮನೆ ಮೇಲೆ ಲೋಕಾ ದಾಳಿ ನಡೆಸಿದೆ. ಚಾಮುಂಡಿ ಬೆಟ್ಟದ ರಸ್ತೆಯ ಕೆಂಪ ಚಲುವಮ್ಮಣಿ ನಗರದ ಮನೆಯಲ್ಲಿನ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಪೊಲೀಸ್ ಮಹಾ ನಿರ್ದೇಶಕರು ಪ್ರಶಾಂತ್ ಕುಮಾರ್ ಟಾಗೋರ್ ಹಾಗೂ ಮೈಸೂರು ಪ್ರಭಾರ ಎಸ್ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ, ಮೈಸೂರು ಲೋಕಾಯುಕ್ತ ಡಿವೈಎಸ್ಪಿ ಕೃಷ್ಣಯ್ಯ. ವಿ, ರವಿ ಕುಮಾರ್, ಜಯರತ್ನ, ಲೋಕೇಶ್ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…