ಮೈಸೂರು : ಜಿಲ್ಲೆಯಲ್ಲೂ ಕೂಡ ಭ್ರಷ್ಟಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದು, ಪೊಲೀಸ್ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದರು.
ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪ ಮೈಸೂರಿನ ಶಾರದದೇವಿ ನಗರದಲ್ಲಿರುವ ಲೇಬರ್ ಇನ್ಸ್ ಪೆಕ್ಟರ್ ಚೇತನ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ದಾಳಿಯ ವೇಳೆ ಮನೆಯಲ್ಲಿ ಇದ್ದಂತಹ ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.
ಇಂದು ಒಂದೇ ದಿನ ಬೆಂಗಳೂರು ಸೇರಿದಂತೆ ರಾಜ್ಯದ ೩೦ ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಬ್ಬರು ಲೋಕಾಯುಕ್ತ ಎಸ್ಪಿಗಳ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ರಾಜ್ಯದ ಒಟ್ಟು ೧೨ ಕೇಸ್ ಗಳಲ್ಲಿ ಭಾಗಿಯಾಗಿದ್ದವರ ಮನೆಗಳ ಮೇಲೆ ದಾಳಿ ನಡೆದಿದೆ.
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…
ಪಾಲ್ಘಾರ್: ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯ ವಾಡಾ ತಾಲ್ಲೂಕಿನಲ್ಲಿ…
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ ಎಂದು ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲಿನ ಝಳಕ್ಕೆ ಮನುಷ್ಯರು ಬಸವಳಿದಂತೆ ವನ್ಯಜೀವಿಗಳು ಕಂಗಲಾಗಿವೆ. ಅದರಂತೆ, ಬಿಸಿಲಿನ…
ಗುಂಡ್ಲುಪೇಟೆ: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್…