ಮೈಸೂರು

ಮೈಸೂರು | ಏಕಕಾಲಕ್ಕೆ ಎಂಟು ಕಡೆ ಲೋಕಾ ದಾಳಿ

ಮೈಸೂರು: ಇ-ಖಾತಾ, ಆಸ್ತಿ ದಾಖಲೆಗಳನ್ನು ಪಡೆಯಲು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ ಪೊಲೀಸರು, ಶುಕ್ರವಾರ ನಗರಪಾಲಿಕೆ ವಲಯ ಕಚೇರಿಗಳು ಹಾಗೂ ಪಟ್ಟಣ ಪಂಚಾಯ್ತಿ ಕಚೇರಿಗಳ ಮೇಲೆ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿಗಳಲ್ಲಿ ಆಸ್ತಿಗಳ ಇ-ಖಾತಾ ಪಡೆಯಲು ಮತ್ತು ಇತರ ಸಂಬಂಧಿತ ಕೆಲಸಗಳನ್ನು ಪೂರ್ಣಗೊಳಿಸಲು ಆಸ್ತಿ ಮಾಲೀಕರಿಂದ 40,000 ರೂ.ಗಳಿಂದ 1 ಲಕ್ಷ ರೂ.ಗಳವರೆಗೆ ಲಂಚ ಕೇಳಲಾಗುತ್ತಿದೆ ಎಂದು ಸಾಕಷ್ಟು ಸಾರ್ವಜನಿಕರು ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ, ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳಿಗೆ ಶಾಕ್ ನಿಡಿದ್ದಾರೆ. ನಗರದ 5 ವಲಯ ಕಚೇರಿಗಳು ಮತ್ತು 3 ಪಟ್ಟಣ ಪಂಚಾಯಿತಿಗಳ ಮೇಲೆ ದಾಳಿ ನಡೆಸಿದರು.

ನಗರಪಾಲಿಕೆಯ ವಲಯ ಕಚೇರಿಗಳ 2,3,7,8 ಮತ್ತು 9 ಹಾಗೂ ಶ್ರೀರಾಂಪುರ, ಬೋಗಾದಿ ಮತ್ತು ರಮ್ಮನಹಳ್ಳಿ ಪಟ್ಟಣ ಪಂಚಾಯ್ತಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ.

ಬೆಳಿಗ್ಗೆ 11.30 ರ ಸುಮಾರಿಗೆ ದಾಳಿ ನಡೆಸಲಾಯಿತು. ದಾಳಿಯ ಸಮಯದಲ್ಲಿ, ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳು, ಕಡತಗಳು, ರಿಜಿಸ್ಟರ್‌ಗಳು ಮತ್ತು ಇತರ ದಾಖಲೆಗಳನ್ನು ಪರಿಶೀಲಿಸಿದರು.

ಇದೇ ವೇಳೆ ಇ-ಖಾತಾ ಮಾಡಿಕೊಡುವ ಸಂಬಂದ ಸರ್ವರ್ ಸಮಸ್ಯೆ ಇದೆ ಎಂಬ ಫಲಕಗಳನ್ನು ಕೆಲ ಕಚೇರಿಗಳ ಮುಂದೆ ಪ್ರದರ್ಶಿಸಲಾಗಿತ್ತು. ಇದಕ್ಕೆ ಬೇಸರ ವ್ಯಕ್ತಪಡಿಸಿದ ಲೋಕಾ ಅಧಿಕಾರಿಗಳು ಇದು ಲಂಚಕ್ಕೆ ಬೇಡಿಕೆ ಇಡುವ ಉಪಾಯವೇ ಎಂದು ಪ್ರಶ್ನಿಸಿದರು ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

8 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

8 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

9 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

9 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

10 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

10 hours ago