ಮೈಸೂರು

ಮೈಸೂರು | ಏಕಕಾಲಕ್ಕೆ ಎಂಟು ಕಡೆ ಲೋಕಾ ದಾಳಿ

ಮೈಸೂರು: ಇ-ಖಾತಾ, ಆಸ್ತಿ ದಾಖಲೆಗಳನ್ನು ಪಡೆಯಲು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ ಪೊಲೀಸರು, ಶುಕ್ರವಾರ ನಗರಪಾಲಿಕೆ ವಲಯ ಕಚೇರಿಗಳು ಹಾಗೂ ಪಟ್ಟಣ ಪಂಚಾಯ್ತಿ ಕಚೇರಿಗಳ ಮೇಲೆ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿಗಳಲ್ಲಿ ಆಸ್ತಿಗಳ ಇ-ಖಾತಾ ಪಡೆಯಲು ಮತ್ತು ಇತರ ಸಂಬಂಧಿತ ಕೆಲಸಗಳನ್ನು ಪೂರ್ಣಗೊಳಿಸಲು ಆಸ್ತಿ ಮಾಲೀಕರಿಂದ 40,000 ರೂ.ಗಳಿಂದ 1 ಲಕ್ಷ ರೂ.ಗಳವರೆಗೆ ಲಂಚ ಕೇಳಲಾಗುತ್ತಿದೆ ಎಂದು ಸಾಕಷ್ಟು ಸಾರ್ವಜನಿಕರು ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ, ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳಿಗೆ ಶಾಕ್ ನಿಡಿದ್ದಾರೆ. ನಗರದ 5 ವಲಯ ಕಚೇರಿಗಳು ಮತ್ತು 3 ಪಟ್ಟಣ ಪಂಚಾಯಿತಿಗಳ ಮೇಲೆ ದಾಳಿ ನಡೆಸಿದರು.

ನಗರಪಾಲಿಕೆಯ ವಲಯ ಕಚೇರಿಗಳ 2,3,7,8 ಮತ್ತು 9 ಹಾಗೂ ಶ್ರೀರಾಂಪುರ, ಬೋಗಾದಿ ಮತ್ತು ರಮ್ಮನಹಳ್ಳಿ ಪಟ್ಟಣ ಪಂಚಾಯ್ತಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ.

ಬೆಳಿಗ್ಗೆ 11.30 ರ ಸುಮಾರಿಗೆ ದಾಳಿ ನಡೆಸಲಾಯಿತು. ದಾಳಿಯ ಸಮಯದಲ್ಲಿ, ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳು, ಕಡತಗಳು, ರಿಜಿಸ್ಟರ್‌ಗಳು ಮತ್ತು ಇತರ ದಾಖಲೆಗಳನ್ನು ಪರಿಶೀಲಿಸಿದರು.

ಇದೇ ವೇಳೆ ಇ-ಖಾತಾ ಮಾಡಿಕೊಡುವ ಸಂಬಂದ ಸರ್ವರ್ ಸಮಸ್ಯೆ ಇದೆ ಎಂಬ ಫಲಕಗಳನ್ನು ಕೆಲ ಕಚೇರಿಗಳ ಮುಂದೆ ಪ್ರದರ್ಶಿಸಲಾಗಿತ್ತು. ಇದಕ್ಕೆ ಬೇಸರ ವ್ಯಕ್ತಪಡಿಸಿದ ಲೋಕಾ ಅಧಿಕಾರಿಗಳು ಇದು ಲಂಚಕ್ಕೆ ಬೇಡಿಕೆ ಇಡುವ ಉಪಾಯವೇ ಎಂದು ಪ್ರಶ್ನಿಸಿದರು ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

18 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

18 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

18 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

18 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

18 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

18 hours ago