ನಂಜನಗೂಡು: ಲಂಚ ಸ್ವೀಕರಿಸುವಾಗಲೇ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ಕಾವೇರಿ ರಂಗನಾಥನ್ ಹಾಗೂ ಅಕೌಂಟ್ ಸೂಪರಿಡೆಂಟ್ ಉಮಾ ಮಹೇಶ್ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಟೆಂಡರ್ ಹಣ ಬಿಡುಗಡೆಗೆ ಚಾಮರಾಜನಗರದ ನಿವಾಸಿ ಅಬ್ದುಲ್ ಅಜೀಜ್ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಕಳೆದ 2022ರಲ್ಲಿ ನಾಲೆ ರಿಪೇರಿಗೆ ಟೆಂಡರ್ ಕರೆಯಲಾಗಿತ್ತು. 23.10 ಲಕ್ಷ ರೂಗೆ ಕಾಮಗಾರಿ ಹಣ ಬಿಡುಗಡೆ ಮಾಡುವ ಮೊದಲು 6% ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಇದಾದ ಸ್ವಲ್ಪ ದಿನಗಳ ಬಳಿಕ 1 ಲಕ್ಷದ 45 ಸಾವಿರ ರೂಗೆ ಡಿಮ್ಯಾಂಡ್ ಮಾಡಲಾಗಿತ್ತು. ಇಂದು ಇಬ್ಬರೂ ಅಧಿಕಾರಿಗಳು ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಈ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬಿಗ್ ಶಾಕ್ ನೀಡಿದ್ದು, ಇಬ್ಬರನ್ನು ಬಂಧಿಸಿ ಠಾಣೆಗೆ ಕರೆದೊಯ್ಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…