ಮೈಸೂರು

ಯದುವೀರ್‌ ಗೆಲ್ಲಿಸಿ ಮಹಾರಾಜರ ಋಣ ತೀರಿಸಿ: ಯದುವೀರ್ ಪರ ಸುಮಲತಾ ಮತ ಪ್ರಚಾರ

ಮೈಸೂರು: ಯದುವೀರ್‌ ತುಂಬ ಸರಳ ವ್ಯಕ್ತಿ, ಜೊತೆಗೆ ವಿದ್ಯಾವಂತರಾಗಿದ್ದಾರೆ, ಅವರಿಗೆ ರಾಜಕೀಯ ಅವಶ್ಯಕತೆ ಇಲ್ಲ, ಆದರೆ ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದಾರೆ. ಯದುವೀರ್‌ ಒಡೆಯರ್‌ಗೆ ಮತ ನೀಡಿ ಮೈಸೂರು ಮಹಾರಾಜರ ಋಣ ತೀರಿಸಿ ಎಂದು ಸುಮಲತಾ ಅಂಬರೀಶ್‌ ಮನವಿ ಮಾಡಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪರ ಮತ ಪ್ರಚಾರ ಮಾಡಿ, ಕೆ.ಆರ್‌ ಕ್ಷೇತ್ರದಲ್ಲಿ ನಡೆದ ನಾರಿಶಕ್ತಿ ಸಮಾವೇಶದಲ್ಲಿ ಮಾತನಾಡಿದ ಸುಮಲತಾ ಅಂಬರೀಶ್‌ ಕಳೆದ ಬಾರಿ ನಾನು ಪಕ್ಷೇತರವಾಗಿ ಮಂಡ್ಯದಿಂದ ಸ್ಪರ್ಧಿಸಿದಾಗ ನನ್ನ ನೆರವಿಗೆ ನಿಂತಿದ್ದೇ ನನ್ನ ಮಹಿಳೆಯರು. ಮೈಸೂರಿಗೂ ನಮಗೂ ಅವಿನಾಭಾವ ಸಂಬಂಧ ಇದೆ. ನನ್ನ ಪತಿ ಅಂಬರೀಶ್‌ ಓದಿದ್ದು, ಬೆಳೆದಿದ್ದು ಇದೇ ಜಾಗದಲ್ಲಿ. ನಾನೂ ಕೂಡ ಇಲ್ಲಿ ಹಲವಾರು ಸಿನಿಮಾ ಚಿತ್ರೀಕರಣಕ್ಕೆ ಬಂದಿದ್ದೇನೆ. ಇಂತಹ ವೈಭವದ ಮೈಸೂರಿಗೆ ಮಹಾರಾಜರ ಕೊಡುಗೆ ಸಾಕಷ್ಟಿದೆ ಎಂದು ಹೇಳಿದರು.

ಕೇಂದ್ರದ ಬಿಜೆಪಿಯವರು ಮೈಸೂರಿಗೆ ಹಲವಾರು ಅಭಿವೃದ್ಧಿ ಯೋಜನೆ ತಂದಿದ್ದಾರೆ. ವಿಕಸಿತ ಭಾರತದ ಸಂಕಲ್ಪ ಹೊಂದಿರುವ ಮೋದಿಯವರು ಭಾರತವನ್ನು ಪ್ರಪಂಚದಲ್ಲೇ ಮೊದಲ ಸ್ಥಾನಕ್ಕೇರಿಸಲು ಪಣತೊಟ್ಟಿದ್ದಾರೆ. ಹೀಗಾಗಿ ಮೋದಿ ಅವರ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಎಂದರು.

ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರಿನ ಜನರಿಗೆ ಒಂದಲ್ಲಾ ರೀತಿ ಮೈಸೂರು ರಾಜರ ಕೊಡುಗೆಗಳಿವೆ. ಅವರ ಋಣ ತೀರಿಸುವ ಅವಕಾಶ ಒದಗಿ ಬಂದಿದೆ. ಕೆಆರ್‌ಎಸ್‌ ಅಣೆಕಟ್ಟೆಯಿಂದ ಸಹಸ್ರಾರು ಜನರಿಗೆ ಅನುಕೂಲ ಆಗಿದೆ. ಹೀಗಾಗಿ ಯದುವೀರ್‌ ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಿ ಎಂದು ಸುಮಲತಾ ಅಂಬರೀಶ್‌ ಮನವಿ ಮಾಡಿದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

10 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

10 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

11 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

11 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

11 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

13 hours ago