ಮೈಸೂರು: ಯದುವೀರ್ ತುಂಬ ಸರಳ ವ್ಯಕ್ತಿ, ಜೊತೆಗೆ ವಿದ್ಯಾವಂತರಾಗಿದ್ದಾರೆ, ಅವರಿಗೆ ರಾಜಕೀಯ ಅವಶ್ಯಕತೆ ಇಲ್ಲ, ಆದರೆ ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದಾರೆ. ಯದುವೀರ್ ಒಡೆಯರ್ಗೆ ಮತ ನೀಡಿ ಮೈಸೂರು ಮಹಾರಾಜರ ಋಣ ತೀರಿಸಿ ಎಂದು ಸುಮಲತಾ ಅಂಬರೀಶ್ ಮನವಿ ಮಾಡಿದರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರ ಮತ ಪ್ರಚಾರ ಮಾಡಿ, ಕೆ.ಆರ್ ಕ್ಷೇತ್ರದಲ್ಲಿ ನಡೆದ ನಾರಿಶಕ್ತಿ ಸಮಾವೇಶದಲ್ಲಿ ಮಾತನಾಡಿದ ಸುಮಲತಾ ಅಂಬರೀಶ್ ಕಳೆದ ಬಾರಿ ನಾನು ಪಕ್ಷೇತರವಾಗಿ ಮಂಡ್ಯದಿಂದ ಸ್ಪರ್ಧಿಸಿದಾಗ ನನ್ನ ನೆರವಿಗೆ ನಿಂತಿದ್ದೇ ನನ್ನ ಮಹಿಳೆಯರು. ಮೈಸೂರಿಗೂ ನಮಗೂ ಅವಿನಾಭಾವ ಸಂಬಂಧ ಇದೆ. ನನ್ನ ಪತಿ ಅಂಬರೀಶ್ ಓದಿದ್ದು, ಬೆಳೆದಿದ್ದು ಇದೇ ಜಾಗದಲ್ಲಿ. ನಾನೂ ಕೂಡ ಇಲ್ಲಿ ಹಲವಾರು ಸಿನಿಮಾ ಚಿತ್ರೀಕರಣಕ್ಕೆ ಬಂದಿದ್ದೇನೆ. ಇಂತಹ ವೈಭವದ ಮೈಸೂರಿಗೆ ಮಹಾರಾಜರ ಕೊಡುಗೆ ಸಾಕಷ್ಟಿದೆ ಎಂದು ಹೇಳಿದರು.
ಕೇಂದ್ರದ ಬಿಜೆಪಿಯವರು ಮೈಸೂರಿಗೆ ಹಲವಾರು ಅಭಿವೃದ್ಧಿ ಯೋಜನೆ ತಂದಿದ್ದಾರೆ. ವಿಕಸಿತ ಭಾರತದ ಸಂಕಲ್ಪ ಹೊಂದಿರುವ ಮೋದಿಯವರು ಭಾರತವನ್ನು ಪ್ರಪಂಚದಲ್ಲೇ ಮೊದಲ ಸ್ಥಾನಕ್ಕೇರಿಸಲು ಪಣತೊಟ್ಟಿದ್ದಾರೆ. ಹೀಗಾಗಿ ಮೋದಿ ಅವರ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಎಂದರು.
ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರಿನ ಜನರಿಗೆ ಒಂದಲ್ಲಾ ರೀತಿ ಮೈಸೂರು ರಾಜರ ಕೊಡುಗೆಗಳಿವೆ. ಅವರ ಋಣ ತೀರಿಸುವ ಅವಕಾಶ ಒದಗಿ ಬಂದಿದೆ. ಕೆಆರ್ಎಸ್ ಅಣೆಕಟ್ಟೆಯಿಂದ ಸಹಸ್ರಾರು ಜನರಿಗೆ ಅನುಕೂಲ ಆಗಿದೆ. ಹೀಗಾಗಿ ಯದುವೀರ್ ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಿ ಎಂದು ಸುಮಲತಾ ಅಂಬರೀಶ್ ಮನವಿ ಮಾಡಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…