ಮೈಸೂರು

ಯದುವೀರ್‌ ಗೆಲ್ಲಿಸಿ ಮಹಾರಾಜರ ಋಣ ತೀರಿಸಿ: ಯದುವೀರ್ ಪರ ಸುಮಲತಾ ಮತ ಪ್ರಚಾರ

ಮೈಸೂರು: ಯದುವೀರ್‌ ತುಂಬ ಸರಳ ವ್ಯಕ್ತಿ, ಜೊತೆಗೆ ವಿದ್ಯಾವಂತರಾಗಿದ್ದಾರೆ, ಅವರಿಗೆ ರಾಜಕೀಯ ಅವಶ್ಯಕತೆ ಇಲ್ಲ, ಆದರೆ ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದಾರೆ. ಯದುವೀರ್‌ ಒಡೆಯರ್‌ಗೆ ಮತ ನೀಡಿ ಮೈಸೂರು ಮಹಾರಾಜರ ಋಣ ತೀರಿಸಿ ಎಂದು ಸುಮಲತಾ ಅಂಬರೀಶ್‌ ಮನವಿ ಮಾಡಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪರ ಮತ ಪ್ರಚಾರ ಮಾಡಿ, ಕೆ.ಆರ್‌ ಕ್ಷೇತ್ರದಲ್ಲಿ ನಡೆದ ನಾರಿಶಕ್ತಿ ಸಮಾವೇಶದಲ್ಲಿ ಮಾತನಾಡಿದ ಸುಮಲತಾ ಅಂಬರೀಶ್‌ ಕಳೆದ ಬಾರಿ ನಾನು ಪಕ್ಷೇತರವಾಗಿ ಮಂಡ್ಯದಿಂದ ಸ್ಪರ್ಧಿಸಿದಾಗ ನನ್ನ ನೆರವಿಗೆ ನಿಂತಿದ್ದೇ ನನ್ನ ಮಹಿಳೆಯರು. ಮೈಸೂರಿಗೂ ನಮಗೂ ಅವಿನಾಭಾವ ಸಂಬಂಧ ಇದೆ. ನನ್ನ ಪತಿ ಅಂಬರೀಶ್‌ ಓದಿದ್ದು, ಬೆಳೆದಿದ್ದು ಇದೇ ಜಾಗದಲ್ಲಿ. ನಾನೂ ಕೂಡ ಇಲ್ಲಿ ಹಲವಾರು ಸಿನಿಮಾ ಚಿತ್ರೀಕರಣಕ್ಕೆ ಬಂದಿದ್ದೇನೆ. ಇಂತಹ ವೈಭವದ ಮೈಸೂರಿಗೆ ಮಹಾರಾಜರ ಕೊಡುಗೆ ಸಾಕಷ್ಟಿದೆ ಎಂದು ಹೇಳಿದರು.

ಕೇಂದ್ರದ ಬಿಜೆಪಿಯವರು ಮೈಸೂರಿಗೆ ಹಲವಾರು ಅಭಿವೃದ್ಧಿ ಯೋಜನೆ ತಂದಿದ್ದಾರೆ. ವಿಕಸಿತ ಭಾರತದ ಸಂಕಲ್ಪ ಹೊಂದಿರುವ ಮೋದಿಯವರು ಭಾರತವನ್ನು ಪ್ರಪಂಚದಲ್ಲೇ ಮೊದಲ ಸ್ಥಾನಕ್ಕೇರಿಸಲು ಪಣತೊಟ್ಟಿದ್ದಾರೆ. ಹೀಗಾಗಿ ಮೋದಿ ಅವರ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಎಂದರು.

ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರಿನ ಜನರಿಗೆ ಒಂದಲ್ಲಾ ರೀತಿ ಮೈಸೂರು ರಾಜರ ಕೊಡುಗೆಗಳಿವೆ. ಅವರ ಋಣ ತೀರಿಸುವ ಅವಕಾಶ ಒದಗಿ ಬಂದಿದೆ. ಕೆಆರ್‌ಎಸ್‌ ಅಣೆಕಟ್ಟೆಯಿಂದ ಸಹಸ್ರಾರು ಜನರಿಗೆ ಅನುಕೂಲ ಆಗಿದೆ. ಹೀಗಾಗಿ ಯದುವೀರ್‌ ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಿ ಎಂದು ಸುಮಲತಾ ಅಂಬರೀಶ್‌ ಮನವಿ ಮಾಡಿದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

7 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago