accident (1)
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ ಸೋಸಲೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ತಾಲೂಕಿನ ವೀರಪ್ಪ ಓಡೆಯರಹುಂಡಿ ಗ್ರಾಮದ ಶ್ರೀಕಂಠಸ್ವಾಮಿ ಎಂಬುವರ ಪುತ್ರ ಸಿದ್ಧಲಿಂಗಸ್ವಾಮಿ(26) ಮೃತಪಟ್ಟ ಯುವಕ. ಊರಿನಿಂದ ಹೀರೋಹೊಂಡಾ ಸಿ.ಡಿ 100(ಸಿಕೆಎಲ್ 9901) ನಲ್ಲಿ ಚಿಕ್ಕಪ್ಪ ಎಸ್.ಕುಮಾರಸ್ವಾಮಿ ಜೊತೆ ಪಟ್ಟಣಕ್ಕೆ ಬರುತ್ತಿದ್ದಾಗ ಸೋಸಲೆ ಡೇರಿ ಮುಂಭಾಗ ಎದುರಿಗೆ ವೇಗವಾಗಿ ಬಂದ ಲಾರಿ(ಕೆ ಎ 19, ಡಿ 5044) ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ನಡೆಯಿತು.
ಇದನ್ನೂ ಓದಿ:-ಕಾಸರಗೋಡು ಸೀಮೆಯಲ್ಲಿ ನಂಜನಗೂಡು ನರಸಣ್ಣ
ತಲೆಗೆ ತೀವ್ರತರದ ಪೆಟ್ಟು ಬಿದ್ದುದ್ದರಿಂದ ಸಿದ್ಧಲಿಂಗಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಎಸ್.ಕುಮಾರಸ್ವಾಮಿ ಅವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತ ದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಈ ಸಂಬಂಧ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…