ಮೈಸೂರು: ಡೀಸೆಲ್ ಬೆಲೆ ಏರಿಕೆ ಹಾಗೂ ಟೋಲ್ ದರ ಹೆಚ್ಚಳ ಖಂಡಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಯುತ್ತಿದ್ದು, ಮೈಸೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮೈಸೂರಿನಲ್ಲಿರುವ ಸುಮಾರು 9 ಸಾವಿರ ಗೂಡ್ಸ್ ಲಾರಿಗಳು ಸಂಪೂರ್ಣ ಬಂದ್ ಆಗಿದ್ದು, ಅಗತ್ಯ ವಸ್ತುಗಳ ಸೇವೆ ಹೊರತುಪಡಿಸಿ ಉಳಿದ ಸೇವೆಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಡೀಸೆಲ್ ದರ ಕಡಿಮೆ ಮಾಡಿ, ಟೋಲ್ ದರ ರದ್ದುಗೊಳಿಸಬೇಕು. ಆರ್ಟಿಓ ಗಡಿ ಚೆಕ್ಪೋಸ್ಟ್ ರದ್ದುಗೊಳಿಸಿ, ಎಫ್ಸಿ ಶುಲ್ಕವನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ಮುಷ್ಕರ ನಡೆಯುತ್ತಿದ್ದು, ಬನ್ನಿಮಂಟಪದ ಗೂಡ್ಸ್ ಶೆಡ್ ಬಳಿ ಸಾವಿರಾರು ಲಾರಿಗಳು ರಸ್ತೆಗಿಳಿಯದೇ ನಿಂತಲ್ಲೇ ನಿಂತಿವೆ. ಗೂಡ್ಸ್ ರೈಲಿನಲ್ಲಿ ಬಂದಿರುವ ರೈತರ ರಸಗೊಬ್ಬರವನ್ನ ಅನ್ ಲೋಡ್ ಮಾಡದೇ ಮುಷ್ಕರದಲ್ಲಿ ಭಾಗಿಯಾಗಿರುವ ಚಾಲಕರು, ಬೇಡಿಕೆ ಈಡೇರುವವರೆಗೂ ಸೇವೆ ಆರಂಭಿಸಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಈ ಬಗ್ಗೆ ಆಂದೋಲನ ಜೊತೆ ಮಾತನಾಡಿರುವ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಕೋದಂಡರಾಮ ಅವರು, ಬೇಡಿಕೆ ಈಡೇರುವವರೆಗೂ ನಮ್ಮ ಹೋರಾಟ ನಿಲ್ಲಲ್ಲ. ಒಂದು ವೇಳೆ ಬೇಡಿಕೆ ಈಡೇರದಿದ್ದರೆ ಮುಂದೆ ಉಗ್ರ ಹೋರಾಟ ಮುಂದುವರಿಯುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…