ಮೈಸೂರು: ಡೀಸೆಲ್ ಬೆಲೆ ಏರಿಕೆ ಹಾಗೂ ಟೋಲ್ ದರ ಹೆಚ್ಚಳ ಖಂಡಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಯುತ್ತಿದ್ದು, ಮೈಸೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮೈಸೂರಿನಲ್ಲಿರುವ ಸುಮಾರು 9 ಸಾವಿರ ಗೂಡ್ಸ್ ಲಾರಿಗಳು ಸಂಪೂರ್ಣ ಬಂದ್ ಆಗಿದ್ದು, ಅಗತ್ಯ ವಸ್ತುಗಳ ಸೇವೆ ಹೊರತುಪಡಿಸಿ ಉಳಿದ ಸೇವೆಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಡೀಸೆಲ್ ದರ ಕಡಿಮೆ ಮಾಡಿ, ಟೋಲ್ ದರ ರದ್ದುಗೊಳಿಸಬೇಕು. ಆರ್ಟಿಓ ಗಡಿ ಚೆಕ್ಪೋಸ್ಟ್ ರದ್ದುಗೊಳಿಸಿ, ಎಫ್ಸಿ ಶುಲ್ಕವನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ಮುಷ್ಕರ ನಡೆಯುತ್ತಿದ್ದು, ಬನ್ನಿಮಂಟಪದ ಗೂಡ್ಸ್ ಶೆಡ್ ಬಳಿ ಸಾವಿರಾರು ಲಾರಿಗಳು ರಸ್ತೆಗಿಳಿಯದೇ ನಿಂತಲ್ಲೇ ನಿಂತಿವೆ. ಗೂಡ್ಸ್ ರೈಲಿನಲ್ಲಿ ಬಂದಿರುವ ರೈತರ ರಸಗೊಬ್ಬರವನ್ನ ಅನ್ ಲೋಡ್ ಮಾಡದೇ ಮುಷ್ಕರದಲ್ಲಿ ಭಾಗಿಯಾಗಿರುವ ಚಾಲಕರು, ಬೇಡಿಕೆ ಈಡೇರುವವರೆಗೂ ಸೇವೆ ಆರಂಭಿಸಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಈ ಬಗ್ಗೆ ಆಂದೋಲನ ಜೊತೆ ಮಾತನಾಡಿರುವ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಕೋದಂಡರಾಮ ಅವರು, ಬೇಡಿಕೆ ಈಡೇರುವವರೆಗೂ ನಮ್ಮ ಹೋರಾಟ ನಿಲ್ಲಲ್ಲ. ಒಂದು ವೇಳೆ ಬೇಡಿಕೆ ಈಡೇರದಿದ್ದರೆ ಮುಂದೆ ಉಗ್ರ ಹೋರಾಟ ಮುಂದುವರಿಯುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…