ಮೈಸೂರು

ಅಮ್ಮನ ಭಕ್ತರು ಶುಚಿತ್ವ ಮರೆತರಾ?

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟ ನಾಡಿನ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಪ್ರಮುಖ ಸ್ಥಾನ ಪಡೆದಿದೆ. ನಾಡ ಅಧಿದೇವತೆ ದರ್ಶನಕ್ಕೆ ಪ್ರತಿನಿತ್ಯ ಸಾವಿರಾರು ಮಂದಿ ಆಗಮಿಸಿ ಪುನೀತ ರಾಗುತ್ತಾರೆ. ಆದ್ರೆ ಇಲ್ಲಿಗೆ ಬರೋ ಜನರು ತ್ಯಾಜ್ಯ ನಿರ್ವಹಣೆ ಹಾಗೂ ಶುಚಿತ್ವದ ಕಡೆ ಹೆಚ್ಚು ಗಮನ ಹರಿಸಲ್ಲ ಅನ್ನೋ ವಿಚಾರ ಇದೀಗ ಮತ್ತೆ ಸಾಬೀತಾಗಿದೆ.

ಚಾಮುಂಡಿ ಮಹಾ ರಥೋತ್ಸವದ ಭಾಗವಾಗಿ ಭಾನುವಾರ ಸಾವಿರಾರು ಮಂದಿ ಬೆಟ್ಟಕ್ಕೆ ಅಗಮಿಸಿದ್ದರು. ಈ ವೇಳೆ ಹಲವರು ಮೆಟ್ಟಿಲಿನಿಂದ ಹತ್ತಿ ಅಮ್ಮನ ದರ್ಶನ ಪಡೆದಿದ್ರು. ಆದ್ರೆ, ಬೆಟ್ಟದ ಪಾದದ ಬಳಿ ಅಶುಚಿತ್ವ ತಾಂಡವವಾಡುತ್ತಿದ್ದು, ಪರಿಸರಕ್ಕೆ ಧಕ್ಕೆ ಆಗುತ್ತಿದೆ. ಜನ ಎಲ್ಲೆಂದರಲ್ಲಿ ಕಸ ಬಿಸಾಡಿ ಹೋಗಿದ್ದಾರೆ.

ರಾಶಿಗಟ್ಟಲೇ ಕಸದ ರಾಶಿ.! 

ಚಾಮುಂಡಿ ರಥೋತ್ಸವ ಹಿನ್ನೆಲೆ ಬೆಟ್ಟದ ಪಾದ ಮೆಟ್ಟಿಲು ಹತ್ತುವ ಜಾಗದಲ್ಲಿ ಹಲವಾರು ಮಂದಿ ಪ್ರಸಾದ ವಿತರಣೆ ಮಾಡ್ತಿದ್ದರು.. ಆದರೆ, ಪ್ರಸಾದ ಹಂಚಿದ ನಂತರ ಬಳಸಿದ್ದ ಪ್ರತಿಯೊಂದು ವಸ್ತುವನ್ನ ಬೇಕಾಬಿಟ್ಟಿ ಬಿಸಾಡಿ ಹೋಗಿದ್ದು, ಇದ್ರಿಂದ ರಾಶಿ ರಾಶಿ ಕಸ ಬಿದ್ದಿದೆ. ಅರಣ್ಯ ಪ್ರದೇಶಕ್ಕೆ ಸಾಕಷ್ಟು ಹಾನಿಯಾಗುವ ಆತಂಕ ಎದುರಾಗಿದೆ.

andolana

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

56 mins ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

5 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

5 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

5 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

6 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

6 hours ago