ಮೈಸೂರು: ಮೈಸೂರಿನ ಚಾಮುಂಡಿಬೆಟ್ಟ ನಾಡಿನ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಪ್ರಮುಖ ಸ್ಥಾನ ಪಡೆದಿದೆ. ನಾಡ ಅಧಿದೇವತೆ ದರ್ಶನಕ್ಕೆ ಪ್ರತಿನಿತ್ಯ ಸಾವಿರಾರು ಮಂದಿ ಆಗಮಿಸಿ ಪುನೀತ ರಾಗುತ್ತಾರೆ. ಆದ್ರೆ ಇಲ್ಲಿಗೆ ಬರೋ ಜನರು ತ್ಯಾಜ್ಯ ನಿರ್ವಹಣೆ ಹಾಗೂ ಶುಚಿತ್ವದ ಕಡೆ ಹೆಚ್ಚು ಗಮನ ಹರಿಸಲ್ಲ ಅನ್ನೋ ವಿಚಾರ ಇದೀಗ ಮತ್ತೆ ಸಾಬೀತಾಗಿದೆ.
ಚಾಮುಂಡಿ ಮಹಾ ರಥೋತ್ಸವದ ಭಾಗವಾಗಿ ಭಾನುವಾರ ಸಾವಿರಾರು ಮಂದಿ ಬೆಟ್ಟಕ್ಕೆ ಅಗಮಿಸಿದ್ದರು. ಈ ವೇಳೆ ಹಲವರು ಮೆಟ್ಟಿಲಿನಿಂದ ಹತ್ತಿ ಅಮ್ಮನ ದರ್ಶನ ಪಡೆದಿದ್ರು. ಆದ್ರೆ, ಬೆಟ್ಟದ ಪಾದದ ಬಳಿ ಅಶುಚಿತ್ವ ತಾಂಡವವಾಡುತ್ತಿದ್ದು, ಪರಿಸರಕ್ಕೆ ಧಕ್ಕೆ ಆಗುತ್ತಿದೆ. ಜನ ಎಲ್ಲೆಂದರಲ್ಲಿ ಕಸ ಬಿಸಾಡಿ ಹೋಗಿದ್ದಾರೆ.
ರಾಶಿಗಟ್ಟಲೇ ಕಸದ ರಾಶಿ.!
ಚಾಮುಂಡಿ ರಥೋತ್ಸವ ಹಿನ್ನೆಲೆ ಬೆಟ್ಟದ ಪಾದ ಮೆಟ್ಟಿಲು ಹತ್ತುವ ಜಾಗದಲ್ಲಿ ಹಲವಾರು ಮಂದಿ ಪ್ರಸಾದ ವಿತರಣೆ ಮಾಡ್ತಿದ್ದರು.. ಆದರೆ, ಪ್ರಸಾದ ಹಂಚಿದ ನಂತರ ಬಳಸಿದ್ದ ಪ್ರತಿಯೊಂದು ವಸ್ತುವನ್ನ ಬೇಕಾಬಿಟ್ಟಿ ಬಿಸಾಡಿ ಹೋಗಿದ್ದು, ಇದ್ರಿಂದ ರಾಶಿ ರಾಶಿ ಕಸ ಬಿದ್ದಿದೆ. ಅರಣ್ಯ ಪ್ರದೇಶಕ್ಕೆ ಸಾಕಷ್ಟು ಹಾನಿಯಾಗುವ ಆತಂಕ ಎದುರಾಗಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…