ಮೈಸೂರು: ಮೈಸೂರಿನ ಚಾಮುಂಡಿಬೆಟ್ಟ ನಾಡಿನ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಪ್ರಮುಖ ಸ್ಥಾನ ಪಡೆದಿದೆ. ನಾಡ ಅಧಿದೇವತೆ ದರ್ಶನಕ್ಕೆ ಪ್ರತಿನಿತ್ಯ ಸಾವಿರಾರು ಮಂದಿ ಆಗಮಿಸಿ ಪುನೀತ ರಾಗುತ್ತಾರೆ. ಆದ್ರೆ ಇಲ್ಲಿಗೆ ಬರೋ ಜನರು ತ್ಯಾಜ್ಯ ನಿರ್ವಹಣೆ ಹಾಗೂ ಶುಚಿತ್ವದ ಕಡೆ ಹೆಚ್ಚು ಗಮನ ಹರಿಸಲ್ಲ ಅನ್ನೋ ವಿಚಾರ ಇದೀಗ ಮತ್ತೆ ಸಾಬೀತಾಗಿದೆ.
ಚಾಮುಂಡಿ ಮಹಾ ರಥೋತ್ಸವದ ಭಾಗವಾಗಿ ಭಾನುವಾರ ಸಾವಿರಾರು ಮಂದಿ ಬೆಟ್ಟಕ್ಕೆ ಅಗಮಿಸಿದ್ದರು. ಈ ವೇಳೆ ಹಲವರು ಮೆಟ್ಟಿಲಿನಿಂದ ಹತ್ತಿ ಅಮ್ಮನ ದರ್ಶನ ಪಡೆದಿದ್ರು. ಆದ್ರೆ, ಬೆಟ್ಟದ ಪಾದದ ಬಳಿ ಅಶುಚಿತ್ವ ತಾಂಡವವಾಡುತ್ತಿದ್ದು, ಪರಿಸರಕ್ಕೆ ಧಕ್ಕೆ ಆಗುತ್ತಿದೆ. ಜನ ಎಲ್ಲೆಂದರಲ್ಲಿ ಕಸ ಬಿಸಾಡಿ ಹೋಗಿದ್ದಾರೆ.
ರಾಶಿಗಟ್ಟಲೇ ಕಸದ ರಾಶಿ.!
ಚಾಮುಂಡಿ ರಥೋತ್ಸವ ಹಿನ್ನೆಲೆ ಬೆಟ್ಟದ ಪಾದ ಮೆಟ್ಟಿಲು ಹತ್ತುವ ಜಾಗದಲ್ಲಿ ಹಲವಾರು ಮಂದಿ ಪ್ರಸಾದ ವಿತರಣೆ ಮಾಡ್ತಿದ್ದರು.. ಆದರೆ, ಪ್ರಸಾದ ಹಂಚಿದ ನಂತರ ಬಳಸಿದ್ದ ಪ್ರತಿಯೊಂದು ವಸ್ತುವನ್ನ ಬೇಕಾಬಿಟ್ಟಿ ಬಿಸಾಡಿ ಹೋಗಿದ್ದು, ಇದ್ರಿಂದ ರಾಶಿ ರಾಶಿ ಕಸ ಬಿದ್ದಿದೆ. ಅರಣ್ಯ ಪ್ರದೇಶಕ್ಕೆ ಸಾಕಷ್ಟು ಹಾನಿಯಾಗುವ ಆತಂಕ ಎದುರಾಗಿದೆ.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಇಂದು ಕೂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದು, ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್ ಹಾಕಲಾಗಿದೆ.…
ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…
ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…
ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…
ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…
ಅಮಿತ್ ಶಾ, ಅಜಿತ್ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರದ…