ಮೈಸೂರು: ಮೈಸೂರಿನ ಚಾಮುಂಡಿಬೆಟ್ಟ ನಾಡಿನ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಪ್ರಮುಖ ಸ್ಥಾನ ಪಡೆದಿದೆ. ನಾಡ ಅಧಿದೇವತೆ ದರ್ಶನಕ್ಕೆ ಪ್ರತಿನಿತ್ಯ ಸಾವಿರಾರು ಮಂದಿ ಆಗಮಿಸಿ ಪುನೀತ ರಾಗುತ್ತಾರೆ. ಆದ್ರೆ ಇಲ್ಲಿಗೆ ಬರೋ ಜನರು ತ್ಯಾಜ್ಯ ನಿರ್ವಹಣೆ ಹಾಗೂ ಶುಚಿತ್ವದ ಕಡೆ ಹೆಚ್ಚು ಗಮನ ಹರಿಸಲ್ಲ ಅನ್ನೋ ವಿಚಾರ ಇದೀಗ ಮತ್ತೆ ಸಾಬೀತಾಗಿದೆ.
ಚಾಮುಂಡಿ ಮಹಾ ರಥೋತ್ಸವದ ಭಾಗವಾಗಿ ಭಾನುವಾರ ಸಾವಿರಾರು ಮಂದಿ ಬೆಟ್ಟಕ್ಕೆ ಅಗಮಿಸಿದ್ದರು. ಈ ವೇಳೆ ಹಲವರು ಮೆಟ್ಟಿಲಿನಿಂದ ಹತ್ತಿ ಅಮ್ಮನ ದರ್ಶನ ಪಡೆದಿದ್ರು. ಆದ್ರೆ, ಬೆಟ್ಟದ ಪಾದದ ಬಳಿ ಅಶುಚಿತ್ವ ತಾಂಡವವಾಡುತ್ತಿದ್ದು, ಪರಿಸರಕ್ಕೆ ಧಕ್ಕೆ ಆಗುತ್ತಿದೆ. ಜನ ಎಲ್ಲೆಂದರಲ್ಲಿ ಕಸ ಬಿಸಾಡಿ ಹೋಗಿದ್ದಾರೆ.
ರಾಶಿಗಟ್ಟಲೇ ಕಸದ ರಾಶಿ.!
ಚಾಮುಂಡಿ ರಥೋತ್ಸವ ಹಿನ್ನೆಲೆ ಬೆಟ್ಟದ ಪಾದ ಮೆಟ್ಟಿಲು ಹತ್ತುವ ಜಾಗದಲ್ಲಿ ಹಲವಾರು ಮಂದಿ ಪ್ರಸಾದ ವಿತರಣೆ ಮಾಡ್ತಿದ್ದರು.. ಆದರೆ, ಪ್ರಸಾದ ಹಂಚಿದ ನಂತರ ಬಳಸಿದ್ದ ಪ್ರತಿಯೊಂದು ವಸ್ತುವನ್ನ ಬೇಕಾಬಿಟ್ಟಿ ಬಿಸಾಡಿ ಹೋಗಿದ್ದು, ಇದ್ರಿಂದ ರಾಶಿ ರಾಶಿ ಕಸ ಬಿದ್ದಿದೆ. ಅರಣ್ಯ ಪ್ರದೇಶಕ್ಕೆ ಸಾಕಷ್ಟು ಹಾನಿಯಾಗುವ ಆತಂಕ ಎದುರಾಗಿದೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…