ಮೈಸೂರು

ಹಸು, ಎಮ್ಮೆಗಳಿಗೆ ಚರ್ಮಗಂಟು ರೋಗ; ಉತ್ತರಕರ್ನಾಟಕ ಭಾಗದಲ್ಲಿ ಹೆಚ್ಚು

ಮೈಸೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿಸಹಸ್ರಾರು ಜಾನುವಾರುಗಳಲ್ಲಿಕಾಣಿಸಿಕೊಂಡಿರುವ ಚರ್ಮ ಗಂಟು ರೋಗದಿಂದ ಹಾಲಿನ ಉತ್ಪಾದನೆ ಇಳಿಕೆಯಾಗುವ ಆತಂಕ ಎದುರಾಗಿದೆ.

ರಾಜ್ಯದಲ್ಲಿಸುಮಾರು 3,076 ಜಾನುವಾರುಗಳಲ್ಲಿ ರೋಗ ಪತ್ತೆಯಾಗಿದೆ. ಈ ಕಾಯಿಲೆ ಹರಡದಂತೆ ತಡೆಯಲು ಈಗಾಗಲೇ 5 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. 25 ಲಕ್ಷ ಲಸಿಕೆ ಸಂಗ್ರಹವಿದ್ದು, ಅಕ್ಟೋಬರ್‌ ನವೆಂಬರ್‌  ತಿಂಗಳಲ್ಲಿ ಪೂರೈಸಲಾಗುವುದು. ಮೈಸೂರು ಜಿಲ್ಲೆಯ ಸರಗೂರು, ಕೆ ಆರ್‌ ನಗರ,  ಟಿ ನರಸೀಪುರ ದಲ್ಲಿ ಮಾತ್ರ ಗಂಟು ರೋಗ ಹಸು ಇದ್ದು ಅದಕ್ಕೆ ಲಸಿಕೆಯನ್ನು ನೀಡಲಾಗಿದೆ.ಮತ್ತು ಮರಣ ಹೊಂದಿದ ಹಸುವಿಗೆ ಪರಿಹಾರಕ್ಕಾಗಿ ಸರ್ಕಾರಕ್ಕೆ  ಅರ್ಜಿ ಕೂಡ ಸಲ್ಲಿಸಲಾಗಿದೆ. ಸದ್ಯದ ಪರಿಸ್ಥಿತಿಗೆ ಉಳಿದ ಯಾವುದೇ ತಾಲ್ಲೂಕಿನಲ್ಲಿ ಈ ಸಮಸ್ಯೆ ಇರುವುದಿಲ್ಲ ಎಂದು ಇಲಾಖೆಯ ಉಪ ನಿರ್ದೇಶಕ ಡಾ. ಬಿ ಎನ್‌ ಷಡಕ್ಷರ ಮೂರ್ತಿ ʼಆಂದೋಲನ ಪತ್ರಿಕೆಗೆʼತಿಳಿಸಿದರು.

ರೋಗ ಹರಡುವುದು ಹೇಗೆ : ಈ ವರ್ಷ ಮಳೆ ಹೆಚ್ಚಾದ ಪರಿಣಾಮ ನೊಣ, ಸೊಳ್ಳೆ ಹಾಗೂ ಉಣ್ಣೆ ಹುಳಗಳ ಉತ್ಪತ್ತಿ ಹೆಚ್ಚಾಗಿದೆ. ಇವು ಅನ್ಯ ರಾಜ್ಯಗಳಿಂದ ಹಾರಿ ಬಂದು ಈ ಕಾಯಿಲೆಯನ್ನು ಹರಡಿವೆ. ಅದೂ ಮಹಾರಾಷ್ಟ್ರ, ರಾಜಸ್ತಾನ, ಗುಜರಾತ್‌ನ ಗಡಿ ಜಿಲ್ಲೆಗಳಲ್ಲಿಈ ಕಾಯಿಲೆ ಹೆಚ್ಚು ಕಾಣಿಸಿಕೊಂಡಿದೆ ಇದರಿಂದ ಮುನ್ನೆಚ್ಚ್ರಿಕೆ ಕ್ರಮವಹಿಸಿದ್ದಲ್ಲಿ ಈ ರೋಗ ಹರಡುವುದಿಲ್ಲ

ಮೂರು ವರ್ಷಕ್ಕೊಮ್ಮೆ ಬರುವ ಗಂಟು ರೋಗ : ಒಮ್ಮೆ ಲಸಿಕೆ ಹಾಕಿದರೆ ಮೂರು ವರ್ಷದವರೆಗೆ ಚರ್ಮಗಂಟು ಕಾಯಿಲೆ ಬರದಂತೆ ತಡೆಯಬಹುದಾದ ರೋಗ ನಿರೋಧಕ ಶಕ್ತಿ ಹೊಂದಿದೆ. ಆದರೆ, ಕಾಯಿಲೆ ಬಂದ ಹಸುವಿಗೆ ಈ ಲಸಿಕೆ ಹಾಕಬಾರದು. ಏಕೆಂದರೆ ಒಂದು ಬಾರಿ ಕಾಯಿಲೆ ಬಂದರೆ ಆ ಹಸುವಿಗೆ ಮತ್ತೆ ಮೂರು ವರ್ಷಗಳ ಕಾಲ ಆ ಕಾಯಿಲೆ ಮರುಕಳುಹಿಸುವುದಿಲ್ಲ.

andolana

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

8 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

9 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

10 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

10 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

10 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

11 hours ago