ಮೈಸೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿಸಹಸ್ರಾರು ಜಾನುವಾರುಗಳಲ್ಲಿಕಾಣಿಸಿಕೊಂಡಿರುವ ಚರ್ಮ ಗಂಟು ರೋಗದಿಂದ ಹಾಲಿನ ಉತ್ಪಾದನೆ ಇಳಿಕೆಯಾಗುವ ಆತಂಕ ಎದುರಾಗಿದೆ.
ರಾಜ್ಯದಲ್ಲಿಸುಮಾರು 3,076 ಜಾನುವಾರುಗಳಲ್ಲಿ ರೋಗ ಪತ್ತೆಯಾಗಿದೆ. ಈ ಕಾಯಿಲೆ ಹರಡದಂತೆ ತಡೆಯಲು ಈಗಾಗಲೇ 5 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. 25 ಲಕ್ಷ ಲಸಿಕೆ ಸಂಗ್ರಹವಿದ್ದು, ಅಕ್ಟೋಬರ್ ನವೆಂಬರ್ ತಿಂಗಳಲ್ಲಿ ಪೂರೈಸಲಾಗುವುದು. ಮೈಸೂರು ಜಿಲ್ಲೆಯ ಸರಗೂರು, ಕೆ ಆರ್ ನಗರ, ಟಿ ನರಸೀಪುರ ದಲ್ಲಿ ಮಾತ್ರ ಗಂಟು ರೋಗ ಹಸು ಇದ್ದು ಅದಕ್ಕೆ ಲಸಿಕೆಯನ್ನು ನೀಡಲಾಗಿದೆ.ಮತ್ತು ಮರಣ ಹೊಂದಿದ ಹಸುವಿಗೆ ಪರಿಹಾರಕ್ಕಾಗಿ ಸರ್ಕಾರಕ್ಕೆ ಅರ್ಜಿ ಕೂಡ ಸಲ್ಲಿಸಲಾಗಿದೆ. ಸದ್ಯದ ಪರಿಸ್ಥಿತಿಗೆ ಉಳಿದ ಯಾವುದೇ ತಾಲ್ಲೂಕಿನಲ್ಲಿ ಈ ಸಮಸ್ಯೆ ಇರುವುದಿಲ್ಲ ಎಂದು ಇಲಾಖೆಯ ಉಪ ನಿರ್ದೇಶಕ ಡಾ. ಬಿ ಎನ್ ಷಡಕ್ಷರ ಮೂರ್ತಿ ʼಆಂದೋಲನ ಪತ್ರಿಕೆಗೆʼತಿಳಿಸಿದರು.
ರೋಗ ಹರಡುವುದು ಹೇಗೆ : ಈ ವರ್ಷ ಮಳೆ ಹೆಚ್ಚಾದ ಪರಿಣಾಮ ನೊಣ, ಸೊಳ್ಳೆ ಹಾಗೂ ಉಣ್ಣೆ ಹುಳಗಳ ಉತ್ಪತ್ತಿ ಹೆಚ್ಚಾಗಿದೆ. ಇವು ಅನ್ಯ ರಾಜ್ಯಗಳಿಂದ ಹಾರಿ ಬಂದು ಈ ಕಾಯಿಲೆಯನ್ನು ಹರಡಿವೆ. ಅದೂ ಮಹಾರಾಷ್ಟ್ರ, ರಾಜಸ್ತಾನ, ಗುಜರಾತ್ನ ಗಡಿ ಜಿಲ್ಲೆಗಳಲ್ಲಿಈ ಕಾಯಿಲೆ ಹೆಚ್ಚು ಕಾಣಿಸಿಕೊಂಡಿದೆ ಇದರಿಂದ ಮುನ್ನೆಚ್ಚ್ರಿಕೆ ಕ್ರಮವಹಿಸಿದ್ದಲ್ಲಿ ಈ ರೋಗ ಹರಡುವುದಿಲ್ಲ
ಮೂರು ವರ್ಷಕ್ಕೊಮ್ಮೆ ಬರುವ ಗಂಟು ರೋಗ : ಒಮ್ಮೆ ಲಸಿಕೆ ಹಾಕಿದರೆ ಮೂರು ವರ್ಷದವರೆಗೆ ಚರ್ಮಗಂಟು ಕಾಯಿಲೆ ಬರದಂತೆ ತಡೆಯಬಹುದಾದ ರೋಗ ನಿರೋಧಕ ಶಕ್ತಿ ಹೊಂದಿದೆ. ಆದರೆ, ಕಾಯಿಲೆ ಬಂದ ಹಸುವಿಗೆ ಈ ಲಸಿಕೆ ಹಾಕಬಾರದು. ಏಕೆಂದರೆ ಒಂದು ಬಾರಿ ಕಾಯಿಲೆ ಬಂದರೆ ಆ ಹಸುವಿಗೆ ಮತ್ತೆ ಮೂರು ವರ್ಷಗಳ ಕಾಲ ಆ ಕಾಯಿಲೆ ಮರುಕಳುಹಿಸುವುದಿಲ್ಲ.
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…
ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…
ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…